ಆರ್ಥಿಕವಾಗಿ ದಿವಾಳಿಯಾಗಿರುವ ಶ್ರೀಲಂಕಾದ ಸರ್ಕಾರ, ಬಾಕಿ ಇರುವ ವಿದೇಶಿ ಸಾಲ ಪಾವತಿಸದೇ ಅಮಾನತ್ತಿನಲ್ಲಿಡಲು ನಿರ್ಧರಿಸಿದೆ.ವಿದೇಶಿ ಸಾಲದ ಮೊತ್ತ ಹೆಚ್ಚಿರುವುದು ಆಮದು ವಹಿವಾಟಿನ ಮೇಲೂ ಪರಿಣಾಮ ಬೀರಿದ್ದು, ಜನತೆ ಆಹಾರ ಪದಾರ್ಥಗಳು, ಇಂಧನ, ಅಡುಗೆ ಅನಿಲ, ಔಷಧಗಳಿಗೆ ಸಾಲಿನಲ್ಲಿ ನಿಲ್ಲುವ ಸ್ಥಿತಿ ನಿರ್ಮಾಣವಾಗಿದೆ.