<p><strong>ಬೀಜಿಂಗ್:</strong> ವಾಸ್ತವ ನಿಯಂತ್ರಣ ರೇಖೆಯುದ್ದಕ್ಕೂ (ಎಲ್ಎಸಿ) ಶಾಂತಿ ನೆಲೆಸುವಂತೆ ಮಾಡಲು ಉಭಯ ದೇಶಗಳ ನಾಯಕರ ನಡುವಿನ ಒಮ್ಮತದ ನಿರ್ಧಾರವನ್ನು ಗೌಪ್ಯವಾಗಿಡಬಾರದು ಎಂದು ಚೀನಾಕ್ಕೆ ಭಾರತ ಸ್ಪಷ್ಟವಾಗಿ ಹೇಳಿದೆ.</p>.<p>ಪೂರ್ವ ಲಡಾಖ್ನ ಗಡಿಯಲ್ಲಿ ಸೇನೆಯನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳಬೇಕು. ಗಡಿ ಬಿಕ್ಕಟ್ಟಿನಿಂದಾಗಿ ಹಿನ್ನಡೆ ಅನುಭವಿಸಿದ್ದ ದ್ವಿಪಕ್ಷೀಯ ಸಂಬಂಧದ ಮರುನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಚೀನಾದಲ್ಲಿನ ಭಾರತದ ರಾಯಭಾರಿ ವಿಕ್ರಮ್ ಮಿಸ್ರಿ ಹೇಳಿದರು.</p>.<p>ಇಂಡಿಯನ್ ಕೌನ್ಸಿಲ್ ಆಫ್ ವರ್ಲ್ಡ್ ಅಫೇರ್ಸ್ (ಐಸಿಡಬ್ಲ್ಯುಎ) ಹಾಗೂ ಸಿಪಿಐಎಫ್ಎ (ಚೈನೀಸ್ ಪೀಪಲ್ಸ್ ಇನ್ಸ್ಟಿಟ್ಯೂಟ್ ಆಫ್ ಫಾರಿನ್ ಅಫೇರ್ಸ್) ಜಂಟಿಯಾಗಿ ಆಯೋಜಿಸಿದ್ದ ವರ್ಚುವಲ್ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಎಲ್ಎಸಿಯಲ್ಲಿ ಶಾಂತಿ–ಸ್ಥಿರತೆ ಸಾಧಿಸುವ ಸಂಬಂಧ ಉಭಯ ದೇಶಗಳ ನಾಯಕರು ಒಮ್ಮತಕ್ಕೆ ಬಂದು ಕೈಗೊಂಡ ನಿರ್ಧಾರಗಳನ್ನು ಚೀನಾ ಏಕೆ ನಿರ್ಲಕ್ಷಿಸುತ್ತಿದೆ’ ಎಂದು ಮಿಸ್ರಿ ಅವರು ಚೀನಾ ಅಧಿಕಾರಿಗಳನ್ನು ಪ್ರಶ್ನಿಸಿದರು.</p>.<p>ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಮೂಲಕ ಹಾಯ್ದು ಹೋಗಲಿರುವ ‘ಚೀನಾ–ಪಾಕಿಸ್ತಾನ ಆರ್ಥಿಕ ಕಾರಿಡಾರ್’ ಹಾಗೂ ‘ಬೆಲ್ಟ್ ರೋಡ್ ಇನಿಷಿಯೇಟಿವ್ (ಬಿಆರ್ಐ)’ ಯೋಜನೆಗಳನ್ನು ಮಿಸ್ರಿ ಪ್ರಸ್ತಾಪಿಸಿದರು.</p>.<p>‘ಇತರ ದೇಶಗಳೊಂದಿಗೆ ಸಮಾಲೋಚನೆ, ಒಪ್ಪಂದ ಇಲ್ಲದೆಯೇ ಯಾವುದೇ ದೇಶ ತನ್ನ ಕಾರ್ಯಸೂಚಿಯನ್ನು ಜಾರಿಗೊಳಿಸಲು ಮುಂದಾಗಬಾರದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀಜಿಂಗ್:</strong> ವಾಸ್ತವ ನಿಯಂತ್ರಣ ರೇಖೆಯುದ್ದಕ್ಕೂ (ಎಲ್ಎಸಿ) ಶಾಂತಿ ನೆಲೆಸುವಂತೆ ಮಾಡಲು ಉಭಯ ದೇಶಗಳ ನಾಯಕರ ನಡುವಿನ ಒಮ್ಮತದ ನಿರ್ಧಾರವನ್ನು ಗೌಪ್ಯವಾಗಿಡಬಾರದು ಎಂದು ಚೀನಾಕ್ಕೆ ಭಾರತ ಸ್ಪಷ್ಟವಾಗಿ ಹೇಳಿದೆ.</p>.<p>ಪೂರ್ವ ಲಡಾಖ್ನ ಗಡಿಯಲ್ಲಿ ಸೇನೆಯನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳಬೇಕು. ಗಡಿ ಬಿಕ್ಕಟ್ಟಿನಿಂದಾಗಿ ಹಿನ್ನಡೆ ಅನುಭವಿಸಿದ್ದ ದ್ವಿಪಕ್ಷೀಯ ಸಂಬಂಧದ ಮರುನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಚೀನಾದಲ್ಲಿನ ಭಾರತದ ರಾಯಭಾರಿ ವಿಕ್ರಮ್ ಮಿಸ್ರಿ ಹೇಳಿದರು.</p>.<p>ಇಂಡಿಯನ್ ಕೌನ್ಸಿಲ್ ಆಫ್ ವರ್ಲ್ಡ್ ಅಫೇರ್ಸ್ (ಐಸಿಡಬ್ಲ್ಯುಎ) ಹಾಗೂ ಸಿಪಿಐಎಫ್ಎ (ಚೈನೀಸ್ ಪೀಪಲ್ಸ್ ಇನ್ಸ್ಟಿಟ್ಯೂಟ್ ಆಫ್ ಫಾರಿನ್ ಅಫೇರ್ಸ್) ಜಂಟಿಯಾಗಿ ಆಯೋಜಿಸಿದ್ದ ವರ್ಚುವಲ್ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಎಲ್ಎಸಿಯಲ್ಲಿ ಶಾಂತಿ–ಸ್ಥಿರತೆ ಸಾಧಿಸುವ ಸಂಬಂಧ ಉಭಯ ದೇಶಗಳ ನಾಯಕರು ಒಮ್ಮತಕ್ಕೆ ಬಂದು ಕೈಗೊಂಡ ನಿರ್ಧಾರಗಳನ್ನು ಚೀನಾ ಏಕೆ ನಿರ್ಲಕ್ಷಿಸುತ್ತಿದೆ’ ಎಂದು ಮಿಸ್ರಿ ಅವರು ಚೀನಾ ಅಧಿಕಾರಿಗಳನ್ನು ಪ್ರಶ್ನಿಸಿದರು.</p>.<p>ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಮೂಲಕ ಹಾಯ್ದು ಹೋಗಲಿರುವ ‘ಚೀನಾ–ಪಾಕಿಸ್ತಾನ ಆರ್ಥಿಕ ಕಾರಿಡಾರ್’ ಹಾಗೂ ‘ಬೆಲ್ಟ್ ರೋಡ್ ಇನಿಷಿಯೇಟಿವ್ (ಬಿಆರ್ಐ)’ ಯೋಜನೆಗಳನ್ನು ಮಿಸ್ರಿ ಪ್ರಸ್ತಾಪಿಸಿದರು.</p>.<p>‘ಇತರ ದೇಶಗಳೊಂದಿಗೆ ಸಮಾಲೋಚನೆ, ಒಪ್ಪಂದ ಇಲ್ಲದೆಯೇ ಯಾವುದೇ ದೇಶ ತನ್ನ ಕಾರ್ಯಸೂಚಿಯನ್ನು ಜಾರಿಗೊಳಿಸಲು ಮುಂದಾಗಬಾರದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>