<p><strong>ಲಂಡನ್:</strong> ಬ್ರಿಟನ್ ರಾಜ 3ನೇ ಕಿಂಗ್ ಚಾರ್ಲ್ಸ್ ಮತ್ತು ಅವರ ಪತ್ನಿ, ರಾಣಿ ಕನ್ಸರ್ಟ್ ಕ್ಯಾಮಿಲ್ಲಾ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ.</p>.<p>ಉತ್ತರ ಇಂಗ್ಲೆಂಡ್ನ ಯಾರ್ಕ್ನಲ್ಲಿ ಬುಧವಾರ ನಡೆದ ಕಾರ್ಯಕ್ರಮದ ವೇಳೆ ರಾಜ ಮನೆತನದ ದಂಪತಿ ಮೇಲೆ ಮೊಟ್ಟೆ ಎಸೆತ ಪ್ರಕರಣ ನಡೆದಿದೆ.</p>.<p>ಚಾರ್ಲ್ಸ್ ದಂಪತಿಯನ್ನು ಸ್ವಾಗತಿಸಲು ರಾಜಮನೆತನದ ಮಿಕ್ಲೆಗೇಟ್ ಬಾರ್ನಲ್ಲಿ ಜನರು ಜಮಾಯಿಸಿದ್ದರು. ಈ ವೇಳೆ ಪ್ರತಿಭಟನಾಕಾರರೊಬ್ಬರು ಮೂರು ಮೊಟ್ಟೆಗಳನ್ನು ಎಸೆದರು. ಆದರೆ ಅದೃಷ್ಟವಶಾತ್ ಚಾರ್ಲ್ಸ್ ದಂಪತಿ ಮೇಲೆ ಮೊಟ್ಟೆ ಬೀಳಲಿಲ್ಲ.</p>.<p>ತಕ್ಷಣವೇ ಕಾರ್ಯಪ್ರವೃತರಾದ ಭದ್ರತಾ ಸಿಬ್ಬಂದಿ ಆತನನ್ನು ಬಂಧಿಸಿದರು.</p>.<p>ಈ ವೇಳೆ ಬಂಧನಕ್ಕೊಳಗಾದ ವ್ಯಕ್ತಿ, 'ಈ ದೇಶವನ್ನು ಗುಲಾಮರ ರಕ್ತದಿಂದ ನಿರ್ಮಿಸಲಾಗಿದೆ' ಎಂದು ಘೋಷಣೆ ಕೂಗಿದರು.</p>.<p>ಇದನ್ನೂ ಓದಿ:<a href="https://www.prajavani.net/world-news/villages-and-towns-in-ukraine-see-heavy-fighting-shelling-987257.html" itemprop="url">ಉಕ್ರೇನ್ ಮೇಲೆ ರಷ್ಯಾ ಶೆಲ್ ದಾಳಿ: 9 ಮಂದಿ ಸಾವು </a></p>.<p>ಯಾರ್ಕ್ಶೈರ್ ಭೇಟಿಯಲ್ಲಿರುವ ರಾಜ ಮನೆತನದ ದಂಪತಿ,ಇತ್ತೀಚೆಗೆ ನಿಧನರಾದರಾಣಿ 2ನೇ ಎಲಿಜಬೆತ್ ಪ್ರತಿಮೆಯನ್ನು ಅನಾವರಣಗೊಳಿಸುವುದು ಸೇರಿದಂತೆ ಅನೇಕ ಸಾಂಪ್ರದಾಯಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ನಿಗದಿಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಂಡನ್:</strong> ಬ್ರಿಟನ್ ರಾಜ 3ನೇ ಕಿಂಗ್ ಚಾರ್ಲ್ಸ್ ಮತ್ತು ಅವರ ಪತ್ನಿ, ರಾಣಿ ಕನ್ಸರ್ಟ್ ಕ್ಯಾಮಿಲ್ಲಾ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ.</p>.<p>ಉತ್ತರ ಇಂಗ್ಲೆಂಡ್ನ ಯಾರ್ಕ್ನಲ್ಲಿ ಬುಧವಾರ ನಡೆದ ಕಾರ್ಯಕ್ರಮದ ವೇಳೆ ರಾಜ ಮನೆತನದ ದಂಪತಿ ಮೇಲೆ ಮೊಟ್ಟೆ ಎಸೆತ ಪ್ರಕರಣ ನಡೆದಿದೆ.</p>.<p>ಚಾರ್ಲ್ಸ್ ದಂಪತಿಯನ್ನು ಸ್ವಾಗತಿಸಲು ರಾಜಮನೆತನದ ಮಿಕ್ಲೆಗೇಟ್ ಬಾರ್ನಲ್ಲಿ ಜನರು ಜಮಾಯಿಸಿದ್ದರು. ಈ ವೇಳೆ ಪ್ರತಿಭಟನಾಕಾರರೊಬ್ಬರು ಮೂರು ಮೊಟ್ಟೆಗಳನ್ನು ಎಸೆದರು. ಆದರೆ ಅದೃಷ್ಟವಶಾತ್ ಚಾರ್ಲ್ಸ್ ದಂಪತಿ ಮೇಲೆ ಮೊಟ್ಟೆ ಬೀಳಲಿಲ್ಲ.</p>.<p>ತಕ್ಷಣವೇ ಕಾರ್ಯಪ್ರವೃತರಾದ ಭದ್ರತಾ ಸಿಬ್ಬಂದಿ ಆತನನ್ನು ಬಂಧಿಸಿದರು.</p>.<p>ಈ ವೇಳೆ ಬಂಧನಕ್ಕೊಳಗಾದ ವ್ಯಕ್ತಿ, 'ಈ ದೇಶವನ್ನು ಗುಲಾಮರ ರಕ್ತದಿಂದ ನಿರ್ಮಿಸಲಾಗಿದೆ' ಎಂದು ಘೋಷಣೆ ಕೂಗಿದರು.</p>.<p>ಇದನ್ನೂ ಓದಿ:<a href="https://www.prajavani.net/world-news/villages-and-towns-in-ukraine-see-heavy-fighting-shelling-987257.html" itemprop="url">ಉಕ್ರೇನ್ ಮೇಲೆ ರಷ್ಯಾ ಶೆಲ್ ದಾಳಿ: 9 ಮಂದಿ ಸಾವು </a></p>.<p>ಯಾರ್ಕ್ಶೈರ್ ಭೇಟಿಯಲ್ಲಿರುವ ರಾಜ ಮನೆತನದ ದಂಪತಿ,ಇತ್ತೀಚೆಗೆ ನಿಧನರಾದರಾಣಿ 2ನೇ ಎಲಿಜಬೆತ್ ಪ್ರತಿಮೆಯನ್ನು ಅನಾವರಣಗೊಳಿಸುವುದು ಸೇರಿದಂತೆ ಅನೇಕ ಸಾಂಪ್ರದಾಯಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ನಿಗದಿಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>