<p><strong>ಕೈರೊ</strong>: ಸುಡಾನ್ನಲ್ಲಿ ಸೇನಾ ಕ್ಷಿಪ್ರಕ್ರಾಂತಿಯ ನಂತರ ಬಂಧನಕ್ಕೊಳಗಾಗಿದ್ದ ಪ್ರಧಾನಿ ಅಬ್ದಲ್ಲಾ ಹ್ಯಾಮ್ಡೊಕ್ ಮತ್ತು ಅವರ ಪತ್ನಿಗೆ ಖಾರ್ಟೂಮ್ನಲ್ಲಿರುವ ತಮ್ಮ ನಿವಾಸಕ್ಕೆ ಮರಳಲು ಅನುಮತಿ ನೀಡಲಾಗಿದೆ ಎಂದು ಮಿಲಿಟರಿ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.</p>.<p>ಅಂತರರಾಷ್ಟ್ರೀಯ ಸಮುದಾಯವು ಸೇನಾ ದಂಗೆಯನ್ನು ಖಂಡಿಸಿದ ಮೇಲೆ, ಜನರಲ್ ಅಬ್ದೆಲ್-ಫತ್ತಾಹ್ ಬುರ್ಹಾನ್ ಅವರು ಬಂಧಿತರನ್ನು ಬಿಡುಗಡೆ ಮಾಡಲು ಸಮ್ಮತಿಸಿದರು. ಇದಾದ ನಂತರ, ಪ್ರಧಾನಿ ಮತ್ತು ಅವರ ಪತ್ನಿಗೂ ಮನೆಗೆ ಮರಳಲು ಅನುಮತಿ ನೀಡಲಾಗಿದೆ.</p>.<p>ಹ್ಯಾಮ್ಡೋಕ್ ಮತ್ತು ಅವರ ಪತ್ನಿ ಯಾವುದೇ ನಿರ್ಬಂಧಗಳಿಲ್ಲದೇ ಸಂಚರಿಸಲು ಅಥವಾ ಕರೆ ಮಾಡಲು ಅವಕಾಶ ನೀಡಲಾಗಿದೆಯೇ ಎಂಬುದರ ಬಗ್ಗೆ ಅಧಿಕಾರಿ ಯಾವುದೇ ಮಾಹಿತಿ ನೀಡಲಿಲ್ಲ. ಆದರೆ, ಖಾರ್ಟೂಮ್ನಲ್ಲಿರುವ ಅವರ ಮನೆಯ ಸುತ್ತ ‘ಭಾರಿ ಭದ್ರತೆ ನಿಯೋಜಿಸಲಾಗಿದೆ‘ ಎಂದು ಅಧಿಕಾರಿ ತಿಳಿಸಿದರು.</p>.<p>ಈ ಮಧ್ಯೆ, ಕ್ರಿಪ್ರಕ್ರಾಂತಿ ವಿರೋಧಿಸಿ ಖಾರ್ಟೂಮ್ನ ಬೀದಿಗಳಲ್ಲಿ ಪ್ರತಿಭಟನೆಗಳು ನಡೆದಿದ್ದು, ಉದ್ರಿಕ್ತರನ್ನು ಚದುರಿಸಲು ಸೇನಾಪಡೆಗಳು ಗುಂಡು ಹಾರಿಸಿದಾಗ ಕನಿಷ್ಠ ನಾಲ್ವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೈರೊ</strong>: ಸುಡಾನ್ನಲ್ಲಿ ಸೇನಾ ಕ್ಷಿಪ್ರಕ್ರಾಂತಿಯ ನಂತರ ಬಂಧನಕ್ಕೊಳಗಾಗಿದ್ದ ಪ್ರಧಾನಿ ಅಬ್ದಲ್ಲಾ ಹ್ಯಾಮ್ಡೊಕ್ ಮತ್ತು ಅವರ ಪತ್ನಿಗೆ ಖಾರ್ಟೂಮ್ನಲ್ಲಿರುವ ತಮ್ಮ ನಿವಾಸಕ್ಕೆ ಮರಳಲು ಅನುಮತಿ ನೀಡಲಾಗಿದೆ ಎಂದು ಮಿಲಿಟರಿ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.</p>.<p>ಅಂತರರಾಷ್ಟ್ರೀಯ ಸಮುದಾಯವು ಸೇನಾ ದಂಗೆಯನ್ನು ಖಂಡಿಸಿದ ಮೇಲೆ, ಜನರಲ್ ಅಬ್ದೆಲ್-ಫತ್ತಾಹ್ ಬುರ್ಹಾನ್ ಅವರು ಬಂಧಿತರನ್ನು ಬಿಡುಗಡೆ ಮಾಡಲು ಸಮ್ಮತಿಸಿದರು. ಇದಾದ ನಂತರ, ಪ್ರಧಾನಿ ಮತ್ತು ಅವರ ಪತ್ನಿಗೂ ಮನೆಗೆ ಮರಳಲು ಅನುಮತಿ ನೀಡಲಾಗಿದೆ.</p>.<p>ಹ್ಯಾಮ್ಡೋಕ್ ಮತ್ತು ಅವರ ಪತ್ನಿ ಯಾವುದೇ ನಿರ್ಬಂಧಗಳಿಲ್ಲದೇ ಸಂಚರಿಸಲು ಅಥವಾ ಕರೆ ಮಾಡಲು ಅವಕಾಶ ನೀಡಲಾಗಿದೆಯೇ ಎಂಬುದರ ಬಗ್ಗೆ ಅಧಿಕಾರಿ ಯಾವುದೇ ಮಾಹಿತಿ ನೀಡಲಿಲ್ಲ. ಆದರೆ, ಖಾರ್ಟೂಮ್ನಲ್ಲಿರುವ ಅವರ ಮನೆಯ ಸುತ್ತ ‘ಭಾರಿ ಭದ್ರತೆ ನಿಯೋಜಿಸಲಾಗಿದೆ‘ ಎಂದು ಅಧಿಕಾರಿ ತಿಳಿಸಿದರು.</p>.<p>ಈ ಮಧ್ಯೆ, ಕ್ರಿಪ್ರಕ್ರಾಂತಿ ವಿರೋಧಿಸಿ ಖಾರ್ಟೂಮ್ನ ಬೀದಿಗಳಲ್ಲಿ ಪ್ರತಿಭಟನೆಗಳು ನಡೆದಿದ್ದು, ಉದ್ರಿಕ್ತರನ್ನು ಚದುರಿಸಲು ಸೇನಾಪಡೆಗಳು ಗುಂಡು ಹಾರಿಸಿದಾಗ ಕನಿಷ್ಠ ನಾಲ್ವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>