<p><strong>ನವದೆಹಲಿ:</strong> ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್ನಲ್ಲಿ ಭಾರತೀಯ ನಾಗರಿಕನ ಅಪಹರಣಕ್ಕೆ ಸಂಬಂಧಿಸಿದಂತೆ ತಾಲಿಬಾನ್ ಸರ್ಕಾರದೊಂದಿಗೆ ಭಾರತ ಸಂಪರ್ಕದಲ್ಲಿದೆ ಎಂದು ವರದಿಯಾಗಿದೆ.</p>.<p>'ನಾವು ಸಂಬಂಧಪಟ್ಟ ಎಲ್ಲರೊಂದಿಗೆ ಸಂಪರ್ಕದಲ್ಲಿದ್ದೇವೆ. ಈ ಘಟನೆ ಬಗ್ಗೆ ಸ್ಥಳೀಯ ಅಧಿಕಾರಿಗಳು ಕೈಗೊಂಡಿರುವ ತನಿಖೆ ಬಗ್ಗೆ ವರದಿಯನ್ನು ಗಮನಿಸಿದ್ದೇವೆ. ಪರಿಸ್ಥಿತಿಯ ಮೇಲೆ ನಿಗಾ ವಹಿಸುತ್ತಿದ್ದೇವೆ' ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ತಿಳಿಸಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/world-news/international-community-must-engage-with-taliban-incentivise-them-on-womens-rights-inclusive-govt-867252.html" itemprop="url">ತಾಲಿಬಾನ್ ಜೊತೆ ಮಾತುಕತೆ: ಪಾಕ್ ಪ್ರಧಾನಿ ಇಮ್ರಾನ್ ಖಾನ್ ಸಲಹೆ </a></p>.<p>ಬನ್ಸ್ರಿಲಾಲ್ ಅರೆಂದೆಹ್ ಅವರನ್ನು ಮಂಗಳವಾರ ಕಾಬೂಲ್ನಲ್ಲಿ ಬಂದೂಕು ತೋರಿಸಿ ಅಪಹರಿಸಲಾಗಿದೆ ಎಂದು ವರದಿಯಾಗಿದೆ.</p>.<p>ಅರೆಂದೆಹ್ ಭಾರತೀಯ ನಾಗರಿಕ ಎಂಬುದು ತಿಳಿದು ಬಂದಿದೆ. ಆದರೆ ಸರ್ಕಾರವು ಪೌರತ್ವ ಸ್ಥಿತಿಗತಿಯನ್ನು ಪರಿಶೀಲಿಸುತ್ತಿದೆ ಎಂದು ಬಾಗ್ಚಿ ಹೇಳಿದ್ದಾರೆ.</p>.<p>ಅರೆಂದೆಹ್ ಅವರ ಕುಟುಂಬವು ಹರಿಯಾಣದ ಫರಿದಾಬಾದ್ನಲ್ಲಿ ನೆಲೆಸಿದೆ. ಅವರು ಕಳೆದ ಎರಡುದಶಕದಿಂದಕಾಬೂಲ್ನಲ್ಲಿ ವ್ಯಾಪಾರದಲ್ಲಿ ನಿರತರಾಗಿದ್ದಾರೆ ಎಂಬುದು ತಿಳಿದು ಬಂದಿದೆ.</p>.<p>ಅಫ್ಗಾನಿಸ್ತಾನದಿಂದ ಭಾರತೀಯರನ್ನು ಕರೆತರುವ ಕಾರ್ಯಾಚರಣೆ ನಿಲುಗಡೆಗೊಂಡಿದೆ. ಕಾಬೂಲ್ ವಿಮಾನ ನಿಲ್ದಾಣದಲ್ಲಿ ವಿಮಾನಯಾನ ಪುನರಾರಂಭವಾದರೆ ಭಾರತೀಯರ ತೆರವು ಕಾರ್ಯಾಚರಣೆ ಸುಲಭವಾಗಲಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್ನಲ್ಲಿ ಭಾರತೀಯ ನಾಗರಿಕನ ಅಪಹರಣಕ್ಕೆ ಸಂಬಂಧಿಸಿದಂತೆ ತಾಲಿಬಾನ್ ಸರ್ಕಾರದೊಂದಿಗೆ ಭಾರತ ಸಂಪರ್ಕದಲ್ಲಿದೆ ಎಂದು ವರದಿಯಾಗಿದೆ.</p>.<p>'ನಾವು ಸಂಬಂಧಪಟ್ಟ ಎಲ್ಲರೊಂದಿಗೆ ಸಂಪರ್ಕದಲ್ಲಿದ್ದೇವೆ. ಈ ಘಟನೆ ಬಗ್ಗೆ ಸ್ಥಳೀಯ ಅಧಿಕಾರಿಗಳು ಕೈಗೊಂಡಿರುವ ತನಿಖೆ ಬಗ್ಗೆ ವರದಿಯನ್ನು ಗಮನಿಸಿದ್ದೇವೆ. ಪರಿಸ್ಥಿತಿಯ ಮೇಲೆ ನಿಗಾ ವಹಿಸುತ್ತಿದ್ದೇವೆ' ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ತಿಳಿಸಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/world-news/international-community-must-engage-with-taliban-incentivise-them-on-womens-rights-inclusive-govt-867252.html" itemprop="url">ತಾಲಿಬಾನ್ ಜೊತೆ ಮಾತುಕತೆ: ಪಾಕ್ ಪ್ರಧಾನಿ ಇಮ್ರಾನ್ ಖಾನ್ ಸಲಹೆ </a></p>.<p>ಬನ್ಸ್ರಿಲಾಲ್ ಅರೆಂದೆಹ್ ಅವರನ್ನು ಮಂಗಳವಾರ ಕಾಬೂಲ್ನಲ್ಲಿ ಬಂದೂಕು ತೋರಿಸಿ ಅಪಹರಿಸಲಾಗಿದೆ ಎಂದು ವರದಿಯಾಗಿದೆ.</p>.<p>ಅರೆಂದೆಹ್ ಭಾರತೀಯ ನಾಗರಿಕ ಎಂಬುದು ತಿಳಿದು ಬಂದಿದೆ. ಆದರೆ ಸರ್ಕಾರವು ಪೌರತ್ವ ಸ್ಥಿತಿಗತಿಯನ್ನು ಪರಿಶೀಲಿಸುತ್ತಿದೆ ಎಂದು ಬಾಗ್ಚಿ ಹೇಳಿದ್ದಾರೆ.</p>.<p>ಅರೆಂದೆಹ್ ಅವರ ಕುಟುಂಬವು ಹರಿಯಾಣದ ಫರಿದಾಬಾದ್ನಲ್ಲಿ ನೆಲೆಸಿದೆ. ಅವರು ಕಳೆದ ಎರಡುದಶಕದಿಂದಕಾಬೂಲ್ನಲ್ಲಿ ವ್ಯಾಪಾರದಲ್ಲಿ ನಿರತರಾಗಿದ್ದಾರೆ ಎಂಬುದು ತಿಳಿದು ಬಂದಿದೆ.</p>.<p>ಅಫ್ಗಾನಿಸ್ತಾನದಿಂದ ಭಾರತೀಯರನ್ನು ಕರೆತರುವ ಕಾರ್ಯಾಚರಣೆ ನಿಲುಗಡೆಗೊಂಡಿದೆ. ಕಾಬೂಲ್ ವಿಮಾನ ನಿಲ್ದಾಣದಲ್ಲಿ ವಿಮಾನಯಾನ ಪುನರಾರಂಭವಾದರೆ ಭಾರತೀಯರ ತೆರವು ಕಾರ್ಯಾಚರಣೆ ಸುಲಭವಾಗಲಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>