<p><strong>ನವದೆಹಲಿ: </strong>ಭಾರತದಲ್ಲಿ ಆಶ್ರಯ ಪಡೆದಿರುವ ಮ್ಯಾನ್ಮಾರ್ನ ಪೊಲೀಸ್ ಅಧಿಕಾರಿಗಳನ್ನು ಹಸ್ತಾಂತರಿಸುವಂತೆ ಮ್ಮಾನ್ಮಾರ್ ಕೋರಿದೆ.</p>.<p>ಫೆಬ್ರುವರಿ 1ರ ಮಿಲಿಟರಿ ದಂಗೆಯನ್ನು ವಿರೋಧಿಸಿ ಮ್ಯಾನ್ಮಾರ್ನಲ್ಲೆಡೆ ಹಲವು ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ. ಈ ಪ್ರತಿಭಟನೆಗಳಲ್ಲಾದ ಹಿಂಸಾಚಾರದಲ್ಲಿ ಹಲವಾರು ಮಂದಿ ಮೃತಪಟ್ಟಿದ್ದಾರೆ. ಮಿಲಿಟರಿ ಆಡಳಿತದಡಿ ಕೆಲಸ ಮಾಡಲು ಇಚ್ಛಿಸದ ಸುಮಾರು 30 ಮ್ಯಾನ್ಮಾರ್ ಪೊಲೀಸರು ಮತ್ತು ಅವರ ಕುಟುಂಬದವರು ಭಾರತದಲ್ಲಿ ಆಶ್ರಯ ಪಡೆದಿದ್ದಾರೆ.</p>.<p>‘ಉಭಯ ರಾಷ್ಟ್ರಗಳ ನಡುವಿನ ಸ್ನೇಹ ಸಂಬಂಧವನ್ನು ಹೀಗೆ ಮುಂದುವರಿಸುವ ನಿಟ್ಟಿನಲ್ಲಿ ಭಾರತದಲ್ಲಿರುವ 8 ಪೊಲೀಸ್ ಅಧಿಕಾರಿಗಳನ್ನು ಮ್ಯಾನ್ಮಾರ್ಗೆ ಹಸ್ತಾಂತರಿಸಬೇಕು’ ಎಂದು ಮಿಜೋರಾಂನ ಚಂಪೈ ಜಿಲ್ಲೆಯ ಉಪ ಆಯುಕ್ತರಾದ ಮರಿಯಾ ಸಿ.ಟಿ ಜುವಾಲಿ ಅವರಿಗೆ ಮ್ಯಾನ್ಮಾರ್ನ ಫಾಲಂನ ಹಿರಿಯ ಅಧಿಕಾರಿಯೊಬ್ಬರು ಪತ್ರದ ಮೂಲಕ ಮನವಿ ಮಾಡಿದ್ದಾರೆ.</p>.<p>ಈ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಮರಿಯಾ,‘ಈ ಕುರಿತು ಗೃಹ ಸಚಿವಾಲಯಕ್ಕೆ ತಿಳಿಸಲಾಗಿದೆ. ಗೃಹ ಸಚಿವಾಲಯ ನೀಡುವ ನಿರ್ದೇಶನದ ಮೇರೆಗೆ ಮುಂದಿನ ಕ್ರಮಕೈಗೊಳ್ಳಲಾಗುವುದು’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಭಾರತದಲ್ಲಿ ಆಶ್ರಯ ಪಡೆದಿರುವ ಮ್ಯಾನ್ಮಾರ್ನ ಪೊಲೀಸ್ ಅಧಿಕಾರಿಗಳನ್ನು ಹಸ್ತಾಂತರಿಸುವಂತೆ ಮ್ಮಾನ್ಮಾರ್ ಕೋರಿದೆ.</p>.<p>ಫೆಬ್ರುವರಿ 1ರ ಮಿಲಿಟರಿ ದಂಗೆಯನ್ನು ವಿರೋಧಿಸಿ ಮ್ಯಾನ್ಮಾರ್ನಲ್ಲೆಡೆ ಹಲವು ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ. ಈ ಪ್ರತಿಭಟನೆಗಳಲ್ಲಾದ ಹಿಂಸಾಚಾರದಲ್ಲಿ ಹಲವಾರು ಮಂದಿ ಮೃತಪಟ್ಟಿದ್ದಾರೆ. ಮಿಲಿಟರಿ ಆಡಳಿತದಡಿ ಕೆಲಸ ಮಾಡಲು ಇಚ್ಛಿಸದ ಸುಮಾರು 30 ಮ್ಯಾನ್ಮಾರ್ ಪೊಲೀಸರು ಮತ್ತು ಅವರ ಕುಟುಂಬದವರು ಭಾರತದಲ್ಲಿ ಆಶ್ರಯ ಪಡೆದಿದ್ದಾರೆ.</p>.<p>‘ಉಭಯ ರಾಷ್ಟ್ರಗಳ ನಡುವಿನ ಸ್ನೇಹ ಸಂಬಂಧವನ್ನು ಹೀಗೆ ಮುಂದುವರಿಸುವ ನಿಟ್ಟಿನಲ್ಲಿ ಭಾರತದಲ್ಲಿರುವ 8 ಪೊಲೀಸ್ ಅಧಿಕಾರಿಗಳನ್ನು ಮ್ಯಾನ್ಮಾರ್ಗೆ ಹಸ್ತಾಂತರಿಸಬೇಕು’ ಎಂದು ಮಿಜೋರಾಂನ ಚಂಪೈ ಜಿಲ್ಲೆಯ ಉಪ ಆಯುಕ್ತರಾದ ಮರಿಯಾ ಸಿ.ಟಿ ಜುವಾಲಿ ಅವರಿಗೆ ಮ್ಯಾನ್ಮಾರ್ನ ಫಾಲಂನ ಹಿರಿಯ ಅಧಿಕಾರಿಯೊಬ್ಬರು ಪತ್ರದ ಮೂಲಕ ಮನವಿ ಮಾಡಿದ್ದಾರೆ.</p>.<p>ಈ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಮರಿಯಾ,‘ಈ ಕುರಿತು ಗೃಹ ಸಚಿವಾಲಯಕ್ಕೆ ತಿಳಿಸಲಾಗಿದೆ. ಗೃಹ ಸಚಿವಾಲಯ ನೀಡುವ ನಿರ್ದೇಶನದ ಮೇರೆಗೆ ಮುಂದಿನ ಕ್ರಮಕೈಗೊಳ್ಳಲಾಗುವುದು’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>