ಫೆಬ್ರುವರಿ 1ರ ಮಿಲಿಟರಿ ದಂಗೆಯನ್ನು ವಿರೋಧಿಸಿ ಮ್ಯಾನ್ಮಾರ್ನಲ್ಲೆಡೆ ಹಲವು ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ. ಈ ಪ್ರತಿಭಟನೆಗಳಲ್ಲಾದ ಹಿಂಸಾಚಾರದಲ್ಲಿ ಹಲವಾರು ಮಂದಿ ಮೃತಪಟ್ಟಿದ್ದಾರೆ. ಮಿಲಿಟರಿ ಆಡಳಿತದಡಿ ಕೆಲಸ ಮಾಡಲು ಇಚ್ಛಿಸದ ಸುಮಾರು 30 ಮ್ಯಾನ್ಮಾರ್ ಪೊಲೀಸರು ಮತ್ತು ಅವರ ಕುಟುಂಬದವರು ಭಾರತದಲ್ಲಿ ಆಶ್ರಯ ಪಡೆದಿದ್ದಾರೆ.