ಏತನ್ಮಧ್ಯೆ, ದಶಕಗಳಿಂದ ಸರ್ಕಾರದ ವಿರುದ್ಧ ಹೋರಾಡುತ್ತಿರುವ ಜನಾಂಗೀಯ ಅಲ್ಪಸಂಖ್ಯಾತ ಬಂಡಾಯ ಗುಂಪನ್ನು ಪ್ರತಿನಿಧಿಸುವ ಕರೆನ್ ರಾಷ್ಟ್ರೀಯ ಒಕ್ಕೂಟವು ಸೇನಾ ಪಡೆಗಳ ದೌರ್ಜನ್ಯವನ್ನು ಖಂಡಿಸಿದೆ. ’ಈ ದಾಳಿಯಿಂದ ಮಕ್ಕಳು, ವಿದ್ಯಾರ್ಥಿಗಳು ಸೇರಿದಂತೆ ನೂರಾರು ಮಂದಿ ಮೃತಪಟ್ಟಿದ್ದಾರೆ. ಇದು ಶಾಲೆಗಳು, ವಸತಿ ಪ್ರದೇಶಗಳು ಮತ್ತು ಹಳ್ಳಿಗಳ ನಾಶಕ್ಕೆ ಕಾರಣವಾಗಿದೆ. ಈ ಭಯೋತ್ಪಾದಕ ಕೃತ್ಯಗಳು ಸ್ಪಷ್ಟವಾಗಿ ಸ್ಥಳೀಯ ಮತ್ತು ಅಂತರರಾಷ್ಟ್ರೀಯ ಕಾನೂನುಗಳ ಉಲ್ಲಂಘನೆಯಾಗಿದೆ‘ ಎಂದು ಗುಂಪು ಹೇಳಿಕೆಯಲ್ಲಿ ತಿಳಿಸಿದೆ.