<p class="title"><strong>ಸಮರ್ಕಂಡ್</strong>: ಶಾಂಘೈ ಸಹಕಾರ ಸಂಘಟನೆಯ (ಎಸ್ಸಿಒ) ವಾರ್ಷಿಕ ಶೃಂಗಸಭೆ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮಾತುಕತೆ ನಡೆಸಿದರು.</p>.<p>ರಷ್ಯಾವು ಉಕ್ರೇನ್ ವಿರುದ್ಧ ಸೇನಾ ಕಾರ್ಯಾಚರಣೆ ಕೈಗೊಂಡ ನಂತರ ಉಭಯ ನಾಯಕರ ನಡುವಿನ ಮೊದಲ ಸಭೆಯಲ್ಲಿ, ‘ಈಗ ಯುದ್ಧದ ಸಮಯವಲ್ಲ. ಸಂಘರ್ಷವನ್ನು ಕೊನೆಗೊಳಿಸಿ’ ಎಂದು ಮೋದಿ ಅವರು ಪುಟಿನ್ಗೆ ಹೇಳಿದ್ದಾರೆ.</p>.<p>ಇದಕ್ಕೆ ಪ್ರತಿಕ್ರಿಯಿಸಿ ಪುಟಿನ್, ‘ಉಕ್ರೇನ್ ಬಿಕ್ಕಟ್ಟಿನ ಸಂದರ್ಭದಲ್ಲಿ ನಿಮ್ಮ ನಿಲುವು ಮತ್ತು ಕಳವಳ ನನಗೆ ಅರ್ಥವಾಗುತ್ತದೆ. ಶೀಘ್ರ ಸಂಘರ್ಷ ಕೊನೆಗೊಳಿಸಲು ಪ್ರಯತ್ನ ಮಾಡುತ್ತೇವೆ’ ಎಂದು ತಿಳಿಸಿದರು.</p>.<p>ಉಭಯ ನಾಯಕರು ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಜಾಗತಿಕ ವಿಷಯ ಕುರಿತು ಚರ್ಚೆ ನಡೆಸಿದರು.</p>.<p><strong>ಎಸ್ಸಿಒಅಧ್ಯಕ್ಷ ಸ್ಥಾನ ಭಾರತಕ್ಕೆ ಹಸ್ತಾಂತರ</strong></p>.<p>ಸಮರ್ಕಂಡ್ನಲ್ಲಿ ಶುಕ್ರವಾರ ಉಜ್ಬೇಕಿಸ್ತಾನ ಎಸ್ಸಿಒ ಅಧ್ಯಕ್ಷ ಸ್ಥಾನವನ್ನು ಸರದಿ ಪ್ರಕಾರ ಭಾರತಕ್ಕೆ ಹಸ್ತಾಂತರಿಸಿದೆ.</p>.<p>ಉಜ್ಬೇಕಿಸ್ತಾನ ಅಧ್ಯಕ್ಷ ಶವ್ಕತ್ ಮಿರ್ಜಿಯೋವ್ ಅವರು ಸಮರ್ಕಂಡ್ನಲ್ಲಿ 22 ನೇ ಎಸ್ಸಿಒ ಶೃಂಗಸಭೆ ಅಧ್ಯಕ್ಷತೆ ವಹಿಸಿದ್ದರು.</p>.<p>‘2023ರಲ್ಲಿ ಭಾರತ ಎಸ್ಸಿಒ ಶೃಂಗಸಭೆ ಆಯೋಜಿಸುತ್ತದೆ. ಈ ಜವಾಬ್ದಾರಿಯುತ ಕಾರ್ಯಕ್ರಮ ಅನುಷ್ಠಾನದಲ್ಲಿ ಭಾರತಕ್ಕೆ ಸಹಾಯ ಮಾಡಲು ಕೈಲಾದಷ್ಟು ಪ್ರಯತ್ನಿಸುತ್ತೇವೆ’ ಎಂದು ಉಜ್ಬೇಕಿಸ್ತಾನ ವಿದೇಶಾಂಗ ಸಚಿವ ವ್ಲಾಡಿಮಿರ್ ನೊರೊವ್ ಟ್ವೀಟ್ ಮಾಡಿದ್ದಾರೆ.</p>.<p><strong>ಭಯೋತ್ಪಾದಕರ ಏಕ ಪಟ್ಟಿಗೆ ನಿರ್ಧಾರ<br />ಸಮರ್ಕಂಡ್ (ಪಿಟಿಐ):</strong>ಶಾಂಘೈ ಸಹಕಾರ ಸಂಘಟನೆಯ (ಎಸ್ಸಿಒ) ಸದಸ್ಯ ರಾಷ್ಟ್ರಗಳಲ್ಲಿ ನಿಷೇಧಿಸಲ್ಪಟ್ಟ ಭಯೋತ್ಪಾದಕರು, ಪ್ರತ್ಯೇಕತಾವಾದಿಗಳು ಮತ್ತು ಉಗ್ರವಾದಿ ಗುಂಪುಗಳ ಏಕ ಪಟ್ಟಿಯನ್ನು ಸಿದ್ಧಪಡಿಸಲು ಶುಕ್ರವಾರ ನಡೆದ ಶೃಂಗಸಭೆಯಲ್ಲಿ ನಿರ್ಧರಿಸಲಾಗಿದೆ. ನಿಷೇಧಿತ ಸಂಘಟನೆಗಳಿಂದ ಬರುವ ಬೆದರಿಕೆಗಳಿಗೆ ತಿರುಗೇಟು ನೀಡುವ ಉದ್ದೇಶದಿಂದ ಈ ಪಟ್ಟಿ ಸಿದ್ಧಪಡಿಸಲು ಯೋಜಿಸಲಾಗಿದೆ.ಈ ಸಂಬಂಧ ಶೃಂಗಸಭೆಯ ಅಂತ್ಯದಲ್ಲಿ ಜಂಟಿ ಹೇಳಿಕೆ ಬಿಡುಗಡೆ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಸಮರ್ಕಂಡ್</strong>: ಶಾಂಘೈ ಸಹಕಾರ ಸಂಘಟನೆಯ (ಎಸ್ಸಿಒ) ವಾರ್ಷಿಕ ಶೃಂಗಸಭೆ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮಾತುಕತೆ ನಡೆಸಿದರು.</p>.<p>ರಷ್ಯಾವು ಉಕ್ರೇನ್ ವಿರುದ್ಧ ಸೇನಾ ಕಾರ್ಯಾಚರಣೆ ಕೈಗೊಂಡ ನಂತರ ಉಭಯ ನಾಯಕರ ನಡುವಿನ ಮೊದಲ ಸಭೆಯಲ್ಲಿ, ‘ಈಗ ಯುದ್ಧದ ಸಮಯವಲ್ಲ. ಸಂಘರ್ಷವನ್ನು ಕೊನೆಗೊಳಿಸಿ’ ಎಂದು ಮೋದಿ ಅವರು ಪುಟಿನ್ಗೆ ಹೇಳಿದ್ದಾರೆ.</p>.<p>ಇದಕ್ಕೆ ಪ್ರತಿಕ್ರಿಯಿಸಿ ಪುಟಿನ್, ‘ಉಕ್ರೇನ್ ಬಿಕ್ಕಟ್ಟಿನ ಸಂದರ್ಭದಲ್ಲಿ ನಿಮ್ಮ ನಿಲುವು ಮತ್ತು ಕಳವಳ ನನಗೆ ಅರ್ಥವಾಗುತ್ತದೆ. ಶೀಘ್ರ ಸಂಘರ್ಷ ಕೊನೆಗೊಳಿಸಲು ಪ್ರಯತ್ನ ಮಾಡುತ್ತೇವೆ’ ಎಂದು ತಿಳಿಸಿದರು.</p>.<p>ಉಭಯ ನಾಯಕರು ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಜಾಗತಿಕ ವಿಷಯ ಕುರಿತು ಚರ್ಚೆ ನಡೆಸಿದರು.</p>.<p><strong>ಎಸ್ಸಿಒಅಧ್ಯಕ್ಷ ಸ್ಥಾನ ಭಾರತಕ್ಕೆ ಹಸ್ತಾಂತರ</strong></p>.<p>ಸಮರ್ಕಂಡ್ನಲ್ಲಿ ಶುಕ್ರವಾರ ಉಜ್ಬೇಕಿಸ್ತಾನ ಎಸ್ಸಿಒ ಅಧ್ಯಕ್ಷ ಸ್ಥಾನವನ್ನು ಸರದಿ ಪ್ರಕಾರ ಭಾರತಕ್ಕೆ ಹಸ್ತಾಂತರಿಸಿದೆ.</p>.<p>ಉಜ್ಬೇಕಿಸ್ತಾನ ಅಧ್ಯಕ್ಷ ಶವ್ಕತ್ ಮಿರ್ಜಿಯೋವ್ ಅವರು ಸಮರ್ಕಂಡ್ನಲ್ಲಿ 22 ನೇ ಎಸ್ಸಿಒ ಶೃಂಗಸಭೆ ಅಧ್ಯಕ್ಷತೆ ವಹಿಸಿದ್ದರು.</p>.<p>‘2023ರಲ್ಲಿ ಭಾರತ ಎಸ್ಸಿಒ ಶೃಂಗಸಭೆ ಆಯೋಜಿಸುತ್ತದೆ. ಈ ಜವಾಬ್ದಾರಿಯುತ ಕಾರ್ಯಕ್ರಮ ಅನುಷ್ಠಾನದಲ್ಲಿ ಭಾರತಕ್ಕೆ ಸಹಾಯ ಮಾಡಲು ಕೈಲಾದಷ್ಟು ಪ್ರಯತ್ನಿಸುತ್ತೇವೆ’ ಎಂದು ಉಜ್ಬೇಕಿಸ್ತಾನ ವಿದೇಶಾಂಗ ಸಚಿವ ವ್ಲಾಡಿಮಿರ್ ನೊರೊವ್ ಟ್ವೀಟ್ ಮಾಡಿದ್ದಾರೆ.</p>.<p><strong>ಭಯೋತ್ಪಾದಕರ ಏಕ ಪಟ್ಟಿಗೆ ನಿರ್ಧಾರ<br />ಸಮರ್ಕಂಡ್ (ಪಿಟಿಐ):</strong>ಶಾಂಘೈ ಸಹಕಾರ ಸಂಘಟನೆಯ (ಎಸ್ಸಿಒ) ಸದಸ್ಯ ರಾಷ್ಟ್ರಗಳಲ್ಲಿ ನಿಷೇಧಿಸಲ್ಪಟ್ಟ ಭಯೋತ್ಪಾದಕರು, ಪ್ರತ್ಯೇಕತಾವಾದಿಗಳು ಮತ್ತು ಉಗ್ರವಾದಿ ಗುಂಪುಗಳ ಏಕ ಪಟ್ಟಿಯನ್ನು ಸಿದ್ಧಪಡಿಸಲು ಶುಕ್ರವಾರ ನಡೆದ ಶೃಂಗಸಭೆಯಲ್ಲಿ ನಿರ್ಧರಿಸಲಾಗಿದೆ. ನಿಷೇಧಿತ ಸಂಘಟನೆಗಳಿಂದ ಬರುವ ಬೆದರಿಕೆಗಳಿಗೆ ತಿರುಗೇಟು ನೀಡುವ ಉದ್ದೇಶದಿಂದ ಈ ಪಟ್ಟಿ ಸಿದ್ಧಪಡಿಸಲು ಯೋಜಿಸಲಾಗಿದೆ.ಈ ಸಂಬಂಧ ಶೃಂಗಸಭೆಯ ಅಂತ್ಯದಲ್ಲಿ ಜಂಟಿ ಹೇಳಿಕೆ ಬಿಡುಗಡೆ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>