ಬಾಲಿ: ಉಕ್ರೇನ್ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳಲು ‘ಕದನ ವಿರಾಮ ಮತ್ತು ರಾಜತಾಂತ್ರಿಕತೆ’ ಹಾದಿಗೆ ಮರಳುವ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಕರೆ ನೀಡಿದರು.
ಇದೇ ವೇಳೆ, ರಷ್ಯಾದಿಂದ ರಿಯಾಯಿತಿ ದರದಲ್ಲಿ ತೈಲ ಮತ್ತು ಅನಿಲ ಆಮದು ಮಾಡುತ್ತಿರುವ ಬಗ್ಗೆ ಪಶ್ಚಿಮದ ದೇಶಗಳು ಅಸಮಾಧಾನ ವ್ಯಕ್ತಪಡಿಸುತ್ತಿರುವ ನಡುವೆಯೇ ಇಂಧನ ವಿತರಣೆಯ ಮೇಲಿನ ನಿರ್ಬಂಧಕ್ಕೆ ವಿರೋಧ ವ್ಯಕ್ತಪಡಿಸಿದರು.
ಜಿ–20 ಶೃಂಗವನ್ನು ಉದ್ದೇಶಿಸಿ ಮಾತನಾಡಿದ ಅವರು,‘ಹವಾಮಾನ ಬದಲಾವಣೆ, ಕೋವಿಡ್ ಸಾಂಕ್ರಾಮಿಕ, ಉಕ್ರೇನ್ನಲ್ಲಿನ ಬೆಳವಣಿಗೆ ಹಾಗೂ ಜಾಗತಿಕ ಸಮಸ್ಯೆಗಳುಜಗತ್ತಿನ ಸರ್ವನಾಶಕ್ಕೆ ಕಾರಣವಾಗಿದ್ದು, ಜಾಗತಿಕ ಪೂರೈಕೆ ಸರಪಳಿಯ ಮೇಲೆ ಗಂಭೀರ ಪರಿಣಾಮ ಬೀರಿದೆ ಎಂದು ಹೇಳಿದರು.
ಜಾಗತಿಕ ಬೆಳವಣಿಗೆಗೆ ಭಾರತದ ಇಂಧನ ಭದ್ರತೆ ಅತಿ ಮುಖ್ಯ ಎಂದು ಹೇಳಿದರು.