ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಕ್ರೇನ್ ಬಿಕ್ಕಟ್ಟು: ಕದನ ವಿರಾಮ ಕೈಗೊಂಡು ರಾಜತಾಂತ್ರಿಕತೆ ಹಾದಿಗೆ ಮರಳಿ –ಮೋದಿ

Last Updated 15 ನವೆಂಬರ್ 2022, 15:28 IST
ಅಕ್ಷರ ಗಾತ್ರ

ಬಾಲಿ: ಉಕ್ರೇನ್‌ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳಲು ‘ಕದನ ವಿರಾಮ ಮತ್ತು ರಾಜತಾಂತ್ರಿಕತೆ’ ಹಾದಿಗೆ ಮರಳುವ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಕರೆ ನೀಡಿದರು.

ಇದೇ ವೇಳೆ, ರಷ್ಯಾದಿಂದ ರಿಯಾಯಿತಿ ದರದಲ್ಲಿ ತೈಲ ಮತ್ತು ಅನಿಲ ಆಮದು ಮಾಡುತ್ತಿರುವ ಬಗ್ಗೆ ಪಶ್ಚಿಮದ ದೇಶಗಳು ಅಸಮಾಧಾನ ವ್ಯಕ್ತಪಡಿಸುತ್ತಿರುವ ನಡುವೆಯೇ ಇಂಧನ ವಿತರಣೆಯ ಮೇಲಿನ ನಿರ್ಬಂಧಕ್ಕೆ ವಿರೋಧ ವ್ಯಕ್ತಪಡಿಸಿದರು.

ಜಿ–20 ಶೃಂಗವನ್ನು ಉದ್ದೇಶಿಸಿ ಮಾತನಾಡಿದ ಅವರು,‘ಹವಾಮಾನ ಬದಲಾವಣೆ, ಕೋವಿಡ್‌ ಸಾಂಕ್ರಾಮಿಕ, ಉಕ್ರೇನ್‌ನಲ್ಲಿನ ಬೆಳವಣಿಗೆ ಹಾಗೂ ಜಾಗತಿಕ ಸಮಸ್ಯೆಗಳುಜಗತ್ತಿನ ಸರ್ವನಾಶಕ್ಕೆ ಕಾರಣವಾಗಿದ್ದು, ಜಾಗತಿಕ ಪೂರೈಕೆ ಸರಪಳಿಯ ಮೇಲೆ ಗಂಭೀರ ಪರಿಣಾಮ ಬೀರಿದೆ ಎಂದು ಹೇಳಿದರು.

ಜಾಗತಿಕ ಬೆಳವಣಿಗೆಗೆ ಭಾರತದ ಇಂಧನ ಭದ್ರತೆ ಅತಿ ಮುಖ್ಯ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT