ಕಠ್ಮಂಡು: ನೇಪಾಳದ ಪ್ರಧಾನಿ ಶೇರ್ ಬಹಾದ್ದೂರ್ ದೇವುಬಾ ಅವರು ಶುಕ್ರವಾರ 50 ಮಂದಿ ಪ್ರತಿನಿಧಿಗಳ ನಿಯೋಗದ ಜತೆ ಭಾರತದ ಪ್ರವಾಸ ಕೈಗೊಳ್ಳಲಿದ್ದಾರೆ. ಭಾರತ ಮತ್ತು ನೇಪಾಳದ ಬಾಂಧವ್ಯವನ್ನು ಮತ್ತಷ್ಟು ವೃದ್ಧಿಸುವ ನಿಟ್ಟಿನಲ್ಲಿ ಈ ಪ್ರವಾಸ ಕೈಗೊಂಡಿದ್ದಾರೆ. ಕಳೆದ ವರ್ಷದ ಜುಲೈನಲ್ಲಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ವಿದೇಶಿ ಪ್ರಯಾಣ ಇದಾಗಿದೆ.
ಈ ಭೇಟಿ ಸಂದರ್ಭದಲ್ಲಿ ನಿಯೋಗವು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಬಾಲ್ ಅವರನ್ನು ಭೇಟಿ ಮಾಡಲಿದೆ.ಈ ನಿಯೋಗದಲ್ಲಿ ವಿದೇಶಾಂಗ, ಜಲ ಸಂಪನ್ಮೂಲ, ಆರೋಗ್ಯ ಮತ್ತು ನಾಗರಿಕ, ಕೃಷಿ ಸೇರಿದಂತೆ ಇನ್ನಿತರ ಇಲಾಖೆಗಳ ಕಾರ್ಯದರ್ಶಿಗಳು ಇರಲಿದ್ದಾರೆ.