<p><strong>ಕಾಠ್ಮಂಡು: </strong>ನೇಪಾಳದ ರಾಷ್ಟ್ರಪತಿ ವಿದ್ಯಾ ದೇವಿ ಭಂಡಾರಿ ಅವರು ಶನಿವಾರ ನೇಪಾಳ ಸರ್ಕಾರವನ್ನು ವಿಸರ್ಜಿಸಿ ನವೆಂಬರ್ನಲ್ಲಿ ಸಾರ್ವತ್ರಿಕ ಚುನಾವಣೆ ನಿಗದಿ ಮಾಡಿದ್ದಾರೆ.</p>.<p>ಉಸ್ತುವಾರಿ ಪ್ರಧಾನಿ ಕೆ.ಪಿ. ಶರ್ಮಾ ಒಲಿಯಾಗಲಿ, ವಿರೋಧ ಪಕ್ಷದ ನಾಯಕರಾಗಲಿ ಶುಕ್ರವಾರ ನಿಗದಿಪಡಿಸಿದ ಗಡುವಿನೊಳಗೆ ಸರ್ಕಾರ ರಚನೆಗೆ ಬಹುಮತ ಸಾಬೀತುಪಡಿಸುವಲ್ಲಿ ವಿಫಲವಾಗಿರುವ ಬೆನ್ನಲ್ಲೇ ರಾಷ್ಟ್ರಪತಿ ಅವರಿಂದ ಈ ಅಚ್ಚರಿಯ ಪ್ರಕಟಣೆ ಹೊರಬಿದ್ದಿದೆ.</p>.<p>‘ರಾಷ್ಟ್ರಪತಿಗಳು ಜನಪ್ರತಿನಿಧಿಗಳ ಸಭೆಯನ್ನು ವಿಸರ್ಜಿಸಿದ್ದಾರೆ. ಮೊದಲ ಹಂತದ ಸಾರ್ವತ್ರಿಕ ಚುನಾವಣೆಯನ್ನು ನವೆಂಬರ್ 12 ರಂದು ಮತ್ತು ಎರಡನೇ ಹಂತದ ಚುನಾವಣೆಯನ್ನು ನವೆಂಬರ್ 19 ರಂದು ನಡೆಸಲು ಆದೇಶಿಸಲಾಗಿದೆ’ಎಂದು ಮಧ್ಯರಾತ್ರಿ ಹೊರಡಿಸಿರುವ ರಾಷ್ಟ್ರಪತಿಗಳ ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<p>ಉಸ್ತುವಾರಿ ಪ್ರಧಾನಿ ಒಲಿ ನೇತೃತ್ವದ ಕ್ಯಾಬಿನೆಟ್ನ ಶಿಫಾರಸಿನ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 2020 ರ ಡಿಸೆಂಬರ್ನಲ್ಲಿ ಒಲಿ ನೇತೃತ್ವದ ಕ್ಯಾಬಿನೆಟ್ ಮಾಡಿದ್ದ ಸಂಸತ್ತಿನ ವಿಸರ್ಜನೆಯ ನಿರ್ಧಾರದ ವಿರುದ್ಧ ಭಾರೀ ಪ್ರತಿಭಟನೆ ಭುಗಿಲೆದ್ದಿತ್ತು. ಬಳಿಕ, ಫೆಬ್ರವರಿಯಲ್ಲಿ ಆ ಆದೇಶ ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು.</p>.<p>ಈ ಬೆಳವಣಿಗೆ ಬಗ್ಗೆ ರಾಜಕೀಯ ಪಕ್ಷಗಳಿಂದ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.</p>.<p>ನೇಪಾಳವು ಕೊರೊನಾ ಸಾಂಕ್ರಾಮಿಕ ರೋಗದ ಎರಡನೇ ಅಲೆಯಲ್ಲಿ ತತ್ತರಿಸುತ್ತಿರುವ ನಡುವೆ ಈ ರಾಜಕೀಯ ಮೇಲಾಟಗಳು ಅಲ್ಲಿನ ಜನರನ್ನು ಹೈರಾಣಾಗಿಸಿದೆ. ಪ್ರತಿದಿನ ಅಲ್ಲಿ ಸರಾಸರಿ 8,207 ಹೊಸ ಪ್ರಕರಣಗಳು ದಾಖಲಾಗುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಠ್ಮಂಡು: </strong>ನೇಪಾಳದ ರಾಷ್ಟ್ರಪತಿ ವಿದ್ಯಾ ದೇವಿ ಭಂಡಾರಿ ಅವರು ಶನಿವಾರ ನೇಪಾಳ ಸರ್ಕಾರವನ್ನು ವಿಸರ್ಜಿಸಿ ನವೆಂಬರ್ನಲ್ಲಿ ಸಾರ್ವತ್ರಿಕ ಚುನಾವಣೆ ನಿಗದಿ ಮಾಡಿದ್ದಾರೆ.</p>.<p>ಉಸ್ತುವಾರಿ ಪ್ರಧಾನಿ ಕೆ.ಪಿ. ಶರ್ಮಾ ಒಲಿಯಾಗಲಿ, ವಿರೋಧ ಪಕ್ಷದ ನಾಯಕರಾಗಲಿ ಶುಕ್ರವಾರ ನಿಗದಿಪಡಿಸಿದ ಗಡುವಿನೊಳಗೆ ಸರ್ಕಾರ ರಚನೆಗೆ ಬಹುಮತ ಸಾಬೀತುಪಡಿಸುವಲ್ಲಿ ವಿಫಲವಾಗಿರುವ ಬೆನ್ನಲ್ಲೇ ರಾಷ್ಟ್ರಪತಿ ಅವರಿಂದ ಈ ಅಚ್ಚರಿಯ ಪ್ರಕಟಣೆ ಹೊರಬಿದ್ದಿದೆ.</p>.<p>‘ರಾಷ್ಟ್ರಪತಿಗಳು ಜನಪ್ರತಿನಿಧಿಗಳ ಸಭೆಯನ್ನು ವಿಸರ್ಜಿಸಿದ್ದಾರೆ. ಮೊದಲ ಹಂತದ ಸಾರ್ವತ್ರಿಕ ಚುನಾವಣೆಯನ್ನು ನವೆಂಬರ್ 12 ರಂದು ಮತ್ತು ಎರಡನೇ ಹಂತದ ಚುನಾವಣೆಯನ್ನು ನವೆಂಬರ್ 19 ರಂದು ನಡೆಸಲು ಆದೇಶಿಸಲಾಗಿದೆ’ಎಂದು ಮಧ್ಯರಾತ್ರಿ ಹೊರಡಿಸಿರುವ ರಾಷ್ಟ್ರಪತಿಗಳ ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<p>ಉಸ್ತುವಾರಿ ಪ್ರಧಾನಿ ಒಲಿ ನೇತೃತ್ವದ ಕ್ಯಾಬಿನೆಟ್ನ ಶಿಫಾರಸಿನ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 2020 ರ ಡಿಸೆಂಬರ್ನಲ್ಲಿ ಒಲಿ ನೇತೃತ್ವದ ಕ್ಯಾಬಿನೆಟ್ ಮಾಡಿದ್ದ ಸಂಸತ್ತಿನ ವಿಸರ್ಜನೆಯ ನಿರ್ಧಾರದ ವಿರುದ್ಧ ಭಾರೀ ಪ್ರತಿಭಟನೆ ಭುಗಿಲೆದ್ದಿತ್ತು. ಬಳಿಕ, ಫೆಬ್ರವರಿಯಲ್ಲಿ ಆ ಆದೇಶ ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು.</p>.<p>ಈ ಬೆಳವಣಿಗೆ ಬಗ್ಗೆ ರಾಜಕೀಯ ಪಕ್ಷಗಳಿಂದ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.</p>.<p>ನೇಪಾಳವು ಕೊರೊನಾ ಸಾಂಕ್ರಾಮಿಕ ರೋಗದ ಎರಡನೇ ಅಲೆಯಲ್ಲಿ ತತ್ತರಿಸುತ್ತಿರುವ ನಡುವೆ ಈ ರಾಜಕೀಯ ಮೇಲಾಟಗಳು ಅಲ್ಲಿನ ಜನರನ್ನು ಹೈರಾಣಾಗಿಸಿದೆ. ಪ್ರತಿದಿನ ಅಲ್ಲಿ ಸರಾಸರಿ 8,207 ಹೊಸ ಪ್ರಕರಣಗಳು ದಾಖಲಾಗುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>