<p><strong>ಕಠ್ಮಂಡು:</strong> ಪ್ರಧಾನಿಕೆ.ಪಿ.ಶರ್ಮಾ ಒಲಿ ನೇತೃತ್ವದ ನೇಪಾಳ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ಷೋಕಾಸ್ ನೋಟಿಸ್ ನೀಡಿದೆ.</p>.<p>ತುರ್ತಾಗಿ ಸಂಸತ್ ವಿಸರ್ಜಿಸಿರುವ ಕುರಿತು ಲಿಖಿತ ವಿವರಣೆ ನೀಡುವಂತೆಯೂ ನ್ಯಾಯಾಲಯ ಸೂಚಿಸಿದೆ.</p>.<p>‘ಸಂಸತ್ ವಿಸರ್ಜಿಸಿರುವ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ರಿಟ್ ಅರ್ಜಿಗಳು ಸಲ್ಲಿಕೆಯಾಗಿದ್ದು,ಮುಖ್ಯ ನ್ಯಾಯಮೂರ್ತಿ ಚೋಲೆಂದ್ರ ಶಂಷರ್ ರಾಣಾ ನೇತೃತ್ವದ ಐವರು ಸದಸ್ಯರನ್ನೊಳಗೊಂಡ ಸಾಂವಿಧಾನಿಕ ಪೀಠವು ಶುಕ್ರವಾರ ಇವುಗಳ ವಿಚಾರಣೆ ನಡೆಸಿತು’ ಎಂದು ರಿಪಬ್ಲಿಕಾ ದಿನಪತ್ರಿಕೆ ವರದಿ ಮಾಡಿದೆ.</p>.<p>ನ್ಯಾಯಮೂರ್ತಿಗಳಾದ ವಿಶ್ವಾಂಭರ ಪ್ರಸಾದ್ ಶ್ರೇಷ್ಠ, ತೇಜ್ ಬಹದ್ದೂರ್ ಕೆ.ಸಿ, ಅನಿಲ್ ಕುಮಾರ್ ಸಿನ್ಹಾ ಮತ್ತು ಹರಿಕೃಷ್ಣ ಕರ್ಕಿ ಅವರಿದ್ದ ಪೀಠವು ಲಿಖಿತ ವಿವರಣೆ ನೀಡುವಂತೆ ರಾಷ್ಟ್ರಪತಿ ಹಾಗೂ ಪ್ರಧಾನಿಯವರ ಕಾರ್ಯಾಲಯ ಮತ್ತು ಸಚಿವರ ಪರಿಷತ್ತಿಗೆ ನಿರ್ದೇಶಿಸಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/world-news/nepals-president-dissolves-parliament-788951.html" target="_blank">ನೇಪಾಳ ಸಂಸತ್ ವಿಸರ್ಜನೆ: ಎರಡು ಹಂತದಲ್ಲಿ ಚುನಾವಣೆ</a></p>.<p>ಸಂಸತ್ ವಿಸರ್ಜಿಸುವಂತೆ ಕೋರಿ ರಾಷ್ಟ್ರಪತಿಗಳಿಗೆ ಸಲ್ಲಿಸಿದ್ದ ಶಿಫಾರಸು ಪತ್ರದ ಮೂಲ ಪ್ರತಿಯನ್ನೂ ನ್ಯಾಯಾಲಯಕ್ಕೆ ಸಲ್ಲಿಸಬೇಕೆಂದೂ ಪೀಠವು ಸರ್ಕಾರಕ್ಕೆ ಆದೇಶಿಸಿದೆ.</p>.<p>ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ 13 ರಿಟ್ ಅರ್ಜಿಗಳನ್ನು ರಾಣಾ ನೇತೃತ್ವದ ಏಕಸದಸ್ಯ ಪೀಠವು ಬುಧವಾರ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿತ್ತು.</p>.<p>‘ತಮ್ಮ ವಿರೋಧಿ ಪಾಳಯದ ನಾಯಕ ಪುಷ್ಪ ಕಮಲ್ ದಹಾಲ್ (ಪ್ರಚಂಡ) ಅವರಿಗೆ ಆಪ್ತರಾಗಿದ್ದ ಏಳು ಮಂದಿ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಸಂಪುಟ ವಿಸ್ತರಣೆಗೆ ಮುಂದಾಗಿರುವ ಒಲಿ ಅವರು ಈ ಸಂಬಂಧ ಚರ್ಚಿಸಲು ಸಂಪುಟ ಸಭೆ ಕರೆದಿದ್ದಾರೆ’ ಎಂದೂ ಪತ್ರಿಕೆಯ ವರದಿಯಲ್ಲಿ ವಿವರಿಸಲಾಗಿದೆ.</p>.<p>ಗುರುವಾರ ನಡೆದಿದ್ದ ಸ್ಥಾಯಿ ಸಮಿತಿ ಸಭೆಯಲ್ಲಿ ತಮ್ಮ ಆಪ್ತರ ಜೊತೆ ಚರ್ಚಿಸಿದ್ದ ಒಲಿ ಅವರು ನೇಪಾಳ ಕಮ್ಯುನಿಸ್ಟ್ ಪಕ್ಷದ (ಎನ್ಸಿಪಿ) ಕಾರ್ಯಕಾರಿ ಮುಖ್ಯಸ್ಥ ಸ್ಥಾನದಿಂದ ಪ್ರಚಂಡ ಅವರನ್ನು ವಜಾಗೊಳಿಸಿದ್ದರು.</p>.<p>ಇದಕ್ಕೂ ಮುನ್ನ ಎನ್ಸಿಪಿಯ ಮತ್ತೊಂದು ಬಣವು ಸಂಸದೀಯ ನಾಯಕ ಸ್ಥಾನದಿಂದ ಒಲಿ ಅವರನ್ನು ಕೆಳಗಿಳಿಸಿ ಆ ಸ್ಥಾನಕ್ಕೆ ಪ್ರಚಂಡ ಅವರನ್ನು ಆಯ್ಕೆಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಠ್ಮಂಡು:</strong> ಪ್ರಧಾನಿಕೆ.ಪಿ.ಶರ್ಮಾ ಒಲಿ ನೇತೃತ್ವದ ನೇಪಾಳ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ಷೋಕಾಸ್ ನೋಟಿಸ್ ನೀಡಿದೆ.</p>.<p>ತುರ್ತಾಗಿ ಸಂಸತ್ ವಿಸರ್ಜಿಸಿರುವ ಕುರಿತು ಲಿಖಿತ ವಿವರಣೆ ನೀಡುವಂತೆಯೂ ನ್ಯಾಯಾಲಯ ಸೂಚಿಸಿದೆ.</p>.<p>‘ಸಂಸತ್ ವಿಸರ್ಜಿಸಿರುವ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ರಿಟ್ ಅರ್ಜಿಗಳು ಸಲ್ಲಿಕೆಯಾಗಿದ್ದು,ಮುಖ್ಯ ನ್ಯಾಯಮೂರ್ತಿ ಚೋಲೆಂದ್ರ ಶಂಷರ್ ರಾಣಾ ನೇತೃತ್ವದ ಐವರು ಸದಸ್ಯರನ್ನೊಳಗೊಂಡ ಸಾಂವಿಧಾನಿಕ ಪೀಠವು ಶುಕ್ರವಾರ ಇವುಗಳ ವಿಚಾರಣೆ ನಡೆಸಿತು’ ಎಂದು ರಿಪಬ್ಲಿಕಾ ದಿನಪತ್ರಿಕೆ ವರದಿ ಮಾಡಿದೆ.</p>.<p>ನ್ಯಾಯಮೂರ್ತಿಗಳಾದ ವಿಶ್ವಾಂಭರ ಪ್ರಸಾದ್ ಶ್ರೇಷ್ಠ, ತೇಜ್ ಬಹದ್ದೂರ್ ಕೆ.ಸಿ, ಅನಿಲ್ ಕುಮಾರ್ ಸಿನ್ಹಾ ಮತ್ತು ಹರಿಕೃಷ್ಣ ಕರ್ಕಿ ಅವರಿದ್ದ ಪೀಠವು ಲಿಖಿತ ವಿವರಣೆ ನೀಡುವಂತೆ ರಾಷ್ಟ್ರಪತಿ ಹಾಗೂ ಪ್ರಧಾನಿಯವರ ಕಾರ್ಯಾಲಯ ಮತ್ತು ಸಚಿವರ ಪರಿಷತ್ತಿಗೆ ನಿರ್ದೇಶಿಸಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/world-news/nepals-president-dissolves-parliament-788951.html" target="_blank">ನೇಪಾಳ ಸಂಸತ್ ವಿಸರ್ಜನೆ: ಎರಡು ಹಂತದಲ್ಲಿ ಚುನಾವಣೆ</a></p>.<p>ಸಂಸತ್ ವಿಸರ್ಜಿಸುವಂತೆ ಕೋರಿ ರಾಷ್ಟ್ರಪತಿಗಳಿಗೆ ಸಲ್ಲಿಸಿದ್ದ ಶಿಫಾರಸು ಪತ್ರದ ಮೂಲ ಪ್ರತಿಯನ್ನೂ ನ್ಯಾಯಾಲಯಕ್ಕೆ ಸಲ್ಲಿಸಬೇಕೆಂದೂ ಪೀಠವು ಸರ್ಕಾರಕ್ಕೆ ಆದೇಶಿಸಿದೆ.</p>.<p>ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ 13 ರಿಟ್ ಅರ್ಜಿಗಳನ್ನು ರಾಣಾ ನೇತೃತ್ವದ ಏಕಸದಸ್ಯ ಪೀಠವು ಬುಧವಾರ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿತ್ತು.</p>.<p>‘ತಮ್ಮ ವಿರೋಧಿ ಪಾಳಯದ ನಾಯಕ ಪುಷ್ಪ ಕಮಲ್ ದಹಾಲ್ (ಪ್ರಚಂಡ) ಅವರಿಗೆ ಆಪ್ತರಾಗಿದ್ದ ಏಳು ಮಂದಿ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಸಂಪುಟ ವಿಸ್ತರಣೆಗೆ ಮುಂದಾಗಿರುವ ಒಲಿ ಅವರು ಈ ಸಂಬಂಧ ಚರ್ಚಿಸಲು ಸಂಪುಟ ಸಭೆ ಕರೆದಿದ್ದಾರೆ’ ಎಂದೂ ಪತ್ರಿಕೆಯ ವರದಿಯಲ್ಲಿ ವಿವರಿಸಲಾಗಿದೆ.</p>.<p>ಗುರುವಾರ ನಡೆದಿದ್ದ ಸ್ಥಾಯಿ ಸಮಿತಿ ಸಭೆಯಲ್ಲಿ ತಮ್ಮ ಆಪ್ತರ ಜೊತೆ ಚರ್ಚಿಸಿದ್ದ ಒಲಿ ಅವರು ನೇಪಾಳ ಕಮ್ಯುನಿಸ್ಟ್ ಪಕ್ಷದ (ಎನ್ಸಿಪಿ) ಕಾರ್ಯಕಾರಿ ಮುಖ್ಯಸ್ಥ ಸ್ಥಾನದಿಂದ ಪ್ರಚಂಡ ಅವರನ್ನು ವಜಾಗೊಳಿಸಿದ್ದರು.</p>.<p>ಇದಕ್ಕೂ ಮುನ್ನ ಎನ್ಸಿಪಿಯ ಮತ್ತೊಂದು ಬಣವು ಸಂಸದೀಯ ನಾಯಕ ಸ್ಥಾನದಿಂದ ಒಲಿ ಅವರನ್ನು ಕೆಳಗಿಳಿಸಿ ಆ ಸ್ಥಾನಕ್ಕೆ ಪ್ರಚಂಡ ಅವರನ್ನು ಆಯ್ಕೆಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>