<p><strong>ಕಠ್ಮಂಡು: </strong>ನೇಪಾಳದ ನೂತನ ಪ್ರಧಾನಿ ನೇಪಾಳ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶೇರ್ ಬಹದ್ದೂರ್ ದೇವುಬಾ ಅವರು ಭಾನುವಾರ ಸಂಸತ್ತಿನ ಕೆಳಮನೆಯಲ್ಲಿ ವಿಶ್ವಾಸ ಮತ ಪಡೆಯುವಲ್ಲಿ ಯಶಸ್ವಿಯಾದರು.</p>.<p>275 ಸದಸ್ಯರ ಸದನದಲ್ಲಿ ದೇವುಬಾ ಅವರು 165 ಮತಗಳನ್ನು ಗಳಿಸಿದ್ದಾರೆ ಎಂದು ‘ಹಿಮಾಲಯನ್ ಟೈಮ್ಸ್’ ವರದಿ ಮಾಡಿದೆ.</p>.<p>ಮತದಾನ ಪ್ರಕ್ರಿಯೆಯಲ್ಲಿ ಒಟ್ಟು 249 ಸದಸ್ಯರು ಭಾಗವಹಿಸಿದ್ದರು ಮತ್ತು ಅವರಲ್ಲಿ 83 ಮಂದಿ ದೇವುಬಾ ಅವರ ವಿರುದ್ಧ ಮತ ಚಲಾಯಿಸಿದರೆ, ಒಬ್ಬರು ತಟಸ್ಥರಾಗಿದ್ದರು. ಸಂಸತ್ತಿನ ವಿಶ್ವಾಸವನ್ನು ಗಳಿಸಲು ದೇವುಬಾ ಅವರಿಗೆ ಒಟ್ಟು 136 ಮತಗಳು ಬೇಕಾಗಿದ್ದವು.</p>.<p>ನೇಪಾಳದ ಪ್ರಧಾನಿಯಾಗಿ ಶೇರ್ ಬಹದ್ದೂರ್ ದೇವುಬಾ ಅವರು ಜುಲೈ 13ರಂದು ಅಧಿಕಾರ ಸ್ವೀಕರಿಸಿದ್ದರು. ಸಂವಿಧಾನದ ವಿಧಿ 75 (6)ರ ಅನ್ವಯ ಅಧ್ಯಕ್ಷೆ ವಿದ್ಯಾದೇವಿ ಭಂಡಾರಿ ಅವರು ದೇವುಬಾ ಅವರನ್ನು ನೇಮಕ ಮಾಡಿದ್ದರು.</p>.<p>ನೇಪಾಳದ ಸುಪ್ರೀಂ ಕೋರ್ಟ್, ಐದು ತಿಂಗಳೊಳಗೆ ಎರಡನೇ ಬಾರಿಗೆ ವಿಸರ್ಜಿತ ಸಂಸತ್ತನ್ನು ಮರುಸ್ಥಾಪಿಸಿ, ಶೇರ್ ಬಹದ್ದೂರ್ ದೇವುಬಾ ಅವರನ್ನು ಪ್ರಧಾನಿಯನ್ನಾಗಿ ನೇಮಕ ಮಾಡಬೇಕೆಂದು ಜುಲೈ 12ರಂದು ಆದೇಶ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಠ್ಮಂಡು: </strong>ನೇಪಾಳದ ನೂತನ ಪ್ರಧಾನಿ ನೇಪಾಳ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶೇರ್ ಬಹದ್ದೂರ್ ದೇವುಬಾ ಅವರು ಭಾನುವಾರ ಸಂಸತ್ತಿನ ಕೆಳಮನೆಯಲ್ಲಿ ವಿಶ್ವಾಸ ಮತ ಪಡೆಯುವಲ್ಲಿ ಯಶಸ್ವಿಯಾದರು.</p>.<p>275 ಸದಸ್ಯರ ಸದನದಲ್ಲಿ ದೇವುಬಾ ಅವರು 165 ಮತಗಳನ್ನು ಗಳಿಸಿದ್ದಾರೆ ಎಂದು ‘ಹಿಮಾಲಯನ್ ಟೈಮ್ಸ್’ ವರದಿ ಮಾಡಿದೆ.</p>.<p>ಮತದಾನ ಪ್ರಕ್ರಿಯೆಯಲ್ಲಿ ಒಟ್ಟು 249 ಸದಸ್ಯರು ಭಾಗವಹಿಸಿದ್ದರು ಮತ್ತು ಅವರಲ್ಲಿ 83 ಮಂದಿ ದೇವುಬಾ ಅವರ ವಿರುದ್ಧ ಮತ ಚಲಾಯಿಸಿದರೆ, ಒಬ್ಬರು ತಟಸ್ಥರಾಗಿದ್ದರು. ಸಂಸತ್ತಿನ ವಿಶ್ವಾಸವನ್ನು ಗಳಿಸಲು ದೇವುಬಾ ಅವರಿಗೆ ಒಟ್ಟು 136 ಮತಗಳು ಬೇಕಾಗಿದ್ದವು.</p>.<p>ನೇಪಾಳದ ಪ್ರಧಾನಿಯಾಗಿ ಶೇರ್ ಬಹದ್ದೂರ್ ದೇವುಬಾ ಅವರು ಜುಲೈ 13ರಂದು ಅಧಿಕಾರ ಸ್ವೀಕರಿಸಿದ್ದರು. ಸಂವಿಧಾನದ ವಿಧಿ 75 (6)ರ ಅನ್ವಯ ಅಧ್ಯಕ್ಷೆ ವಿದ್ಯಾದೇವಿ ಭಂಡಾರಿ ಅವರು ದೇವುಬಾ ಅವರನ್ನು ನೇಮಕ ಮಾಡಿದ್ದರು.</p>.<p>ನೇಪಾಳದ ಸುಪ್ರೀಂ ಕೋರ್ಟ್, ಐದು ತಿಂಗಳೊಳಗೆ ಎರಡನೇ ಬಾರಿಗೆ ವಿಸರ್ಜಿತ ಸಂಸತ್ತನ್ನು ಮರುಸ್ಥಾಪಿಸಿ, ಶೇರ್ ಬಹದ್ದೂರ್ ದೇವುಬಾ ಅವರನ್ನು ಪ್ರಧಾನಿಯನ್ನಾಗಿ ನೇಮಕ ಮಾಡಬೇಕೆಂದು ಜುಲೈ 12ರಂದು ಆದೇಶ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>