<p><strong>ಕಠ್ಮಂಡು:</strong> ರಾಷ್ಟ್ರದ ಮೊದಲ ಪೌರತ್ವ ತಿದ್ದುಪಡಿ ಮಸೂದೆಯನ್ನು ನೇಪಾಳದ ಸಂಸತ್ತು ಬುಧವಾರ ಅಂಗೀಕರಿಸಿದೆ.</p>.<p>2020ರಿಂದ ಸಂಸತ್ತಿನಲ್ಲಿ ಈ ವಿಚಾರವಾಗಿ ಚರ್ಚೆ ನಡೆದಿತ್ತು. ಆದರೆ ರಾಜಕೀಯ ಪಕ್ಷಗಳು ಒಮ್ಮತದ ನಿರ್ಣಯಕ್ಕೆ ಬರುವಲ್ಲಿ ವಿಫಲಗೊಂಡಿದ್ದವು. ಮುಖ್ಯವಾಗಿ ನೇಪಾಳಿ ವ್ಯಕ್ತಿಯನ್ನು ಮದುವೆಯಾದ ವಿದೇಶಿ ಮಹಿಳೆಗೆ ಸ್ವಾಭಾವಿಕ ಪೌರತ್ವ ಪಡೆಯಲು 7 ವರ್ಷಗಳನ್ನು ಕಾಯಬೇಕು ಎಂಬ ವಿಚಾರವಾಗಿ ಭಿನ್ನಾಭಿಪ್ರಾಯಗಳು ವ್ಯಕ್ತಗೊಂಡಿದ್ದವು.</p>.<p>ನೇಪಾಳದ ಗೃಹ ಸಚಿವ ಬಾಲ ಕೃಷ್ಣ ಖಾಂಡ್ ಅವರು ನೇಪಾಳದ ಮೊದಲ 2022ರ ಪೌರತ್ವ ತಿದ್ದುಪಡಿ ಮಸೂದೆಯನ್ನು ಮಂಡಿಸಿದರು. ಇದು 2006ರ ಪೌರತ್ವ ಮಸೂದೆಯ ತಿದ್ದುಪಡಿಯಾಗಿದೆ.</p>.<p>ಪೋಷಕರು ನೇಪಾಳದ ನಾಗರಿಕರೇ ಆಗಿದ್ದರೂ ಸಾವಿರಾರು ಮಂದಿ ಪೌರತ್ವದಿಂದ ವಂಚಿತರಾಗಿದ್ದಾರೆ. ಇದರಿಂದ ಶಿಕ್ಷಣ ಸೇರಿದಂತೆ ಮತ್ತಿತರ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಮಸೂದೆ ತಿದ್ದುಪಡಿ ಮೂಲಕ ಇಂತವರಿಗೆ ಅನುಕೂಲ ಮಾಡಿಕೊಡಬೇಕು ಎಂದು ಬಾಲ ಕೃಷ್ಣ ಖಾಂಡ್ ಸಂಸತ್ತಿನಲ್ಲಿ ಮನವಿ ಮಾಡಿದರು. ಮೇಲ್ಮನೆಯಲ್ಲಿ ಅಡೆತಡೆಗಳಿಲ್ಲದೆ ಮಸೂದೆ ಅಂಗೀಕಾರವಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>2018ರಲ್ಲಿ ಅಂದಿನ ಪ್ರಧಾನಿ ಕೆ.ಪಿ.ಶರ್ಮಾ ಒಲಿ ಸರ್ಕಾರ ಈ ಮಸೂದೆಯನ್ನು ಸಂಸತ್ತಿನಲ್ಲಿ ದಾಖಲಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಠ್ಮಂಡು:</strong> ರಾಷ್ಟ್ರದ ಮೊದಲ ಪೌರತ್ವ ತಿದ್ದುಪಡಿ ಮಸೂದೆಯನ್ನು ನೇಪಾಳದ ಸಂಸತ್ತು ಬುಧವಾರ ಅಂಗೀಕರಿಸಿದೆ.</p>.<p>2020ರಿಂದ ಸಂಸತ್ತಿನಲ್ಲಿ ಈ ವಿಚಾರವಾಗಿ ಚರ್ಚೆ ನಡೆದಿತ್ತು. ಆದರೆ ರಾಜಕೀಯ ಪಕ್ಷಗಳು ಒಮ್ಮತದ ನಿರ್ಣಯಕ್ಕೆ ಬರುವಲ್ಲಿ ವಿಫಲಗೊಂಡಿದ್ದವು. ಮುಖ್ಯವಾಗಿ ನೇಪಾಳಿ ವ್ಯಕ್ತಿಯನ್ನು ಮದುವೆಯಾದ ವಿದೇಶಿ ಮಹಿಳೆಗೆ ಸ್ವಾಭಾವಿಕ ಪೌರತ್ವ ಪಡೆಯಲು 7 ವರ್ಷಗಳನ್ನು ಕಾಯಬೇಕು ಎಂಬ ವಿಚಾರವಾಗಿ ಭಿನ್ನಾಭಿಪ್ರಾಯಗಳು ವ್ಯಕ್ತಗೊಂಡಿದ್ದವು.</p>.<p>ನೇಪಾಳದ ಗೃಹ ಸಚಿವ ಬಾಲ ಕೃಷ್ಣ ಖಾಂಡ್ ಅವರು ನೇಪಾಳದ ಮೊದಲ 2022ರ ಪೌರತ್ವ ತಿದ್ದುಪಡಿ ಮಸೂದೆಯನ್ನು ಮಂಡಿಸಿದರು. ಇದು 2006ರ ಪೌರತ್ವ ಮಸೂದೆಯ ತಿದ್ದುಪಡಿಯಾಗಿದೆ.</p>.<p>ಪೋಷಕರು ನೇಪಾಳದ ನಾಗರಿಕರೇ ಆಗಿದ್ದರೂ ಸಾವಿರಾರು ಮಂದಿ ಪೌರತ್ವದಿಂದ ವಂಚಿತರಾಗಿದ್ದಾರೆ. ಇದರಿಂದ ಶಿಕ್ಷಣ ಸೇರಿದಂತೆ ಮತ್ತಿತರ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಮಸೂದೆ ತಿದ್ದುಪಡಿ ಮೂಲಕ ಇಂತವರಿಗೆ ಅನುಕೂಲ ಮಾಡಿಕೊಡಬೇಕು ಎಂದು ಬಾಲ ಕೃಷ್ಣ ಖಾಂಡ್ ಸಂಸತ್ತಿನಲ್ಲಿ ಮನವಿ ಮಾಡಿದರು. ಮೇಲ್ಮನೆಯಲ್ಲಿ ಅಡೆತಡೆಗಳಿಲ್ಲದೆ ಮಸೂದೆ ಅಂಗೀಕಾರವಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>2018ರಲ್ಲಿ ಅಂದಿನ ಪ್ರಧಾನಿ ಕೆ.ಪಿ.ಶರ್ಮಾ ಒಲಿ ಸರ್ಕಾರ ಈ ಮಸೂದೆಯನ್ನು ಸಂಸತ್ತಿನಲ್ಲಿ ದಾಖಲಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>