ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದ ಆರ್ಥಿಕ ಸಂಕಷ್ಟ ಪರಿಹಾರಕ್ಕೆ ಸಹಕರಿಸಿ: ಪ್ರಧಾನಿ ವಿಕ್ರಮಸಿಂಘೆ ಮನವಿ

ಶ್ರೀಲಂಕಾ: ವಿರೋಧ ಪಕ್ಷಗಳಿಗೆ ಪ್ರಧಾನಿ ವಿಕ್ರಮಸಿಂಘೆ ಮನವಿ
Last Updated 14 ಮೇ 2022, 11:02 IST
ಅಕ್ಷರ ಗಾತ್ರ

ಕೊಲಂಬೊ: ದೇಶದ ಆರ್ಥಿಕತೆಯನ್ನು ಸರಿದಾರಿಗೆ ತರುವ ಸಲುವಾಗಿ ರಾಜಕಾರಣವನ್ನು ಬದಿಗಿಟ್ಟು ಸರ್ವಪಕ್ಷಗಳನ್ನು ಒಳಗೊಂಡ ಸರ್ಕಾರ ರಚನೆಗೆ ಕೈಜೋಡಿಸುವಂತೆ ಶ್ರೀಲಂಕಾದ ನೂತನ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರು ವಿರೋಧ ಪಕ್ಷದ ನಾಯಕರಲ್ಲಿಮನವಿ ಮಾಡಿದ್ದಾರೆ.

ನೂತನ ಪ್ರಧಾನಿ ಆಯ್ಕೆಯು ಅಸಾಂವಿಧಾನಿಕ ಮತ್ತು ಪ್ರಧಾನಿ ವಿಕ್ರಮಸಿಂಘೆ ಅವರಿಗೆ ಬೆಂಬಲ ನೀಡುವುದಿಲ್ಲ ಎಂದು ವಿರೋಧ ಪಕ್ಷಗಳು ಘೋಷಿಸಿದ ಬೆನ್ನಲ್ಲೇ, ರಾನಿಲ್ ವಿಕ್ರಮಸಿಂಘೆ ಅವರಿಂದ ಈ ಹೇಳಿಕೆ ಹೊರಬಿದ್ದಿದೆ ಎಂದು ಮಾಧ್ಯಮಗಳು ಶನಿವಾರ ವರದಿ ಮಾಡಿವೆ.

ಈ ಸಂಬಂಧ, ಪ್ರಮುಖ ವಿರೋಧ ಪಕ್ಷ ಎಸ್‌ಜೆಬಿ ನಾಯಕ ಸಜಿತ್ ಪ್ರೇಮದಾಸ ಅವರಿಗೆ ವಿಕ್ರಮಸಿಂಘೆ ಪತ್ರ ಬರೆದಿದ್ದಾರೆ ಎಂದು ಆನ್‌ಲೈನ್‌ ಪತ್ರಿಕೆ ಡೈಲಿ ಮಿರರ್ ವರದಿ ಮಾಡಿದೆ.

'ಆರ್ಥಿಕ ಬಿಕ್ಕಟ್ಟಿನಿಂದಾಗಿ ದೇಶದ ಜನತೆ ಎದುರಿಸುತ್ತಿರುವ ಸವಾಲುಗಳನ್ನು ನಿವಾರಿಸಲು ಮತ್ತು ವಿದೇಶದ ನೆರವು ಪಡೆಯುವ ಮೂಲಕ ದೇಶದಲ್ಲಿ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಸ್ಥಿರತೆಯನ್ನು ಕಾಪಾಡಲು ಎಸ್‌ಜೆಬಿ ನೆರವು ನೀಡಬೇಕು. ರಾಜಕೀಯವನ್ನು ಬದಿಗಿಟ್ಟು ಸರ್ವಪಕ್ಷಗಳ ಸರ್ಕಾರ ರಚನೆಗೆ ನೆರವಾಗಬೇಕು' ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

1948ರಲ್ಲಿ ಸ್ವತಂತ್ರಗೊಂಡ ಶ್ರೀಲಂಕಾವು ಇದೇ ಮೊಟ್ಟ ಮೊದಲ ಬಾರಿಗೆ ವಿದೇಶಿ ವಿನಿಮಯದ ಕೊರತೆಯಿಂದಾಗಿ ಹಿಂದೆಂದೂ ಕಂಡು ಕೇಳರಿಯದಷ್ಟು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT