<p class="title"><strong>ಕೊಲಂಬೊ: </strong>ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್ ಅವರು ಇಲ್ಲಿ ಮಾಲ್ಡೀವ್ಸ್ ನ ರಕ್ಷಣಾ ಸಚಿವ ಮರಿಯಾ ದಿದಿ ಅವರ ಜೊತೆಗೆ ಕಡಲ ತೀರದ ಸುರಕ್ಷತೆ ಕುರಿತಂತೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.</p>.<p class="title">ಒಳನಾಡು, ಕಡಲ ತೀರದ ಸುರಕ್ಷತೆ ಕುರಿತಂತೆ ಭಾರತ, ಶ್ರೀಲಂಕಾ ಮತ್ತು ಮಾಲ್ಡೀವ್ಸ್ ನಡುವಣ ತ್ರಿಪಕ್ಷೀಯ ಮಾತುಕತೆಯ ಭಾಗವಾಗಿ ಡೊಭಾಲ್ ಮತ್ತು ದಿದಿ ಅವರ ನಡುವೆ ಸಂವಾದ ನಡೆಯಿತು.</p>.<p class="title">ಕಡಲ ತೀರದ ಸುರಕ್ಷತೆ ಕುರಿತು ನಾಲ್ಕನೇ ರಾಷ್ಟ್ರೀಯ ಭದ್ರತಾ ಸಲಹೆಗಾರರ ನಡುವಣ ತ್ರಿಪಕ್ಷೀಯ ಮಾತುಕತೆಯನ್ನು ಶ್ರೀಲಂಕಾವು, ಭಾರತ ಮತ್ತು ಮಾಲ್ಡೀವ್ಸ್ ಸಹಯೋಗದಲ್ಲಿ ಆಯೋಜಿಸಿದೆ. ಆರು ವರ್ಷಗಳ ನಂತರ ಈ ಸಭೆ ನಡೆಯುತ್ತಿದೆ. ಕಳೆದ ಬಾರಿ 2014ರಲ್ಲಿ ಸಭೆಯು ನವದೆಹಲಿಯಲ್ಲಿ ನಡೆದಿತ್ತು.</p>.<p>ಈ ಕುರಿತು ಟ್ವೀಟ್ ಮಾಡಿರುವ ಮಾಲ್ಡೀವ್ಸ್ನ ಭಾರತೀಯ ರಾಯಭಾರ ಕಚೇರಿಯು, ಉಭಯ ದೇಶಗಳ ನಡುವೆ ಕಡಲ ತೀರದ ಸುರಕ್ಷತೆ ಕುರಿತು ಸುದೀರ್ಘವಾದ ಚರ್ಚೆ ನಡೆದಿದೆ ಎಂದು ತಿಳಿಸಿದೆ. ಡೊಭಾಲ್ ಶುಕ್ರವಾರ ಇಲ್ಲಿಗೆ ಆಗಮಿಸಿದ್ದರು.</p>.<p>ಭಾರತೀಯ ಸಮುದ್ರ ತೀರದ ರಾಷ್ಟ್ರಗಳ ನಡುವಿನ ಉತ್ತಮ ಬಾಂಧವ್ಯ ರೂಪಿಸುವ ಕ್ರಮವಾಗಿ ರಾಷ್ಟ್ರೀಯ ಭದ್ರತಾ ಸಲಹೆಗಾರರ ಹಂತದ ಸಭೆ ಪರಿಣಾಮಕಾರಿಯಾದ ವೇದಿಕೆಯಾಗಿದೆ ಎಂದು ವಿದೇಶಾಂಗ ಸಚಿವಾಲಯ ಗುರುವಾರ ಹೇಳಿತ್ತು.</p>.<p>ಶ್ರೀಮಂತ ಸಂಪನ್ಮೂಲವಿರುವ ಭಾರತ ಫೆಸಿಫಿಕ್ ವಲಯದಲ್ಲಿ ತನ್ನ ಪ್ರಭಾವ ಬೀರಲು ಚೀನಾ ಯತ್ನ ನಡೆಸಿರುವ ಹಂತದಲ್ಲಿಯೇ ಈ ಸಭೆ ನಡೆದಿರುವುದು ಗಮನಾರ್ಹವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಕೊಲಂಬೊ: </strong>ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್ ಅವರು ಇಲ್ಲಿ ಮಾಲ್ಡೀವ್ಸ್ ನ ರಕ್ಷಣಾ ಸಚಿವ ಮರಿಯಾ ದಿದಿ ಅವರ ಜೊತೆಗೆ ಕಡಲ ತೀರದ ಸುರಕ್ಷತೆ ಕುರಿತಂತೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.</p>.<p class="title">ಒಳನಾಡು, ಕಡಲ ತೀರದ ಸುರಕ್ಷತೆ ಕುರಿತಂತೆ ಭಾರತ, ಶ್ರೀಲಂಕಾ ಮತ್ತು ಮಾಲ್ಡೀವ್ಸ್ ನಡುವಣ ತ್ರಿಪಕ್ಷೀಯ ಮಾತುಕತೆಯ ಭಾಗವಾಗಿ ಡೊಭಾಲ್ ಮತ್ತು ದಿದಿ ಅವರ ನಡುವೆ ಸಂವಾದ ನಡೆಯಿತು.</p>.<p class="title">ಕಡಲ ತೀರದ ಸುರಕ್ಷತೆ ಕುರಿತು ನಾಲ್ಕನೇ ರಾಷ್ಟ್ರೀಯ ಭದ್ರತಾ ಸಲಹೆಗಾರರ ನಡುವಣ ತ್ರಿಪಕ್ಷೀಯ ಮಾತುಕತೆಯನ್ನು ಶ್ರೀಲಂಕಾವು, ಭಾರತ ಮತ್ತು ಮಾಲ್ಡೀವ್ಸ್ ಸಹಯೋಗದಲ್ಲಿ ಆಯೋಜಿಸಿದೆ. ಆರು ವರ್ಷಗಳ ನಂತರ ಈ ಸಭೆ ನಡೆಯುತ್ತಿದೆ. ಕಳೆದ ಬಾರಿ 2014ರಲ್ಲಿ ಸಭೆಯು ನವದೆಹಲಿಯಲ್ಲಿ ನಡೆದಿತ್ತು.</p>.<p>ಈ ಕುರಿತು ಟ್ವೀಟ್ ಮಾಡಿರುವ ಮಾಲ್ಡೀವ್ಸ್ನ ಭಾರತೀಯ ರಾಯಭಾರ ಕಚೇರಿಯು, ಉಭಯ ದೇಶಗಳ ನಡುವೆ ಕಡಲ ತೀರದ ಸುರಕ್ಷತೆ ಕುರಿತು ಸುದೀರ್ಘವಾದ ಚರ್ಚೆ ನಡೆದಿದೆ ಎಂದು ತಿಳಿಸಿದೆ. ಡೊಭಾಲ್ ಶುಕ್ರವಾರ ಇಲ್ಲಿಗೆ ಆಗಮಿಸಿದ್ದರು.</p>.<p>ಭಾರತೀಯ ಸಮುದ್ರ ತೀರದ ರಾಷ್ಟ್ರಗಳ ನಡುವಿನ ಉತ್ತಮ ಬಾಂಧವ್ಯ ರೂಪಿಸುವ ಕ್ರಮವಾಗಿ ರಾಷ್ಟ್ರೀಯ ಭದ್ರತಾ ಸಲಹೆಗಾರರ ಹಂತದ ಸಭೆ ಪರಿಣಾಮಕಾರಿಯಾದ ವೇದಿಕೆಯಾಗಿದೆ ಎಂದು ವಿದೇಶಾಂಗ ಸಚಿವಾಲಯ ಗುರುವಾರ ಹೇಳಿತ್ತು.</p>.<p>ಶ್ರೀಮಂತ ಸಂಪನ್ಮೂಲವಿರುವ ಭಾರತ ಫೆಸಿಫಿಕ್ ವಲಯದಲ್ಲಿ ತನ್ನ ಪ್ರಭಾವ ಬೀರಲು ಚೀನಾ ಯತ್ನ ನಡೆಸಿರುವ ಹಂತದಲ್ಲಿಯೇ ಈ ಸಭೆ ನಡೆದಿರುವುದು ಗಮನಾರ್ಹವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>