<p>ಇಸ್ಲಾಮಾಬಾದ್: ರಾಯಭಾರಿ ಪುತ್ರಿಯ ಅಪಹರಣ ಪ್ರಕರಣದ ನಂತರ ಇಸ್ಲಾಮಾಬಾದ್ನಲ್ಲಿದ್ದ ತನ್ನ ರಾಯಭಾರಿಯನ್ನು ವಾಪಸ್ ಕರೆಸಿಕೊಳ್ಳಲು ನಿರ್ಧರಿಸಿರುವ ಅಫ್ಗನ್ ಸರ್ಕಾರದ ನಿರ್ಧಾರ ದುರದೃಷ್ಟಕರ ಮತ್ತು ವಿಷಾದನೀಯ ಎಂದು ಹೇಳಿರುವ ಪಾಕಿಸ್ತಾನ ಸರ್ಕಾರ, ನಿರ್ಧಾರವನ್ನು ಮರು ಪರಿಶೀಲಿಸುವಂತೆ ಒತ್ತಾಯಿಸಿದೆ.</p>.<p>ಈ ಘಟನೆ ನಂತರ ಅಫ್ಗನ್ ರಾಯಭಾರಿ ಮತ್ತು ಅವರ ಕುಟುಂಬಕ್ಕೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಇದೇ ವೇಳೆ ಇಲ್ಲಿನ ಅಫ್ಗನ್ ರಾಯಭಾರ ಕಚೇರಿ ಮತ್ತು ದೂತಾವಾಸದ ಸಿಬ್ಬಂದಿಗೆ ನೀಡಿದ್ದ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವಾಲಯ ತಿಳಿಸಿದೆ.</p>.<p>’ಪಾಕಿಸ್ತಾನದಲ್ಲಿನ ತನ್ನ ಹಿರಿಯ ರಾಜತಾಂತ್ರಿಕರನ್ನು ವಾಪಸ್ ಕರೆಸಿಕೊಳ್ಳುವಅಫ್ಗನ್ ಸರ್ಕಾರದ ನಿರ್ಧಾರ ದುರದೃಷ್ಟಕರ ಸಂಗತಿ. ಈ ನಿರ್ಧಾರವನ್ನು ಅಫ್ಗನ್ ಸರ್ಕಾರ ಮರು ಪರಿಶೀಲಿಸುವ ವಿಶ್ವಾಸವಿದೆ’ ಎಂದು ವಿದೇಶಾಂಗ ಸಚಿವಾಲಯ ವಿಶ್ವಾಸ ವ್ಯಕ್ತಪಡಿಸಿದೆ.</p>.<p>ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿ ಭಾನುವಾರ ಅಫ್ಗನ್ ರಾಯಭಾರಿಯನ್ನು ಭೇಟಿಯಾಗಿ, ರಾಜತಾಂತ್ರಿಕರ ಸುರಕ್ಷತೆಗಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸುವ ಜತೆಗೆ, ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದರು.</p>.<p>ಪಾಕಿಸ್ತಾನಲ್ಲಿರುವ ಅಘ್ಗಾನಿಸ್ಥಾನದ ರಾಯಭಾರಿ ನಜೀಬುಲ್ಲಾ ಅಲಿಖಿಲ್ ಅವರ ಪುತ್ರಿಯನ್ನು ಅಪಹರಿಸಿ, ಹಲ್ಲೆ ನಡೆಸಲಾಗಿದ್ದು, ಪ್ರಧಾನಿ ಇಮ್ರಾಖಾನ್ ಅವರ ಸೂಚನೆ ಮೇರೆಗೆ ಈ ಪ್ರಕರಣವನ್ನು ಉನ್ನತ ಮಟ್ಟದಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವಾಲಯ ಭಾನುವಾರ ರಾತ್ರಿ ತಿಳಿಸಿದೆ.</p>.<p>ಇಸ್ಲಾಮಾಬಾದ್ನಲ್ಲಿ ಶುಕ್ರವಾರ ಅಘ್ಗನ್ ರಾಯಭಾರಿ ಪುತ್ರಿ ಸಿಲ್ಸಿಲಾ ಅಲಿಖಿಲ್ ಅವರು ಬಾಡಿಗೆ ವಾಹನದಲ್ಲಿ ಮನೆಗೆ ತೆರಳುತ್ತಿದ್ದಾಗ ಅಪರಿಚಿತ ವ್ಯಕ್ತಿಗಳು ಅಪಹರಿಸಿ, ಚಿತ್ರಹಿಂಸೆ ನೀಡಿದ್ದರು. ಪಾಕಿಸ್ತಾನ ಸರ್ಕಾರ ಭಾನುವಾರ ರಾತ್ರಿ ಈ ವಿಷಯವನ್ನು ಖಚಿತಪಡಿಸಿತ್ತು. ಅಪಹರಣವಾಗಿ ಕೆಲವು ಗಂಟೆಗಳ ಬಂಧನದ ನಂತರ ಸಿಲ್ಸಿಲಾ ಅವರು ರಾಜಧಾನಿಯ ಎಫ್ -9 ಪಾರ್ಕ್ ಬಳಿ ಪತ್ತೆಯಾಗಿದ್ದರು. ಅವರ ದೇಹದ ಮೇಲೆ ಗಾಯಗಳ ಗುರುತಿದ್ದವು.</p>.<p>ಆದರೆ, ಪಾಕಿಸ್ತಾನ ಸರ್ಕಾರದ ಆಂತರಿಕ ಸಚಿವ ಶೇಖ್ ರಶೀದ್ ಖಾಸಗಿ ಟಿವಿ ಚಾನೆಲ್ಗೆ ನೀಡಿದ ಸಂದರ್ಶನದಲ್ಲಿ, ’ರಾಯಭಾರಿಯ ಪುತ್ರಿಯ ಅಪಹರಣವಾಗಿಲ್ಲ. ಪಾಕಿಸ್ತಾನಕ್ಕೆ ಅವಮಾನ ಮಾಡಬೇಕೆಂಬ ಉದ್ದೇಶದಿಂದ ಅಂತರರಾಷ್ಟ್ರೀಯ ಮಟ್ಟದಲ್ಲಿ ರೂಪಿಸಿರುವ ಸಂಚು ಅದು ಎಂದು ಆರೋಪಿಸಿದ್ದಾರೆ.</p>.<p>ಅಚ್ಚರಿಯ ಸಂಗತಿ ಎಂದರೆ, ಈ ಹೇಳಿಕೆ ನೀಡುವುದಕ್ಕೂ ಮುನ್ನ ರಶೀದ್ ಅವರು, ’ಪಾಕಿಸ್ತಾನ ಶೀಘ್ರದಲ್ಲೇ ಅಪಹರಣಕಾರರನ್ನು ಬಂಧಿಸಲಿದೆ’ ಎಂದು ಹೇಳಿಕೆ ನೀಡಿದ್ದರು. ಈ ಪ್ರಕರಣ ಕುರಿತು ಪೊಲೀಸರು ಪ್ರಥಮ ಮಾಹಿತಿ ವರದಿಯನ್ನು ದಾಖಲಿಸಿದ್ದಾರೆ ಎಂದು ಅವರು ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಇಸ್ಲಾಮಾಬಾದ್: ರಾಯಭಾರಿ ಪುತ್ರಿಯ ಅಪಹರಣ ಪ್ರಕರಣದ ನಂತರ ಇಸ್ಲಾಮಾಬಾದ್ನಲ್ಲಿದ್ದ ತನ್ನ ರಾಯಭಾರಿಯನ್ನು ವಾಪಸ್ ಕರೆಸಿಕೊಳ್ಳಲು ನಿರ್ಧರಿಸಿರುವ ಅಫ್ಗನ್ ಸರ್ಕಾರದ ನಿರ್ಧಾರ ದುರದೃಷ್ಟಕರ ಮತ್ತು ವಿಷಾದನೀಯ ಎಂದು ಹೇಳಿರುವ ಪಾಕಿಸ್ತಾನ ಸರ್ಕಾರ, ನಿರ್ಧಾರವನ್ನು ಮರು ಪರಿಶೀಲಿಸುವಂತೆ ಒತ್ತಾಯಿಸಿದೆ.</p>.<p>ಈ ಘಟನೆ ನಂತರ ಅಫ್ಗನ್ ರಾಯಭಾರಿ ಮತ್ತು ಅವರ ಕುಟುಂಬಕ್ಕೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಇದೇ ವೇಳೆ ಇಲ್ಲಿನ ಅಫ್ಗನ್ ರಾಯಭಾರ ಕಚೇರಿ ಮತ್ತು ದೂತಾವಾಸದ ಸಿಬ್ಬಂದಿಗೆ ನೀಡಿದ್ದ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವಾಲಯ ತಿಳಿಸಿದೆ.</p>.<p>’ಪಾಕಿಸ್ತಾನದಲ್ಲಿನ ತನ್ನ ಹಿರಿಯ ರಾಜತಾಂತ್ರಿಕರನ್ನು ವಾಪಸ್ ಕರೆಸಿಕೊಳ್ಳುವಅಫ್ಗನ್ ಸರ್ಕಾರದ ನಿರ್ಧಾರ ದುರದೃಷ್ಟಕರ ಸಂಗತಿ. ಈ ನಿರ್ಧಾರವನ್ನು ಅಫ್ಗನ್ ಸರ್ಕಾರ ಮರು ಪರಿಶೀಲಿಸುವ ವಿಶ್ವಾಸವಿದೆ’ ಎಂದು ವಿದೇಶಾಂಗ ಸಚಿವಾಲಯ ವಿಶ್ವಾಸ ವ್ಯಕ್ತಪಡಿಸಿದೆ.</p>.<p>ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿ ಭಾನುವಾರ ಅಫ್ಗನ್ ರಾಯಭಾರಿಯನ್ನು ಭೇಟಿಯಾಗಿ, ರಾಜತಾಂತ್ರಿಕರ ಸುರಕ್ಷತೆಗಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸುವ ಜತೆಗೆ, ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದರು.</p>.<p>ಪಾಕಿಸ್ತಾನಲ್ಲಿರುವ ಅಘ್ಗಾನಿಸ್ಥಾನದ ರಾಯಭಾರಿ ನಜೀಬುಲ್ಲಾ ಅಲಿಖಿಲ್ ಅವರ ಪುತ್ರಿಯನ್ನು ಅಪಹರಿಸಿ, ಹಲ್ಲೆ ನಡೆಸಲಾಗಿದ್ದು, ಪ್ರಧಾನಿ ಇಮ್ರಾಖಾನ್ ಅವರ ಸೂಚನೆ ಮೇರೆಗೆ ಈ ಪ್ರಕರಣವನ್ನು ಉನ್ನತ ಮಟ್ಟದಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವಾಲಯ ಭಾನುವಾರ ರಾತ್ರಿ ತಿಳಿಸಿದೆ.</p>.<p>ಇಸ್ಲಾಮಾಬಾದ್ನಲ್ಲಿ ಶುಕ್ರವಾರ ಅಘ್ಗನ್ ರಾಯಭಾರಿ ಪುತ್ರಿ ಸಿಲ್ಸಿಲಾ ಅಲಿಖಿಲ್ ಅವರು ಬಾಡಿಗೆ ವಾಹನದಲ್ಲಿ ಮನೆಗೆ ತೆರಳುತ್ತಿದ್ದಾಗ ಅಪರಿಚಿತ ವ್ಯಕ್ತಿಗಳು ಅಪಹರಿಸಿ, ಚಿತ್ರಹಿಂಸೆ ನೀಡಿದ್ದರು. ಪಾಕಿಸ್ತಾನ ಸರ್ಕಾರ ಭಾನುವಾರ ರಾತ್ರಿ ಈ ವಿಷಯವನ್ನು ಖಚಿತಪಡಿಸಿತ್ತು. ಅಪಹರಣವಾಗಿ ಕೆಲವು ಗಂಟೆಗಳ ಬಂಧನದ ನಂತರ ಸಿಲ್ಸಿಲಾ ಅವರು ರಾಜಧಾನಿಯ ಎಫ್ -9 ಪಾರ್ಕ್ ಬಳಿ ಪತ್ತೆಯಾಗಿದ್ದರು. ಅವರ ದೇಹದ ಮೇಲೆ ಗಾಯಗಳ ಗುರುತಿದ್ದವು.</p>.<p>ಆದರೆ, ಪಾಕಿಸ್ತಾನ ಸರ್ಕಾರದ ಆಂತರಿಕ ಸಚಿವ ಶೇಖ್ ರಶೀದ್ ಖಾಸಗಿ ಟಿವಿ ಚಾನೆಲ್ಗೆ ನೀಡಿದ ಸಂದರ್ಶನದಲ್ಲಿ, ’ರಾಯಭಾರಿಯ ಪುತ್ರಿಯ ಅಪಹರಣವಾಗಿಲ್ಲ. ಪಾಕಿಸ್ತಾನಕ್ಕೆ ಅವಮಾನ ಮಾಡಬೇಕೆಂಬ ಉದ್ದೇಶದಿಂದ ಅಂತರರಾಷ್ಟ್ರೀಯ ಮಟ್ಟದಲ್ಲಿ ರೂಪಿಸಿರುವ ಸಂಚು ಅದು ಎಂದು ಆರೋಪಿಸಿದ್ದಾರೆ.</p>.<p>ಅಚ್ಚರಿಯ ಸಂಗತಿ ಎಂದರೆ, ಈ ಹೇಳಿಕೆ ನೀಡುವುದಕ್ಕೂ ಮುನ್ನ ರಶೀದ್ ಅವರು, ’ಪಾಕಿಸ್ತಾನ ಶೀಘ್ರದಲ್ಲೇ ಅಪಹರಣಕಾರರನ್ನು ಬಂಧಿಸಲಿದೆ’ ಎಂದು ಹೇಳಿಕೆ ನೀಡಿದ್ದರು. ಈ ಪ್ರಕರಣ ಕುರಿತು ಪೊಲೀಸರು ಪ್ರಥಮ ಮಾಹಿತಿ ವರದಿಯನ್ನು ದಾಖಲಿಸಿದ್ದಾರೆ ಎಂದು ಅವರು ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>