<p><strong>ಇಸ್ಲಾಮಾಬಾದ್:</strong> ‘ಅಫ್ಗಾನಿಸ್ತಾನದಲ್ಲಿ ದಿನೇ ದಿನೇ ಉದ್ವಿಗ್ನತೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನವು ಮುನ್ನೆಚ್ಚರಿಕಾ ಕ್ರಮವಾಗಿ ಅಫ್ಗಾನಿಸ್ತಾನದೊಂದಿಗಿನ ತನ್ನ ಗಡಿಯ ಮುಂಚೂಣಿ ಠಾಣೆಗಳಲ್ಲಿ ಸೇನಾ ಪಡೆಯನ್ನು ನಿಯೋಜಿಸಿದೆ’ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.</p>.<p>‘ಫ್ರಂಟಿಯರ್ ಕಾನ್ಸ್ಟಾಬ್ಯುಲರಿ (ಎಫ್ಸಿ), ಅರೆಸೇನಾಪಡೆಯ ಬದಲಿಗೆ ಪಾಕಿಸ್ತಾನಿ ಸೇನೆಯನ್ನು ನಿಯೋಜಿಸಲಾಗಿದೆ ಎಂಬುದಾಗಿ ಸಚಿವ ಶೇಖ್ ರಶೀದ್ ಅಹ್ಮದ್ ಹೇಳಿದ್ದಾರೆ’ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ.</p>.<p>‘ಅಫ್ಗಾನಿಸ್ತಾನದಿಂದ ನ್ಯಾಟೊ ಮತ್ತು ಅಮೆರಿಕದ ಸೇನೆಗಳನ್ನು ವಾಪಸು ಕರೆಸಿಕೊಳ್ಳುವ ಪ್ರಕ್ರಿಯೆ ಇನ್ನೇನು ಪೂರ್ಣಗೊಳ್ಳಲಿದೆ. ಇದರ ಬೆನ್ನಲ್ಲೇ ಅಫ್ಗಾನಿಸ್ತಾನದಲ್ಲಿ ಉದ್ವಿಗ್ನತೆ ಸೃಷ್ಟಿಯಾಗಿದೆ. ಕೇವಲ ನಿರಾಶ್ರಿತರು ಮಾತ್ರವಲ್ಲದೇ ಸೇನೆ ಸಿಬ್ಬಂದಿ ಮತ್ತು ಉಗ್ರರು ಪಾಕಿಸ್ತಾನ ಪ್ರವೇಶಿಸುವ ಸಾಧ್ಯತೆಯಿದೆ. ಈ ದೃಷ್ಟಿಯಿಂದ ಅರೆಸೇನಾಪಡೆ ಬದಲಿಗೆ ಸೇನೆಯನ್ನು ಗಡಿಯಲ್ಲಿ ನಿಯೋಜಿಸಲಾಗಿದೆ’ ಎಂದು ಸಚಿವ ಶೇಖ್ ರಶೀದ್ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್:</strong> ‘ಅಫ್ಗಾನಿಸ್ತಾನದಲ್ಲಿ ದಿನೇ ದಿನೇ ಉದ್ವಿಗ್ನತೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನವು ಮುನ್ನೆಚ್ಚರಿಕಾ ಕ್ರಮವಾಗಿ ಅಫ್ಗಾನಿಸ್ತಾನದೊಂದಿಗಿನ ತನ್ನ ಗಡಿಯ ಮುಂಚೂಣಿ ಠಾಣೆಗಳಲ್ಲಿ ಸೇನಾ ಪಡೆಯನ್ನು ನಿಯೋಜಿಸಿದೆ’ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.</p>.<p>‘ಫ್ರಂಟಿಯರ್ ಕಾನ್ಸ್ಟಾಬ್ಯುಲರಿ (ಎಫ್ಸಿ), ಅರೆಸೇನಾಪಡೆಯ ಬದಲಿಗೆ ಪಾಕಿಸ್ತಾನಿ ಸೇನೆಯನ್ನು ನಿಯೋಜಿಸಲಾಗಿದೆ ಎಂಬುದಾಗಿ ಸಚಿವ ಶೇಖ್ ರಶೀದ್ ಅಹ್ಮದ್ ಹೇಳಿದ್ದಾರೆ’ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ.</p>.<p>‘ಅಫ್ಗಾನಿಸ್ತಾನದಿಂದ ನ್ಯಾಟೊ ಮತ್ತು ಅಮೆರಿಕದ ಸೇನೆಗಳನ್ನು ವಾಪಸು ಕರೆಸಿಕೊಳ್ಳುವ ಪ್ರಕ್ರಿಯೆ ಇನ್ನೇನು ಪೂರ್ಣಗೊಳ್ಳಲಿದೆ. ಇದರ ಬೆನ್ನಲ್ಲೇ ಅಫ್ಗಾನಿಸ್ತಾನದಲ್ಲಿ ಉದ್ವಿಗ್ನತೆ ಸೃಷ್ಟಿಯಾಗಿದೆ. ಕೇವಲ ನಿರಾಶ್ರಿತರು ಮಾತ್ರವಲ್ಲದೇ ಸೇನೆ ಸಿಬ್ಬಂದಿ ಮತ್ತು ಉಗ್ರರು ಪಾಕಿಸ್ತಾನ ಪ್ರವೇಶಿಸುವ ಸಾಧ್ಯತೆಯಿದೆ. ಈ ದೃಷ್ಟಿಯಿಂದ ಅರೆಸೇನಾಪಡೆ ಬದಲಿಗೆ ಸೇನೆಯನ್ನು ಗಡಿಯಲ್ಲಿ ನಿಯೋಜಿಸಲಾಗಿದೆ’ ಎಂದು ಸಚಿವ ಶೇಖ್ ರಶೀದ್ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>