ಗುರುವಾರ ಸಂಸತ್ತಿನ ಕಲಾಪ ಆರಂಭವಾಗುತ್ತಿದ್ದಂತೆ ಉಪ ಸ್ಪೀಕರ್ ಖಾಸಿಂ ಸೂರಿ ಅವರು, ಈಗಾಗಲೇ ನಿರ್ಧರಿಸಲಾದ ವಿಚಾರದ ಬಗ್ಗೆ ಚರ್ಚೆಗೆ ಅವಕಾಶ ಮಾಡಿಕೊಟ್ಟರು. ಆದರೆ ಈ ವೇಳೆ ಪ್ರಧಾನಿ ಇಮ್ರಾನ್ ಖಾನ್ ಅವರ ವಿರುದ್ಧದ ಅವಿಶ್ವಾಸ ನಿರ್ಣಯ ಮೇಲಿನ ಮತದಾನಕ್ಕೆ ತಕ್ಷಣವೇ ಅವಕಾಶ ನೀಡಬೇಕು ಎಂದು ವಿರೋಧ ಪಕ್ಷದ ಸಂಸದರು ಒತ್ತಾಯಿಸಿದರು. ಅಲ್ಲದೆ ಸದಸ್ಯರು ಈ ಬಗ್ಗೆ ಗಟ್ಟಿ ಧ್ವನಿಯಲ್ಲಿ ಕೂಗಾಡಿದ ಹಿನ್ನೆಲೆಯಲ್ಲಿ ಕಲಾಪವನ್ನು ಉಪಸ್ಪೀಕರ್ ಅವರು ಭಾನುವಾರ ಬೆಳಗ್ಗೆ 11 ಗಂಟೆವರೆಗೆ ಮುಂದೂಡಿದರು.