<p><strong>ಇಸ್ಲಾಮಾಬಾದ್: </strong>ಭಾರತ ಎದುರಿಸುತ್ತಿರುವ ಕೋವಿಡ್–19 ಬಿಕ್ಕಟ್ಟಿಗೆ ಸ್ಪಂದಿಸಿರುವ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು, ‘ಮಾನವೀಯತೆಯು ಎದುರಿಸುತ್ತಿರುವ ಈ ಜಾಗತಿಕ ಸವಾಲಿನ ವಿರುದ್ಧ ಒಟ್ಟಾಗಿ ಹೋರಾಡಬೇಕು’ ಎಂದಿದ್ದಾರೆ.</p>.<p>ಈ ಕುರಿತು ಟ್ವೀಟ್ ಮಾಡಿರುವ ಇಮ್ರಾನ್ ಖಾನ್, ‘ನಮ್ಮ ನೆರೆಹೊರೆಯ ರಾಷ್ಟ್ರ ಮತ್ತು ಜಗತ್ತು ಈ ರೋಗದಿಂದ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುವೆ. ಕೋವಿಡ್–19ನಂಥ ಅಪಾಯಕಾರಿ ರೋಗದ ವಿರುದ್ಧ ಹೋರಾಡುತ್ತಿರುವ ಭಾರತದ ಜನರೊಂದಿಗೆ ನಮ್ಮ ಒಗ್ಗಟ್ಟನ್ನೂ ವ್ಯಕ್ತಪಡಿಸಲು ಇಚ್ಛಿಸುತ್ತೇನೆ’ ಎಂದು ಅವರು ಹೇಳಿದ್ದಾರೆ.</p>.<p>ಭಾರತದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾದ ನಂತರ ಪಾಕಿಸ್ತಾನದ ವಿದೇಶಾಂಗ ಸಚಿವ ಷಾ ಮಹಮೂದ್ ಖುರೇಷಿ ಅವರು ಭಾರತದ ಜನರಿಗೆ ಬೆಂಬಲ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು. ಈ ಟ್ವೀಟ್ ನಂತರ ಪ್ರಧಾನಿ ಇಮ್ರಾನ್ ಖಾನ್ ಕೂಡಾ ಟ್ವೀಟ್ ಮಾಡಿದ್ದಾರೆ.</p>.<p>‘ಈ ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಸಹಕಾರವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಪಾಕಿಸ್ತಾನವು ಸಾರ್ಕ್ ರಾಷ್ಟ್ರಗಳೊಂದಿಗೆ ಕೆಲಸ ಮಾಡುವುದನ್ನು ಮುಂದುವರಿಸಿದೆ ಎಂದು’ ಖುರೇಷಿ ಅವರು ಹೇಳಿದ್ದಾರೆ.</p>.<p>ಪಾಕಿಸ್ತಾನದ ಮಾಹಿತಿ ಸಚಿವ ಫವಾದ್ ಚೌಧರಿ ಕೂಡಾ ಟ್ವೀಟ್ ಮಾಡಿ ‘ಇಂಥ ಕಷ್ಟದ ಸಮಯದಲ್ಲಿ ಭಾರತದ ಜನರೊಂದಿಗೆ ನಾವು ಇರುತ್ತೇವೆ. ದೇವರು ದಯೆ ತೋರಲಿ, ಈ ಕಷ್ಟದ ಸಮಯ ಶೀಘ್ರವೇ ಮುಗಿಯಲಿ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್: </strong>ಭಾರತ ಎದುರಿಸುತ್ತಿರುವ ಕೋವಿಡ್–19 ಬಿಕ್ಕಟ್ಟಿಗೆ ಸ್ಪಂದಿಸಿರುವ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು, ‘ಮಾನವೀಯತೆಯು ಎದುರಿಸುತ್ತಿರುವ ಈ ಜಾಗತಿಕ ಸವಾಲಿನ ವಿರುದ್ಧ ಒಟ್ಟಾಗಿ ಹೋರಾಡಬೇಕು’ ಎಂದಿದ್ದಾರೆ.</p>.<p>ಈ ಕುರಿತು ಟ್ವೀಟ್ ಮಾಡಿರುವ ಇಮ್ರಾನ್ ಖಾನ್, ‘ನಮ್ಮ ನೆರೆಹೊರೆಯ ರಾಷ್ಟ್ರ ಮತ್ತು ಜಗತ್ತು ಈ ರೋಗದಿಂದ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುವೆ. ಕೋವಿಡ್–19ನಂಥ ಅಪಾಯಕಾರಿ ರೋಗದ ವಿರುದ್ಧ ಹೋರಾಡುತ್ತಿರುವ ಭಾರತದ ಜನರೊಂದಿಗೆ ನಮ್ಮ ಒಗ್ಗಟ್ಟನ್ನೂ ವ್ಯಕ್ತಪಡಿಸಲು ಇಚ್ಛಿಸುತ್ತೇನೆ’ ಎಂದು ಅವರು ಹೇಳಿದ್ದಾರೆ.</p>.<p>ಭಾರತದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾದ ನಂತರ ಪಾಕಿಸ್ತಾನದ ವಿದೇಶಾಂಗ ಸಚಿವ ಷಾ ಮಹಮೂದ್ ಖುರೇಷಿ ಅವರು ಭಾರತದ ಜನರಿಗೆ ಬೆಂಬಲ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು. ಈ ಟ್ವೀಟ್ ನಂತರ ಪ್ರಧಾನಿ ಇಮ್ರಾನ್ ಖಾನ್ ಕೂಡಾ ಟ್ವೀಟ್ ಮಾಡಿದ್ದಾರೆ.</p>.<p>‘ಈ ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಸಹಕಾರವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಪಾಕಿಸ್ತಾನವು ಸಾರ್ಕ್ ರಾಷ್ಟ್ರಗಳೊಂದಿಗೆ ಕೆಲಸ ಮಾಡುವುದನ್ನು ಮುಂದುವರಿಸಿದೆ ಎಂದು’ ಖುರೇಷಿ ಅವರು ಹೇಳಿದ್ದಾರೆ.</p>.<p>ಪಾಕಿಸ್ತಾನದ ಮಾಹಿತಿ ಸಚಿವ ಫವಾದ್ ಚೌಧರಿ ಕೂಡಾ ಟ್ವೀಟ್ ಮಾಡಿ ‘ಇಂಥ ಕಷ್ಟದ ಸಮಯದಲ್ಲಿ ಭಾರತದ ಜನರೊಂದಿಗೆ ನಾವು ಇರುತ್ತೇವೆ. ದೇವರು ದಯೆ ತೋರಲಿ, ಈ ಕಷ್ಟದ ಸಮಯ ಶೀಘ್ರವೇ ಮುಗಿಯಲಿ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>