<p><strong>ನವದೆಹಲಿ:</strong> ಪಾಕಿಸ್ತಾನದ ಕರಕ್, ಖೈಬರ್-ಫಕ್ತುನ್ಕ್ವಾ (ಕೆಪಿ) ಪ್ರದೇಶದಲ್ಲಿ ಪುನರ್ನಿರ್ಮಾಣ ಮಾಡಲಾದ ಶ್ರೀ ಪರಮಹಂಸಜೀ ಮಹಾರಾಜ್ ದೇವಾಲಯವನ್ನು ಪಾಕಿಸ್ತಾನದ ಮುಖ್ಯ ನ್ಯಾಯಮೂರ್ತಿ (ಸಿಜೆಪಿ) ಗುಲ್ಜಾರ್ ಅಹ್ಮದ್ ಅವರು ಉದ್ಘಾಟಿಸಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ ಅವರು ಹಿಂದೂ ಸಮುದಾಯವನ್ನು ಅಭಿನಂದಿಸಿದ್ದಾರೆ ಎಂದು ‘ಎಕ್ಸ್ಪ್ರೆಸ್ ಟ್ರಿಬ್ಯೂನ್’ ವರದಿ ಮಾಡಿದೆ.</p>.<p>ಕಳೆದ ವರ್ಷ ಡಿಸೆಂಬರ್ನಲ್ಲಿ ಸ್ಥಳೀಯ ಧರ್ಮಗುರುಗಳು ಮತ್ತು ಇತರರ ನೇತೃತ್ವದ ಗುಂಪೊಂದು ದೇವಾಲಯದ ಮೇಲೆ ದಾಳಿ ಮಾಡಿ ಅದನ್ನು ಸಂಪೂರ್ಣವಾಗಿ ಕೆಡವಿತ್ತು.</p>.<p>ಸೋಮವಾರ ಉದ್ಘಾಟನಾ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ನ್ಯಾಯಮೂರ್ತಿ ಗುಲ್ಜಾರ್, ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗೆ ಸುಪ್ರೀಂ ಕೋರ್ಟ್ ಬದ್ಧವಾಗಿದೆ. ಈ ಬದ್ಧತೆ ಭವಿಷ್ಯದಲ್ಲಿಯೂ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>ಪಾಕಿಸ್ತಾನದ ಸಂವಿಧಾನದ ಪ್ರಕಾರ ಬೇರೆಲ್ಲ ಸಮುದಾಯಗಳಂತೆ ಹಿಂದೂಗಳಿಗೂ ಸಮಾನ ಹಕ್ಕುಗಳಿವೆ ಎಂದು ಅವರು ಹೇಳಿದ್ದಾರೆ.</p>.<p>ಪ್ರತಿಯೊಬ್ಬರೂ ತಮ್ಮ ಧಾರ್ಮಿಕ ಪವಿತ್ರ ಸ್ಥಳಗಳನ್ನು ಗೌರವಿಸುತ್ತಾರೆ. ಯಾರ ಧಾರ್ಮಿಕ ಸ್ಥಳಕ್ಕೆ ಹಾನಿ ಮಾಡುವ ಅಧಿಕಾರ ಯಾರಿಗೂ ಇಲ್ಲ ಎಂದು ಸಿಜೆಪಿ ತಿಳಿಸಿದರು.</p>.<p>ಅಲ್ಪಸಂಖ್ಯಾತರ ಧಾರ್ಮಿಕ ಸ್ವಾತಂತ್ರ್ಯದ ರಕ್ಷಣೆಯ ಭರವಸೆಯ ವಾಗ್ದಾನವನ್ನು ಸುಪ್ರೀಂ ಕೋರ್ಟ್ ನೀಡುತ್ತದೆ. ಅಲ್ಪಸಂಖ್ಯಾತರಿಗೆ ರಕ್ಷಣೆ ನೀಡುವುದು ಸಂವಿಧಾನದ ಅಡಿಯಲ್ಲಿ ಎಲ್ಲರ ಕರ್ತವ್ಯವೂ ಆಗಿದೆ ಎಂದು ಅವರು ಹೇಳಿದರು.</p>.<p>ಕರಕ್ನಲ್ಲಿ ನಡೆದ ದೇಗುಲ ಧ್ವಂಸ ಘಟನೆಯತ್ತ ಸಕಾಲಕ್ಕೆ ಗಮನಿಸಿದ್ದಕ್ಕಾಗಿ ಮುಖ್ಯ ನ್ಯಾಯಮೂರ್ತಿಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ಪಾಕಿಸ್ತಾನದ ಹಿಂದೂ ಕೌನ್ಸಿಲ್ನ ಪೋಷಕ ಮತ್ತು ಪಿಟಿಐ ಮುಖಂಡ ರಮೇಶ್ ಕುಮಾರ್ ಇದೇ ವೇಳೆ ತಿಳಿಸಿದರು.</p>.<p>ಪಾಕಿಸ್ತಾನದಲ್ಲಿರುವ ಐತಿಹಾಸಿಕ ದೇವಾಲಯಗಳನ್ನು ಪುನರಾರಂಭಿಸಿದರೆ, ಸಾವಿರಾರು ಹಿಂದೂಗಳು ಅವುಗಳಿಗೆ ಭೇಟಿ ನೀಡುತ್ತಾರೆ. ಇದು ವಿಶ್ವ ಮಟ್ಟದಲ್ಲಿ ದೇಶಕ್ಕೆ ಕೀರ್ತಿ ತಂದುಕೊಡಲಿದೆ ಎಂದು ಕುಮಾರ್ ಇದೇ ವೇಳೆ ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪಾಕಿಸ್ತಾನದ ಕರಕ್, ಖೈಬರ್-ಫಕ್ತುನ್ಕ್ವಾ (ಕೆಪಿ) ಪ್ರದೇಶದಲ್ಲಿ ಪುನರ್ನಿರ್ಮಾಣ ಮಾಡಲಾದ ಶ್ರೀ ಪರಮಹಂಸಜೀ ಮಹಾರಾಜ್ ದೇವಾಲಯವನ್ನು ಪಾಕಿಸ್ತಾನದ ಮುಖ್ಯ ನ್ಯಾಯಮೂರ್ತಿ (ಸಿಜೆಪಿ) ಗುಲ್ಜಾರ್ ಅಹ್ಮದ್ ಅವರು ಉದ್ಘಾಟಿಸಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ ಅವರು ಹಿಂದೂ ಸಮುದಾಯವನ್ನು ಅಭಿನಂದಿಸಿದ್ದಾರೆ ಎಂದು ‘ಎಕ್ಸ್ಪ್ರೆಸ್ ಟ್ರಿಬ್ಯೂನ್’ ವರದಿ ಮಾಡಿದೆ.</p>.<p>ಕಳೆದ ವರ್ಷ ಡಿಸೆಂಬರ್ನಲ್ಲಿ ಸ್ಥಳೀಯ ಧರ್ಮಗುರುಗಳು ಮತ್ತು ಇತರರ ನೇತೃತ್ವದ ಗುಂಪೊಂದು ದೇವಾಲಯದ ಮೇಲೆ ದಾಳಿ ಮಾಡಿ ಅದನ್ನು ಸಂಪೂರ್ಣವಾಗಿ ಕೆಡವಿತ್ತು.</p>.<p>ಸೋಮವಾರ ಉದ್ಘಾಟನಾ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ನ್ಯಾಯಮೂರ್ತಿ ಗುಲ್ಜಾರ್, ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗೆ ಸುಪ್ರೀಂ ಕೋರ್ಟ್ ಬದ್ಧವಾಗಿದೆ. ಈ ಬದ್ಧತೆ ಭವಿಷ್ಯದಲ್ಲಿಯೂ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>ಪಾಕಿಸ್ತಾನದ ಸಂವಿಧಾನದ ಪ್ರಕಾರ ಬೇರೆಲ್ಲ ಸಮುದಾಯಗಳಂತೆ ಹಿಂದೂಗಳಿಗೂ ಸಮಾನ ಹಕ್ಕುಗಳಿವೆ ಎಂದು ಅವರು ಹೇಳಿದ್ದಾರೆ.</p>.<p>ಪ್ರತಿಯೊಬ್ಬರೂ ತಮ್ಮ ಧಾರ್ಮಿಕ ಪವಿತ್ರ ಸ್ಥಳಗಳನ್ನು ಗೌರವಿಸುತ್ತಾರೆ. ಯಾರ ಧಾರ್ಮಿಕ ಸ್ಥಳಕ್ಕೆ ಹಾನಿ ಮಾಡುವ ಅಧಿಕಾರ ಯಾರಿಗೂ ಇಲ್ಲ ಎಂದು ಸಿಜೆಪಿ ತಿಳಿಸಿದರು.</p>.<p>ಅಲ್ಪಸಂಖ್ಯಾತರ ಧಾರ್ಮಿಕ ಸ್ವಾತಂತ್ರ್ಯದ ರಕ್ಷಣೆಯ ಭರವಸೆಯ ವಾಗ್ದಾನವನ್ನು ಸುಪ್ರೀಂ ಕೋರ್ಟ್ ನೀಡುತ್ತದೆ. ಅಲ್ಪಸಂಖ್ಯಾತರಿಗೆ ರಕ್ಷಣೆ ನೀಡುವುದು ಸಂವಿಧಾನದ ಅಡಿಯಲ್ಲಿ ಎಲ್ಲರ ಕರ್ತವ್ಯವೂ ಆಗಿದೆ ಎಂದು ಅವರು ಹೇಳಿದರು.</p>.<p>ಕರಕ್ನಲ್ಲಿ ನಡೆದ ದೇಗುಲ ಧ್ವಂಸ ಘಟನೆಯತ್ತ ಸಕಾಲಕ್ಕೆ ಗಮನಿಸಿದ್ದಕ್ಕಾಗಿ ಮುಖ್ಯ ನ್ಯಾಯಮೂರ್ತಿಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ಪಾಕಿಸ್ತಾನದ ಹಿಂದೂ ಕೌನ್ಸಿಲ್ನ ಪೋಷಕ ಮತ್ತು ಪಿಟಿಐ ಮುಖಂಡ ರಮೇಶ್ ಕುಮಾರ್ ಇದೇ ವೇಳೆ ತಿಳಿಸಿದರು.</p>.<p>ಪಾಕಿಸ್ತಾನದಲ್ಲಿರುವ ಐತಿಹಾಸಿಕ ದೇವಾಲಯಗಳನ್ನು ಪುನರಾರಂಭಿಸಿದರೆ, ಸಾವಿರಾರು ಹಿಂದೂಗಳು ಅವುಗಳಿಗೆ ಭೇಟಿ ನೀಡುತ್ತಾರೆ. ಇದು ವಿಶ್ವ ಮಟ್ಟದಲ್ಲಿ ದೇಶಕ್ಕೆ ಕೀರ್ತಿ ತಂದುಕೊಡಲಿದೆ ಎಂದು ಕುಮಾರ್ ಇದೇ ವೇಳೆ ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>