ಪಂಜಾಬ್ ಪ್ರಾಂತ್ಯದ ಸಿಯಾಲ್ಕೋಟ್ನಲ್ಲಿ ರ್ಯಾಲಿಯಲ್ಲಿ ಮಾತನಾಡಿದ ಇಮ್ರಾನ್ ಖಾನ್, ಕೊಲೆಯ ಸಂಚಿನ ಬಗ್ಗೆ ಇತ್ತೀಚೆಗೆ ತಿಳಿದುಬಂದಿದೆ. ರಾಷ್ಟ್ರದ ಒಳಗೆ ಮತ್ತು ಹೊರಗೆ ರಹಸ್ಯವಾಗಿ ಸಂಚು ನಡೆದಿದೆ. ಇದರಲ್ಲಿ ಭಾಗಿಯಾಗಿರುವ ಎಲ್ಲರ ಹೆಸರನ್ನು ವಿಡಿಯೊ ಸಂದೇಶದಲ್ಲಿ ದಾಖಲಿಸಿಟ್ಟಿದ್ದೇನೆ. ನನಗೆ ಏನಾದರೂ ಸಂಭವಿಸಿದರೆ ಜನರಿಗೆ ವಿಡಿಯೊ ಸಂದೇಶದ ಮೂಲಕ ಅಪರಾಧಿಗಳು ಯಾರು ಎಂಬುದು ತಿಳಿಯಲಿದೆ ಎಂದಿದ್ದಾರೆ.