ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನದಲ್ಲಿ ಪ್ರವಾಹ: ಮೋದಿ ಕಾಳಜಿಗೆ ಧನ್ಯವಾದ ಸಲ್ಲಿಸಿದ ಪಾಕ್ ಪ್ರಧಾನಿ

Last Updated 1 ಸೆಪ್ಟೆಂಬರ್ 2022, 4:10 IST
ಅಕ್ಷರ ಗಾತ್ರ

ನವದೆಹಲಿ: ಪಾಕಿಸ್ತಾನದಲ್ಲಿ ಭೀಕರ ಪ್ರವಾಹದಿಂದ ಅಪಾರ ನಾಶ-ನಷ್ಟ ಉಂಟಾಗಿದೆ. ಈ ಕುರಿತು ಕಾಳಜಿ ವಹಿಸಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಾಕಿಸ್ತಾನದ ಪ್ರಧಾನ ಮಂತ್ರಿ ಶೆಹಬಾಜ್‌ ಷರೀಫ್‌ ಧನ್ಯವಾದ ಸಲ್ಲಿಸಿದ್ದಾರೆ.

ಪಾಕಿಸ್ತಾನದಲ್ಲಿ ಪ್ರವಾಹದಿಂದಾಗಿ ಉಂಟಾಗಿರುವ ಹಾನಿ ಕುರಿತುಸಂತಾಪ ಸೂಚಿಸಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾನು ಧನ್ಯವಾದ ಸಲ್ಲಿಸುತ್ತೇನೆ. ಈ ನೈಸರ್ಗಿಕ ವಿಕೋಪದ ಪ್ರತಿಕೂಲ ಪರಿಣಾಮವನ್ನು ಎದುರಿಸಿ ಪಾಕಿಸ್ತಾನ ಜನತೆ ಸಹಜ ಸ್ಥಿತಿಗೆ ಮರಳುವ ನಂಬಿಕೆಯಿದೆ ಎಂದು ಹೇಳಿದ್ದಾರೆ.



ಪ್ರಧಾನಿ ಮೋದಿ ತಮ್ಮ ಸಂದೇಶದಲ್ಲಿ, ಪಾಕಿಸ್ತಾನದಲ್ಲಿ ಪ್ರವಾಹದಿಂದ ಉಂಟಾಗಿರುವ ಹಾನಿಯನ್ನು ನೋಡಿ ತುಂಬಾ ಬೇಸರವಾಗಿದೆ. ಈ ನೈಸರ್ಗಿಕ ವಿಕೋಪದಿಂದ ಸಂತ್ರಸ್ತರು, ಗಾಯಗೊಂಡವರು ಮತ್ತು ಮೃತಪಟ್ಟವರ ಕುಟುಂಬಗಳಿಗೆ ನಾವು ಸಂತಾಪ ಸೂಚಿಸುತ್ತೇವೆ. ಪಾಕಿಸ್ತಾನ ಶೀಘ್ರದಲ್ಲೇ ಸಹಜ ಸ್ಥಿತಿ ಮರಳುವ ವಿಶ್ವಾಸವಿದೆ ಎಂದು ಹೇಳಿದ್ದರು.

ಪಾಕಿಸ್ತಾನದಲ್ಲಿ ಪ್ರವಾಹದಿಂದಾಗಿ ಈವರೆಗೆ 1,100ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT