ಪ್ರಧಾನಿಶಾಹಬಾಝ್ ಷರೀಫ್ ನೇತೃತ್ವದ ಸರ್ಕಾರ ಮೊದಲಿಗೆ ಈ ಪ್ರತಿಭಟನೆಗೆ ಅವಕಾಶ ನೀಡಿತ್ತು. ಆದರೆ, ಮೆರವಣಿಗೆಯಿಂದ ಕಾನೂನು ಸುವ್ಯವಸ್ಥೆ ಹಾಳಾಗಿ, ಹಿಂಸಾಚಾರ ತಲೆದೋರಬಹುದು ಎಂಬ ಭೀತಿಯಿಂದಾಗಿ, ಪ್ರತಿಭಟನೆಗೆ ನೀಡಲಾಗಿದ್ದ ಅವಕಾಶವನ್ನು ಮಂಗಳವಾರ ಹಿಂಪಡೆಯಲಾಗಿತ್ತು. ಜೊತೆಗೆ ಲಾಹೋರ್, ಇಸ್ಲಾಮಾಬಾದ್, ಕರಾಚಿ ಹಾಗೂ ರಾವಲ್ಪಿಂಡಿ ಸೇರಿದಂತೆ ಇನ್ನಿತರ ಪ್ರಮುಖ ನಗರಗಳಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ.