<p class="title"><strong>ಇಸ್ಲಾಮಾಬಾದ್</strong>: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಹಲವು ಬೆಂಬಲಿಗರನ್ನು ಬಂಧಿಸಿರುವ ಪಾಕಿಸ್ತಾನ ಸರ್ಕಾರ, ರಸ್ತೆಗಳನ್ನು ಸಹ ಬಂದ್ ಮಾಡಿದೆ. ಈ ಮೂಲಕ ಸರ್ಕಾರವುತೆಹ್ರೀಕ್-ಇ-ಇನ್ಸಾಫ್(ಪಿಟಿಐ) ಪಕ್ಷದ ಪ್ರತಿಭಟನೆಗಳಿಗೆ ತಡೆ ಒಡ್ಡಲು ಪ್ರಯತ್ನಿಸಿದೆ.</p>.<p class="title">ಮಂಗಳವಾರ ಪಿಟಿಐ ಪಕ್ಷದ ಪ್ರತಿಭಟನೆಗಳು ಮತ್ತು ಮೆರವಣಿಗೆಗಳ ಮೇಲೆ ಪಾಕಿಸ್ತಾನ ಸರ್ಕಾರ ನಿರ್ಬಂಧ ಹೇರಿತ್ತು. ಬುಧವಾರ ರಸ್ತೆಗಳನ್ನು ಬಂದ್ ಮಾಡಿದ ಸರ್ಕಾರ, ಹಲವು ನಗರಗಳಲ್ಲಿ ಇಮ್ರಾನ್ ಖಾನ್ ಅವರ ನೂರಾರು ಬೆಂಬಲಿಗರನ್ನು ಬಂಧಿಸುತ್ತಿದೆ. ಈ ಮೂಲಕ ಖಾನ್ ಕರೆಕೊಟ್ಟಿರುವ ‘ಆಜಾದಿ ಮೆರವಣಿಗೆ’ಯಲ್ಲಿ ಪಾಲ್ಗೊಳ್ಳದಂತೆ ಕ್ರಮ ಕೈಗೊಳ್ಳಲಾಗುತ್ತಿದೆ.</p>.<p>ಪ್ರಧಾನಿಶಾಹಬಾಝ್ ಷರೀಫ್ ನೇತೃತ್ವದ ಸರ್ಕಾರ ಮೊದಲಿಗೆ ಈ ಪ್ರತಿಭಟನೆಗೆ ಅವಕಾಶ ನೀಡಿತ್ತು. ಆದರೆ, ಮೆರವಣಿಗೆಯಿಂದ ಕಾನೂನು ಸುವ್ಯವಸ್ಥೆ ಹಾಳಾಗಿ, ಹಿಂಸಾಚಾರ ತಲೆದೋರಬಹುದು ಎಂಬ ಭೀತಿಯಿಂದಾಗಿ, ಪ್ರತಿಭಟನೆಗೆ ನೀಡಲಾಗಿದ್ದ ಅವಕಾಶವನ್ನು ಮಂಗಳವಾರ ಹಿಂಪಡೆಯಲಾಗಿತ್ತು. ಜೊತೆಗೆ ಲಾಹೋರ್, ಇಸ್ಲಾಮಾಬಾದ್, ಕರಾಚಿ ಹಾಗೂ ರಾವಲ್ಪಿಂಡಿ ಸೇರಿದಂತೆ ಇನ್ನಿತರ ಪ್ರಮುಖ ನಗರಗಳಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ.</p>.<p>ರಾಷ್ಟ್ರೀಯ ಅಸೆಂಬ್ಲಿಯನ್ನು ವಿಸರ್ಜಿಸಿ, ದೇಶದಲ್ಲಿ ಚುನಾವಣೆ ನಡೆಸಬೇಕು ಎಂದು ಒತ್ತಾಯಿಸಿ ಬುಧವಾರ ರಾಜಧಾನಿ ಇಸ್ಲಾಮಾಬಾದ್ಗೆ ಶಾಂತಿಯುತ ಮೆರವಣಿಗೆ ನಡೆಸುವಂತೆ ತಮ್ಮ ಬೆಂಬಲಿಗರಿಗೆ ಇಮ್ರಾನ್ ಖಾನ್ ಕರೆ ನೀಡಿದ್ದರು.</p>.<p>ಆದರೆ, ರಾಷ್ಟ್ರೀಯ ಅಸೆಂಬ್ಲಿಯನ್ನು ವಿಸರ್ಜಿಸಿ ಚುನಾವಣೆ ಎದುರಿಸುವ ವಿರೋಧ ಪಕ್ಷದ ಕೋರಿಕೆಯನ್ನು ಪಾಕಿಸ್ತಾನ ಸರ್ಕಾರ ನಿರಾಕರಿಸಿತ್ತು. ಅಲ್ಲದೆ, ನಿಗದಿಯಂತೆ ಮುಂದಿನ ವರ್ಷವೇ ಚುನಾವಣೆ ನಡೆಯಲಿದೆ ಎಂದು ಹೇಳಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಇಸ್ಲಾಮಾಬಾದ್</strong>: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಹಲವು ಬೆಂಬಲಿಗರನ್ನು ಬಂಧಿಸಿರುವ ಪಾಕಿಸ್ತಾನ ಸರ್ಕಾರ, ರಸ್ತೆಗಳನ್ನು ಸಹ ಬಂದ್ ಮಾಡಿದೆ. ಈ ಮೂಲಕ ಸರ್ಕಾರವುತೆಹ್ರೀಕ್-ಇ-ಇನ್ಸಾಫ್(ಪಿಟಿಐ) ಪಕ್ಷದ ಪ್ರತಿಭಟನೆಗಳಿಗೆ ತಡೆ ಒಡ್ಡಲು ಪ್ರಯತ್ನಿಸಿದೆ.</p>.<p class="title">ಮಂಗಳವಾರ ಪಿಟಿಐ ಪಕ್ಷದ ಪ್ರತಿಭಟನೆಗಳು ಮತ್ತು ಮೆರವಣಿಗೆಗಳ ಮೇಲೆ ಪಾಕಿಸ್ತಾನ ಸರ್ಕಾರ ನಿರ್ಬಂಧ ಹೇರಿತ್ತು. ಬುಧವಾರ ರಸ್ತೆಗಳನ್ನು ಬಂದ್ ಮಾಡಿದ ಸರ್ಕಾರ, ಹಲವು ನಗರಗಳಲ್ಲಿ ಇಮ್ರಾನ್ ಖಾನ್ ಅವರ ನೂರಾರು ಬೆಂಬಲಿಗರನ್ನು ಬಂಧಿಸುತ್ತಿದೆ. ಈ ಮೂಲಕ ಖಾನ್ ಕರೆಕೊಟ್ಟಿರುವ ‘ಆಜಾದಿ ಮೆರವಣಿಗೆ’ಯಲ್ಲಿ ಪಾಲ್ಗೊಳ್ಳದಂತೆ ಕ್ರಮ ಕೈಗೊಳ್ಳಲಾಗುತ್ತಿದೆ.</p>.<p>ಪ್ರಧಾನಿಶಾಹಬಾಝ್ ಷರೀಫ್ ನೇತೃತ್ವದ ಸರ್ಕಾರ ಮೊದಲಿಗೆ ಈ ಪ್ರತಿಭಟನೆಗೆ ಅವಕಾಶ ನೀಡಿತ್ತು. ಆದರೆ, ಮೆರವಣಿಗೆಯಿಂದ ಕಾನೂನು ಸುವ್ಯವಸ್ಥೆ ಹಾಳಾಗಿ, ಹಿಂಸಾಚಾರ ತಲೆದೋರಬಹುದು ಎಂಬ ಭೀತಿಯಿಂದಾಗಿ, ಪ್ರತಿಭಟನೆಗೆ ನೀಡಲಾಗಿದ್ದ ಅವಕಾಶವನ್ನು ಮಂಗಳವಾರ ಹಿಂಪಡೆಯಲಾಗಿತ್ತು. ಜೊತೆಗೆ ಲಾಹೋರ್, ಇಸ್ಲಾಮಾಬಾದ್, ಕರಾಚಿ ಹಾಗೂ ರಾವಲ್ಪಿಂಡಿ ಸೇರಿದಂತೆ ಇನ್ನಿತರ ಪ್ರಮುಖ ನಗರಗಳಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ.</p>.<p>ರಾಷ್ಟ್ರೀಯ ಅಸೆಂಬ್ಲಿಯನ್ನು ವಿಸರ್ಜಿಸಿ, ದೇಶದಲ್ಲಿ ಚುನಾವಣೆ ನಡೆಸಬೇಕು ಎಂದು ಒತ್ತಾಯಿಸಿ ಬುಧವಾರ ರಾಜಧಾನಿ ಇಸ್ಲಾಮಾಬಾದ್ಗೆ ಶಾಂತಿಯುತ ಮೆರವಣಿಗೆ ನಡೆಸುವಂತೆ ತಮ್ಮ ಬೆಂಬಲಿಗರಿಗೆ ಇಮ್ರಾನ್ ಖಾನ್ ಕರೆ ನೀಡಿದ್ದರು.</p>.<p>ಆದರೆ, ರಾಷ್ಟ್ರೀಯ ಅಸೆಂಬ್ಲಿಯನ್ನು ವಿಸರ್ಜಿಸಿ ಚುನಾವಣೆ ಎದುರಿಸುವ ವಿರೋಧ ಪಕ್ಷದ ಕೋರಿಕೆಯನ್ನು ಪಾಕಿಸ್ತಾನ ಸರ್ಕಾರ ನಿರಾಕರಿಸಿತ್ತು. ಅಲ್ಲದೆ, ನಿಗದಿಯಂತೆ ಮುಂದಿನ ವರ್ಷವೇ ಚುನಾವಣೆ ನಡೆಯಲಿದೆ ಎಂದು ಹೇಳಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>