<p><strong>ಲಾಹೋರ್: </strong>ಪಾಕಿಸ್ತಾನ ಸರ್ಕಾರವು ಸೋಮವಾರ ನಿಷೇಧಿತ ತೆಹ್ರಿಕ್-ಇ-ಲಬೈಕ್ ಪಾಕಿಸ್ತಾನ್ (ಟಿಎಲ್ಪಿ) ಸಂಘಟನೆಯ 350 ಕಾರ್ಯಕರ್ತರನ್ನು ಬಿಡುಗಡೆ ಮಾಡಿದೆ ಎಂದು ಅಲ್ಲಿನ ಆತಂರಿಕ ಸಚಿವ ಶೇಖ್ ರಶೀದ್ ತಿಳಿಸಿದ್ದಾರೆ.</p>.<p>ಇದಕ್ಕೆ ಖಂಡನೆ ವ್ಯಕ್ತಪಡಿಸಿರುವ ವಿರೋಧ ಪಕ್ಷಗಳು ಈ ಕ್ರಮವನ್ನು ಟಿಎಲ್ಪಿಯ ಬೇಡಿಕೆಗಳಿಗೆ ಸಂಪೂರ್ಣ ಶರಣಾಗತಿ ಎಂದು ಬಣ್ಣಿಸಿವೆ.</p>.<p>ಸಂಘಟನೆಯ ಮುಖ್ಯಸ್ಥ ಸಾದ್ ರಿಜ್ವಿಯನ್ನು ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಮುರಿಡ್ಕೆ ಮತ್ತು ಗುಜ್ರಾನ್ ವಾಲಾ ನಡುವಿನ ರಸ್ತೆಯಲ್ಲಿ 10,000 ಕ್ಕೂ ಹೆಚ್ಚು ಇಸ್ಲಾಮಿಕ್ ಕಾರ್ಯಕರ್ತರು ಮೊಕ್ಕಾಂ ಹೂಡಿದ್ದಾರೆ. ಈ ಗುಂಪು ಇಸ್ಲಾಮಾಬಾದ್ಗೆ ಆಗಮಿಸದಂತೆ ತಡೆಯುವ ನಿಟ್ಟಿನಲ್ಲಿ ಸರ್ಕಾರವು ಸಂಘಟನೆಯ 350 ಕಾರ್ಯಕರ್ತರನ್ನು ಬಿಡುಗಡೆಗೊಳಿಸಿದೆ.</p>.<p>ಒಂದು ವೇಳೆ ಎರಡು ದಿನಗಳೊಳಗೆ ಸಾದ್ ರಿಜ್ವಿಯ ಬಿಡುಗಡೆ ಮತ್ತು ಫ್ರಾನ್ಸ್ ರಾಯಭಾರಿಯನ್ನು ಅಮಾನತುಗೊಳಿಸಬೇಕೆಂಬ ತಮ್ಮ ಬೇಡಿಕೆಯನ್ನು ಈಡೇರಿಸದಿದ್ದಲ್ಲಿ ಧರಣಿಯನ್ನು ನಡೆಸುವುದಾಗಿ ಸಂಘಟನೆ ಎಚ್ಚರಿಕೆ ನೀಡಿದೆ.</p>.<p>ಕಳೆದ ವಾರ ಲಾಹೋರ್ನಲ್ಲಿ ನಡೆದ ಪ್ರತಿಭಟನೆ ವೇಳೆ ಟಿಎಲ್ಪಿಯ ಹಲವು ಕಾರ್ಯಕರ್ತರನ್ನು ಬಂಧಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಾಹೋರ್: </strong>ಪಾಕಿಸ್ತಾನ ಸರ್ಕಾರವು ಸೋಮವಾರ ನಿಷೇಧಿತ ತೆಹ್ರಿಕ್-ಇ-ಲಬೈಕ್ ಪಾಕಿಸ್ತಾನ್ (ಟಿಎಲ್ಪಿ) ಸಂಘಟನೆಯ 350 ಕಾರ್ಯಕರ್ತರನ್ನು ಬಿಡುಗಡೆ ಮಾಡಿದೆ ಎಂದು ಅಲ್ಲಿನ ಆತಂರಿಕ ಸಚಿವ ಶೇಖ್ ರಶೀದ್ ತಿಳಿಸಿದ್ದಾರೆ.</p>.<p>ಇದಕ್ಕೆ ಖಂಡನೆ ವ್ಯಕ್ತಪಡಿಸಿರುವ ವಿರೋಧ ಪಕ್ಷಗಳು ಈ ಕ್ರಮವನ್ನು ಟಿಎಲ್ಪಿಯ ಬೇಡಿಕೆಗಳಿಗೆ ಸಂಪೂರ್ಣ ಶರಣಾಗತಿ ಎಂದು ಬಣ್ಣಿಸಿವೆ.</p>.<p>ಸಂಘಟನೆಯ ಮುಖ್ಯಸ್ಥ ಸಾದ್ ರಿಜ್ವಿಯನ್ನು ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಮುರಿಡ್ಕೆ ಮತ್ತು ಗುಜ್ರಾನ್ ವಾಲಾ ನಡುವಿನ ರಸ್ತೆಯಲ್ಲಿ 10,000 ಕ್ಕೂ ಹೆಚ್ಚು ಇಸ್ಲಾಮಿಕ್ ಕಾರ್ಯಕರ್ತರು ಮೊಕ್ಕಾಂ ಹೂಡಿದ್ದಾರೆ. ಈ ಗುಂಪು ಇಸ್ಲಾಮಾಬಾದ್ಗೆ ಆಗಮಿಸದಂತೆ ತಡೆಯುವ ನಿಟ್ಟಿನಲ್ಲಿ ಸರ್ಕಾರವು ಸಂಘಟನೆಯ 350 ಕಾರ್ಯಕರ್ತರನ್ನು ಬಿಡುಗಡೆಗೊಳಿಸಿದೆ.</p>.<p>ಒಂದು ವೇಳೆ ಎರಡು ದಿನಗಳೊಳಗೆ ಸಾದ್ ರಿಜ್ವಿಯ ಬಿಡುಗಡೆ ಮತ್ತು ಫ್ರಾನ್ಸ್ ರಾಯಭಾರಿಯನ್ನು ಅಮಾನತುಗೊಳಿಸಬೇಕೆಂಬ ತಮ್ಮ ಬೇಡಿಕೆಯನ್ನು ಈಡೇರಿಸದಿದ್ದಲ್ಲಿ ಧರಣಿಯನ್ನು ನಡೆಸುವುದಾಗಿ ಸಂಘಟನೆ ಎಚ್ಚರಿಕೆ ನೀಡಿದೆ.</p>.<p>ಕಳೆದ ವಾರ ಲಾಹೋರ್ನಲ್ಲಿ ನಡೆದ ಪ್ರತಿಭಟನೆ ವೇಳೆ ಟಿಎಲ್ಪಿಯ ಹಲವು ಕಾರ್ಯಕರ್ತರನ್ನು ಬಂಧಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>