<p><strong>ಇಸ್ಲಾಮಾಬಾದ್</strong>: ಪಾಕಿಸ್ತಾನದ ಮೂಲಕ ಭಾರತದ ಗೋಧಿ ಸಾಗಣೆಗೆ ಅನುಮತಿ ನೀಡುವಂತೆ ಅಫ್ಗಾನಿಸ್ತಾನದ ಮನವಿಯನ್ನು ಪರಿಗಣಿಸುವುದಾಗಿ ಪ್ರಧಾನಿ ಇಮ್ರಾನ್ ಖಾನ್ ಶುಕ್ರವಾರ ಹೇಳಿದ್ದಾರೆ.</p>.<p>ಈ ವಿಚಾರವಾಗಿ ಮಾತನಾಡಿರುವ ಅವರು, ‘ಸಂಕಷ್ಟದಲ್ಲಿರುವ ದೇಶವೊಂದರ ಗಂಭೀರ ಬಿಕ್ಕಟ್ಟನ್ನು ಪರಿಹರಿಸಲು ಅಂತರರಾಷ್ಟ್ರೀಯ ಸಮುದಾಯವು ಸಾಮೂಹಿಕ ಜವಾಬ್ದಾರಿಯನ್ನು ಹೊಂದಬೇಕು‘ ಎಂದು ಪ್ರತಿಪಾದಿಸಿದ್ದಾರೆ.</p>.<p>‘ಪಾಕಿಸ್ತಾನದ ಮೂಲಕ ಭಾರತದ ಗೋಧಿ ಸಾಗಣೆಗೆ ಅವಕಾಶ ಮಾಡಿಕೊಡುವಂತೆ ಅಫ್ಗನ್ ಸಹೋದರರು ಮನವಿ ಮಾಡಿದ್ದಾರೆ. ಅದನ್ನು ನಾವು ಪರಿಗಣಿಸುತ್ತೇವೆ‘ ಎಂದು ಖಾನ್ ಹೇಳಿದ್ದಾರೆ.</p>.<p>ಅಪ್ಗಾನಿಸ್ತಾನದ ವಿದೇಶಾಂಗ ಸಚಿವ ಅಮೀರ್ ಖಾನ್ ಅವರನ್ನು ಒಳಗೊಂಡ ನಿಯೋಗವು ಇಮ್ರಾನ್ ಖಾನ್ ಅವರಿಗೆ ಈ ಮನವಿಯನ್ನು ಸಲ್ಲಿಸಿದೆ.</p>.<p>ಅಫ್ಗನ್ ಜನರ ಮೂಲಭೂತ ಅಗತ್ಯಗಳಿಗೆ ಭಾರತವು ಕೊಡುಗೆ ನೀಡುತ್ತಲೇ ಬಂದಿದೆ. ಕಳೆದ ದಶಕದಲ್ಲಿ ಅಫ್ಗಾನಿಸ್ತಾನಕ್ಕೆ 1 ಮಿಲಿಯನ್ ಮೆಟ್ರಿಕ್ ಟನ್ಗಳಿಗಿಂತ ಹೆಚ್ಚು ಗೋಧಿಯನ್ನು ಒದಗಿಸಿದೆ.</p>.<p>ಕಳೆದ ವರ್ಷ ಭಾರತವು 75,000 ಮೆಟ್ರಿಕ್ ಟನ್ ಗೋಧಿಯನ್ನು ಅಫ್ಗಾನಿಸ್ತಾನಕ್ಕೆ ರವಾನಿಸಿದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಸೆಪ್ಟೆಂಬರ್ನಲ್ಲಿ ತಿಳಿಸಿದ್ದರು.</p>.<p>ಆಗಸ್ಟ್ 15ರಂದು ಕಾಬೂಲ್ ಅನ್ನು ತಾಲಿಬಾನ್ ವಶಪಡಿಸಿಕೊಂಡ ಬಳಿಕ ಪಾಕಿಸ್ತಾನವು, ಜಗತ್ತಿನ ಇತರೆ ದೇಶಗಳಿಗೆ ತಾಲಿಬಾನ್ ಜೊತೆಗೆ ರಾಜತಾಂತ್ರಿಕವಾಗಿ ವ್ಯವಹರಿಸಬೇಕು ಎಂದು ಮನವೊಲಿಸಲು ಯತ್ನಿಸುತ್ತಿದೆ. ಆದರೆ, ಅಂತರರಾಷ್ಟ್ರೀಯ ಸಮುದಾಯ ಇಂದಿಗೂ ತಾಲಿಬಾನ್ ಕುರಿತಂತೆ ಸಂಶಯಾಸ್ಪದ ಭಾವನೆಯನ್ನೇ ಹೊಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್</strong>: ಪಾಕಿಸ್ತಾನದ ಮೂಲಕ ಭಾರತದ ಗೋಧಿ ಸಾಗಣೆಗೆ ಅನುಮತಿ ನೀಡುವಂತೆ ಅಫ್ಗಾನಿಸ್ತಾನದ ಮನವಿಯನ್ನು ಪರಿಗಣಿಸುವುದಾಗಿ ಪ್ರಧಾನಿ ಇಮ್ರಾನ್ ಖಾನ್ ಶುಕ್ರವಾರ ಹೇಳಿದ್ದಾರೆ.</p>.<p>ಈ ವಿಚಾರವಾಗಿ ಮಾತನಾಡಿರುವ ಅವರು, ‘ಸಂಕಷ್ಟದಲ್ಲಿರುವ ದೇಶವೊಂದರ ಗಂಭೀರ ಬಿಕ್ಕಟ್ಟನ್ನು ಪರಿಹರಿಸಲು ಅಂತರರಾಷ್ಟ್ರೀಯ ಸಮುದಾಯವು ಸಾಮೂಹಿಕ ಜವಾಬ್ದಾರಿಯನ್ನು ಹೊಂದಬೇಕು‘ ಎಂದು ಪ್ರತಿಪಾದಿಸಿದ್ದಾರೆ.</p>.<p>‘ಪಾಕಿಸ್ತಾನದ ಮೂಲಕ ಭಾರತದ ಗೋಧಿ ಸಾಗಣೆಗೆ ಅವಕಾಶ ಮಾಡಿಕೊಡುವಂತೆ ಅಫ್ಗನ್ ಸಹೋದರರು ಮನವಿ ಮಾಡಿದ್ದಾರೆ. ಅದನ್ನು ನಾವು ಪರಿಗಣಿಸುತ್ತೇವೆ‘ ಎಂದು ಖಾನ್ ಹೇಳಿದ್ದಾರೆ.</p>.<p>ಅಪ್ಗಾನಿಸ್ತಾನದ ವಿದೇಶಾಂಗ ಸಚಿವ ಅಮೀರ್ ಖಾನ್ ಅವರನ್ನು ಒಳಗೊಂಡ ನಿಯೋಗವು ಇಮ್ರಾನ್ ಖಾನ್ ಅವರಿಗೆ ಈ ಮನವಿಯನ್ನು ಸಲ್ಲಿಸಿದೆ.</p>.<p>ಅಫ್ಗನ್ ಜನರ ಮೂಲಭೂತ ಅಗತ್ಯಗಳಿಗೆ ಭಾರತವು ಕೊಡುಗೆ ನೀಡುತ್ತಲೇ ಬಂದಿದೆ. ಕಳೆದ ದಶಕದಲ್ಲಿ ಅಫ್ಗಾನಿಸ್ತಾನಕ್ಕೆ 1 ಮಿಲಿಯನ್ ಮೆಟ್ರಿಕ್ ಟನ್ಗಳಿಗಿಂತ ಹೆಚ್ಚು ಗೋಧಿಯನ್ನು ಒದಗಿಸಿದೆ.</p>.<p>ಕಳೆದ ವರ್ಷ ಭಾರತವು 75,000 ಮೆಟ್ರಿಕ್ ಟನ್ ಗೋಧಿಯನ್ನು ಅಫ್ಗಾನಿಸ್ತಾನಕ್ಕೆ ರವಾನಿಸಿದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಸೆಪ್ಟೆಂಬರ್ನಲ್ಲಿ ತಿಳಿಸಿದ್ದರು.</p>.<p>ಆಗಸ್ಟ್ 15ರಂದು ಕಾಬೂಲ್ ಅನ್ನು ತಾಲಿಬಾನ್ ವಶಪಡಿಸಿಕೊಂಡ ಬಳಿಕ ಪಾಕಿಸ್ತಾನವು, ಜಗತ್ತಿನ ಇತರೆ ದೇಶಗಳಿಗೆ ತಾಲಿಬಾನ್ ಜೊತೆಗೆ ರಾಜತಾಂತ್ರಿಕವಾಗಿ ವ್ಯವಹರಿಸಬೇಕು ಎಂದು ಮನವೊಲಿಸಲು ಯತ್ನಿಸುತ್ತಿದೆ. ಆದರೆ, ಅಂತರರಾಷ್ಟ್ರೀಯ ಸಮುದಾಯ ಇಂದಿಗೂ ತಾಲಿಬಾನ್ ಕುರಿತಂತೆ ಸಂಶಯಾಸ್ಪದ ಭಾವನೆಯನ್ನೇ ಹೊಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>