ಇಸ್ಲಾಮಾಬಾದ್: ‘ಭಾರತದ ಜೊತೆ ರಚನಾತ್ಮಕ ಮತ್ತು ಫಲಪ್ರದವಾದ ಮಾತುಕತೆ ನಡೆಸಲು ಸೂಕ್ತ ವಾತಾವರಣವಿಲ್ಲ’ ಎಂದು ಪಾಕಿಸ್ತಾನದ ವಿದೇಶಾಂಗ ಕಚೇರಿಯ ವಕ್ತಾರ ಆಸಿಂ ಇಫ್ತಿಕಾರ್ ಶುಕ್ರವಾರ ಹೇಳಿದ್ದಾರೆ.
ಭಾರತದ ಜೊತೆಗಿನ ವಿವಾದಗಳನ್ನು ಶಾಂತಿಯುತವಾಗಿ ಇತ್ಯರ್ಥಪಡಿಸುವ ನೀತಿಯನ್ನು ಪಾಕಿಸ್ತಾನದ ಹೊಸ ಸರ್ಕಾರವೂ ಅನುಸರಿಸುತ್ತಿದೆ ಎಂದಿದ್ದಾರೆ.
ವಿವಾದಗಳನ್ನು ರಾಜತಾಂತ್ರಿಕವಾಗಿ ಇತ್ಯರ್ಥಪಡಿಸಲು ನಾವು ಬಯಸುತ್ತೇವೆ. ರಾಜತಾಂತ್ರಿಕತೆಯಲ್ಲಿ ನೀವು ಎಂದಿಗೂ ಬಾಗಿಲು ಮುಚ್ಚುವುದಿಲ್ಲ ಎಂದೂ ಆಸಿಂ ಅವರು ಹೇಳಿದ್ದಾರೆ.
ಭಯೋತ್ಪಾದನೆ, ಹಗೆತನ ಮತ್ತು ಹಿಂಸಾಚಾರ ಮುಕ್ತ ವಾತಾವರಣದಲ್ಲಿ ಪಾಕಿಸ್ತಾನದ ಜೊತೆ ಸಾಮಾನ್ಯ ನೆರೆಯ ರಾಷ್ಟ್ರದ ಜೊತೆಗಿನ ಸಂಬಂಧವನ್ನು ಬಯಸುವುದಾಗಿ ಭಾರತವು ಪದೇ ಪದೇ ಹೇಳುತ್ತಿದೆ. ಇಂತಹ ವಾತಾವರಣ ನಿರ್ಮಿಸುವ ಜವಾಬ್ದಾರಿ ಪಾಕಿಸ್ತಾನದ ಮೇಲಿದೆ ಎಂದೂ ಹೇಳಿದೆ.