<p><strong>ಇಸ್ಲಾಮಾಬಾದ್</strong>: ಭಾರತ ಮತ್ತು ಪಾಕಿಸ್ತಾನದ ನಡುವೆ ಇರುವ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಟಿ.ವಿಯಲ್ಲಿ ಚರ್ಚೆ ನಡೆಸಲು ಬಯಸುವುದಾಗಿ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಮಂಗಳವಾರ ಹೇಳಿದ್ದಾರೆ.</p>.<p>ರಷ್ಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ಅವರು, ’ನರೇಂದ್ರ ಮೋದಿ ಅವರೊಂದಿಗೆ ದೂರದರ್ಶನದಲ್ಲಿ ಚರ್ಚಿಸಲು ಇಷ್ಟಪಡುತ್ತೇನೆ. ಈ ಮೂಲಕಭಿನ್ನಾಭಿಪ್ರಾಯಗಳನ್ನು ಬಗೆಹರಿಸಬಹುದಾಗಿದೆ. ಇದರಿಂದ ಉಪಖಂಡದ ಶತಕೋಟಿ ಜನರಿಗೆ ಉಪಯೋಗ ಆಗಲಿದೆ‘ ಎಂದಿದ್ದಾರೆ.</p>.<p>ಭಾರತದೊಂದಿಗೆ ಪ್ರತಿಕೂಲ ಹೆಚ್ಚಿದಂತೆ ಅದರ ನಡುವಿನ ವ್ಯಾಪಾರವೂ ಕಡಿಮೆಯಾಯಿತು. ಎಲ್ಲಾ ದೇಶಗಳೊಂದಿಗೆ ವ್ಯಾಪಾರ ಸಂಬಂಧಗಳನ್ನು ಹೊಂದುವುದು ನಮ್ಮ ಸರ್ಕಾರದ ನೀತಿಯಾಗಿದೆ ಎಂದು ತಿಳಿಸಿದ್ದಾರೆ.</p>.<p>ಉಕ್ರೇನ್ಬಿಕ್ಕಟ್ಟು ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ ಇಮ್ರಾನ್, ನಾವು ರಷ್ಯಾದೊಂದಿಗೆ ದ್ವಿಪಕ್ಷೀಯ ಸಂಬಂಧವನ್ನು ಗಟ್ಟಿಗೊಳಿಸಲು ಬಯಸುತ್ತೇವೆ ಎಂದು ಹೇಳಿದ್ದಾರೆ.</p>.<p>ರಷ್ಯಾ–ಉಕ್ರೇನ್ ಬಿಕ್ಕಟ್ಟಿನ ನಡುವೆಯೂ ಆರ್ಥಿಕ ಮತ್ತು ವ್ಯಾಪಾರ ಸಹಕಾರ ಕುರಿತು ದ್ವಿಪಕ್ಷೀಯ ಮಾತುಕತೆ ನಡೆಸಲು ಇದೇ 23, 24ರಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಮೊದಲ ಬಾರಿಗೆ ರಷ್ಯಾಗೆ ಭೇಟಿ ನೀಡಲಿದ್ದಾರೆ.</p>.<p><a href="https://www.prajavani.net/india-news/akhilesh-yadav-swears-by-god-to-protect-terrorist-not-constitution-alleges-jp-nadda-913318.html" itemprop="url">ಭಯೋತ್ಪಾದಕರನ್ನು ರಕ್ಷಿಸುವುದಕ್ಕಾಗಿ ಅಖಿಲೇಶ್ ಪ್ರಮಾಣವಚನ: ಜೆ.ಪಿ. ನಡ್ಡಾ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್</strong>: ಭಾರತ ಮತ್ತು ಪಾಕಿಸ್ತಾನದ ನಡುವೆ ಇರುವ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಟಿ.ವಿಯಲ್ಲಿ ಚರ್ಚೆ ನಡೆಸಲು ಬಯಸುವುದಾಗಿ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಮಂಗಳವಾರ ಹೇಳಿದ್ದಾರೆ.</p>.<p>ರಷ್ಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ಅವರು, ’ನರೇಂದ್ರ ಮೋದಿ ಅವರೊಂದಿಗೆ ದೂರದರ್ಶನದಲ್ಲಿ ಚರ್ಚಿಸಲು ಇಷ್ಟಪಡುತ್ತೇನೆ. ಈ ಮೂಲಕಭಿನ್ನಾಭಿಪ್ರಾಯಗಳನ್ನು ಬಗೆಹರಿಸಬಹುದಾಗಿದೆ. ಇದರಿಂದ ಉಪಖಂಡದ ಶತಕೋಟಿ ಜನರಿಗೆ ಉಪಯೋಗ ಆಗಲಿದೆ‘ ಎಂದಿದ್ದಾರೆ.</p>.<p>ಭಾರತದೊಂದಿಗೆ ಪ್ರತಿಕೂಲ ಹೆಚ್ಚಿದಂತೆ ಅದರ ನಡುವಿನ ವ್ಯಾಪಾರವೂ ಕಡಿಮೆಯಾಯಿತು. ಎಲ್ಲಾ ದೇಶಗಳೊಂದಿಗೆ ವ್ಯಾಪಾರ ಸಂಬಂಧಗಳನ್ನು ಹೊಂದುವುದು ನಮ್ಮ ಸರ್ಕಾರದ ನೀತಿಯಾಗಿದೆ ಎಂದು ತಿಳಿಸಿದ್ದಾರೆ.</p>.<p>ಉಕ್ರೇನ್ಬಿಕ್ಕಟ್ಟು ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ ಇಮ್ರಾನ್, ನಾವು ರಷ್ಯಾದೊಂದಿಗೆ ದ್ವಿಪಕ್ಷೀಯ ಸಂಬಂಧವನ್ನು ಗಟ್ಟಿಗೊಳಿಸಲು ಬಯಸುತ್ತೇವೆ ಎಂದು ಹೇಳಿದ್ದಾರೆ.</p>.<p>ರಷ್ಯಾ–ಉಕ್ರೇನ್ ಬಿಕ್ಕಟ್ಟಿನ ನಡುವೆಯೂ ಆರ್ಥಿಕ ಮತ್ತು ವ್ಯಾಪಾರ ಸಹಕಾರ ಕುರಿತು ದ್ವಿಪಕ್ಷೀಯ ಮಾತುಕತೆ ನಡೆಸಲು ಇದೇ 23, 24ರಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಮೊದಲ ಬಾರಿಗೆ ರಷ್ಯಾಗೆ ಭೇಟಿ ನೀಡಲಿದ್ದಾರೆ.</p>.<p><a href="https://www.prajavani.net/india-news/akhilesh-yadav-swears-by-god-to-protect-terrorist-not-constitution-alleges-jp-nadda-913318.html" itemprop="url">ಭಯೋತ್ಪಾದಕರನ್ನು ರಕ್ಷಿಸುವುದಕ್ಕಾಗಿ ಅಖಿಲೇಶ್ ಪ್ರಮಾಣವಚನ: ಜೆ.ಪಿ. ನಡ್ಡಾ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>