ಸತತ 4 ಗಂಟೆ ಕಾರ್ಯಾಚರಣೆ ಬಳಿಕ ಶುಕ್ರವಾರ ರಾತ್ರಿ 10.30ರ ಸುಮಾರಿಗೆ 5 ಅಂತಸ್ತಿನ ಕೇಂದ್ರ ಕಚೇರಿ ಮೇಲೆ ಮತ್ತೆ ನಿಯಂತ್ರಣ ಸಾಧಿಸುವಲ್ಲಿ ಭದ್ರತಾ ಪಡೆ ಯಶಸ್ವಿಯಾಗಿದೆ. ಈ ಕಾಳಗದಲ್ಲಿ ಇಬ್ಬರು ಕಾನ್ಸ್ಟೇಬಲ್, ಒಬ್ಬ ಅಧಿಕಾರಿ ಮತ್ತು ಒಬ್ಬ ನಾಗರಿಕ ಸಹ ಮೃತಪಟ್ಟಿದ್ದಾರೆ. ಟಿಟಿಪಿ ಮತ್ತು ಭದ್ರತಾ ಪಡೆ ಸಿಬ್ಬಂದಿ ನಡುವೆ ಭಾರಿ ಗುಂಡಿನ ಕಾಳಗ ನಡೆದಿದೆ.