ಆದರೆ ಗುರುವಾರ ಭಾರತದ ರಾಯಭಾರಿ ಅಧಿಕಾರಿಯನ್ನು ಕರೆಸಿಕೊಂಡ ಪಾಕಿಸ್ತಾನದ ವಿದೇಶಾಂಗ ಕಾರ್ಯಾಲಯ, 'ಕ್ಷೇತ್ರ ಪುನರ್ ವಿಂಗಡಣೆ ಆಯೋಗವು, ಜಮ್ಮು-ಕಾಶ್ಮೀರದಲ್ಲಿನ ಮುಸ್ಲಿಂ ಸಮುದಾಯದ ಹಕ್ಕು ನಿರಾಕರಣೆ ಮತ್ತು ಬಲಹೀನಗೊಳಿಸುವ ಗುರಿಯನ್ನು ಹೊಂದಿದೆ' ಎಂದು ಆರೋಪಿಸಿದೆ. ಅಲ್ಲದೆ ಜಮ್ಮು-ಕಾಶ್ಮೀರದ ಕ್ಷೇತ್ರ ಪುನರ್ ವಿಂಗಡಣೆ ಆಯೋಗದ ವರದಿಯನ್ನು ನಿರಾಕರಿಸುವುದಾಗಿ ಹೇಳಿದೆ.