ಜಮ್ಮು ಮತ್ತು ಕಾಶ್ಮೀರ ಕ್ಷೇತ್ರ ಪುನರ್ ವಿಂಗಡಣೆ ವರದಿಗೆ ಪಾಕಿಸ್ತಾನ ಆಕ್ಷೇಪ

ಇಸ್ಲಾಮಾಬಾದ್(ಪಿಟಿಐ): ಕೇಂದ್ರಾಡಳಿತ ಪ್ರದೇಶವಾದ ಜಮ್ಮು-ಕಾಶ್ಮೀರ ವಿಧಾನಸಭೆ ಕ್ಷೇತ್ರಗಳ ಪುನರ್ ವಿಂಗಡಣೆಗೆ ಸಂಬಂಧಿಸಿದ ಆಯೋಗದ ವರದಿಯನ್ನು ಪಾಕಿಸ್ತಾನ ತಿರಸ್ಕರಿಸಿದೆ.
ಆದರೆ ಗುರುವಾರ ಭಾರತದ ರಾಯಭಾರಿ ಅಧಿಕಾರಿಯನ್ನು ಕರೆಸಿಕೊಂಡ ಪಾಕಿಸ್ತಾನದ ವಿದೇಶಾಂಗ ಕಾರ್ಯಾಲಯ, 'ಕ್ಷೇತ್ರ ಪುನರ್ ವಿಂಗಡಣೆ ಆಯೋಗವು, ಜಮ್ಮು-ಕಾಶ್ಮೀರದಲ್ಲಿನ ಮುಸ್ಲಿಂ ಸಮುದಾಯದ ಹಕ್ಕು ನಿರಾಕರಣೆ ಮತ್ತು ಬಲಹೀನಗೊಳಿಸುವ ಗುರಿಯನ್ನು ಹೊಂದಿದೆ' ಎಂದು ಆರೋಪಿಸಿದೆ. ಅಲ್ಲದೆ ಜಮ್ಮು-ಕಾಶ್ಮೀರದ ಕ್ಷೇತ್ರ ಪುನರ್ ವಿಂಗಡಣೆ ಆಯೋಗದ ವರದಿಯನ್ನು ನಿರಾಕರಿಸುವುದಾಗಿ ಹೇಳಿದೆ.
ನ್ಯಾ. ರಂಜನಾ ದೇಸಾಯಿ ನೇತೃತ್ವದ ಮೂವರು ಸದಸ್ಯರ ಪುನರ್ ವಿಂಗಡಣೆ ಆಯೋಗವು, ಜಮ್ಮು-ಕಾಶ್ಮೀರದ ಕ್ಷೇತ್ರಗಳ ಪುನರ್ ವಿಂಗಡಣೆಗೆ ಸಂಬಂಧಿಸಿದ ಆದೇಶಕ್ಕೆ ಅಂಕಿತ ಹಾಕಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.