ಭಾರತದ ರಾಜತಾಂತ್ರಿಕ ಅಧಿಕಾರಿಗೆ ಪಾಕ್ ಸಮನ್ಸ್

ಇಸ್ಲಾಮಾಬಾದ್: ಗಡಿ ನಿಯಂತ್ರಣ ರೇಖೆಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಪಾಕಿಸ್ತಾನ, ಭಾರತದ ಹೈಕಮಿಷನ್ ಕಚೇರಿಯ ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ಕರೆಯಿಸಿಕೊಂಡು ಗುರುವಾರ ಪ್ರತಿಭಟನೆ ದಾಖಲಿಸಿದೆ.
ಕಳೆದ ಬುಧವಾರ ಭಾರತೀಯ ಪಡೆಗಳು ಬಾಕ್ಸರ್ ವಲಯದಲ್ಲಿ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಪಾಕ್ ವಿದೇಶಾಂಗ ಕಚೇರಿ ತಿಳಿಸಿದೆ.
2003ರ ಕದನ ವಿರಾಮ ಒಪ್ಪಂದವನ್ನು ಗೌರವಿಸಬೇಕು. ಮೇಲಿಂದ ಮೇಲೆ ನಡೆಯುತ್ತಿರುವ ಅಪ್ರಚೋದಿತ ಗುಂಡಿನ ದಾಳಿಯ ಬಗ್ಗೆ ತನಿಖೆ ನಡೆಸಬೇಕು ಎಂದು ವಿದೇಶಾಂಗ ಕಚೇರಿ ಒತ್ತಾಯಿಸಿದೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.