ಅಜರ್ ತನ್ನ ಹುಟ್ಟೂರು ಬಹವಾಲ್ಪುರದ ಗೋಪ್ಯ ಸ್ಥಳದಲ್ಲಿ ಅಡಗಿಕೊಂಡಿದ್ದಾನೆ ಎನ್ನಲಾಗಿದೆ. ಮುಂಬೈ ದಾಳಿ ಮತ್ತು ಪುಲ್ವಾಮ ದಾಳಿಯ ಪ್ರಮುಖ ಸಂಚುಕೋರ ಈತ. ಪಠಾಣ್ಕೋಟ್ ವಾಯುನೆಲೆ ಮೇಲಿನ ದಾಳಿ ಸೇರಿದಂತೆ ಐದು ಭಯೋತ್ಪಾದನಾ ಕೃತ್ಯಗಳಲ್ಲಿ ಭಾರತಕ್ಕೆ ಬೇಕಾಗಿರುವ ‘ಮೋಸ್ಟ್ ವಾಟೆಂಡ್’ ಉಗ್ರ. 2019 ಮೇ 1ರಂದು ವಿಶ್ವಸಂಸ್ಥೆಯು ಆತನನ್ನು ‘ಜಾಗತಿಕ ಉಗ್ರ’ ಎಂದು ಘೋಷಿಸಿದೆ.