ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಜಾಧವ್ (51) ಅವರಿಗೆ 2017ರ ಏಪ್ರಿಲ್ನಲ್ಲಿ ಬೇಹುಗಾರಿಕೆ ಮತ್ತು ಭಯೋತ್ಪಾದನೆಯ ಆರೋಪದ ಮೇಲೆ ಮಿಲಿಟರಿ ನ್ಯಾಯಾಲಯ ಮರಣದಂಡನೆ ವಿಧಿಸಿತ್ತು. ಜಾಧವ್ ಅವರ ಮರಣದಂಡನೆ ಆದೇಶ ಪ್ರಶ್ನಿಸಿ ಭಾರತ ಅಂತರರಾಷ್ಟ್ರೀಯ ನ್ಯಾಯಾಲಯಕ್ಕೆ (ಐಸಿಜೆ) ಮೊರೆ ಹೋಗಿತ್ತು. ಈ ಕುರಿತು ಮರುಪರಿಶೀಲಿಸುವಂತೆ ಹಾಗೂ ಮೇಲ್ಮನವಿ ಸಲ್ಲಿಸಲು ಅವಕಾಶ ಕಲ್ಪಿಸುವಂತೆ ಐಸಿಜೆ 2019 ರ ಜುಲೈನಲ್ಲಿ ತೀರ್ಪು ನೀಡಿತ್ತು.