<p><strong>ಇಸ್ಲಾಮಾಬಾದ್: </strong>ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಇಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಾಕಿಸ್ತಾನದ ಆಂತರಿಕ ಸಚಿವ ಶೇಖ್ ರಶೀದ್ ಹೇಳಿದ್ದಾರೆ.</p>.<p>ನಮ್ಮ ಸರ್ಕಾರವನ್ನು ಉರುಳಿಸಲು ವಿದೇಶಿಗರು ಪಿತೂರಿ ನಡೆಸಿದ್ದಾರೆ ಎಂದುಇಮ್ರಾನ್ ಖಾನ್ ಆರೋಪಿಸಿದ್ದಾರೆ.ಈ ಕುರಿತು ಜನರನ್ನುವಿಶ್ವಾಸಕ್ಕೆ ತೆಗೆದುಕೊಳ್ಳುವ ಉದ್ದೇಶದಿಂದ ಅವರುಇಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿವೆ.</p>.<p>ಮುತಾಹಿದಾ ಕ್ವಾಮಿ ಮೂವ್ಮೆಂಟ್ ಪಾಕಿಸ್ತಾನ್ (ಎಂಕ್ಯುಎಂ-ಪಿ) ಪಕ್ಷವು ಪಾಕಿಸ್ತಾನದ ತೆಹ್ರೀಕ್-ಇ-ಇನ್ಸಾಫ್ನ (ಪಿಟಿಐ) ಮೈತ್ರಿಯನ್ನು ತೊರೆದು ವಿರೋಧ ಪಕ್ಷಗಳೊಂದಿಗೆ ಕೈಜೋಡಿಸಿದೆ. ಆ ಹಿನ್ನೆಲೆಯಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರ ಪಿಟಿಐ ಪಕ್ಷವು ಬಹುಮತ ಕಳೆದುಕೊಂಡಿದೆ.</p>.<p>ಪ್ರಧಾನಿ ಇಮ್ರಾನ್ ಖಾನ್ ಅಧಿಕಾರ ಉಳಿಸಿಕೊಳ್ಳಲು 342 ಸದಸ್ಯ ಬಲದ ಸಂಸತ್ತಿನಲ್ಲಿ 172 ಮತಗಳನ್ನು ಪಡೆಯುವುದು ಅನಿವಾರ್ಯವಾಗಿದೆ.</p>.<p>ಆಡಳಿತಾರೂಢ ಪಕ್ಷದೊಂದಿಗೆ ಮೈತ್ರಿಯಲ್ಲಿದ್ದ 23 ಸದಸ್ಯರು ಇಮ್ರಾನ್ ಅವರಿಗೆ ನೀಡಿದ್ದ ಬೆಂಬಲವನ್ನು ವಾಪಸ್ಸು ಪಡೆದಿದ್ದಾರೆ.</p>.<p>ಮಾರ್ಚ್ 31ರ ಕಲಾಪದಲ್ಲಿ ಅವಿಶ್ವಾಸ ನಿರ್ಣಯ ಬಗ್ಗೆ ಚರ್ಚೆ ನಡೆಯಲಿದೆ. ಬಳಿಕ ಏಪ್ರಿಲ್ 3ರಂದು ಮತದಾನ ನಡೆಯಲಿದೆ ಎಂದು ಸಚಿವ ಶೇಖ್ ರಶೀದ್ ಮಂಗಳವಾರ ತಿಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್: </strong>ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಇಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಾಕಿಸ್ತಾನದ ಆಂತರಿಕ ಸಚಿವ ಶೇಖ್ ರಶೀದ್ ಹೇಳಿದ್ದಾರೆ.</p>.<p>ನಮ್ಮ ಸರ್ಕಾರವನ್ನು ಉರುಳಿಸಲು ವಿದೇಶಿಗರು ಪಿತೂರಿ ನಡೆಸಿದ್ದಾರೆ ಎಂದುಇಮ್ರಾನ್ ಖಾನ್ ಆರೋಪಿಸಿದ್ದಾರೆ.ಈ ಕುರಿತು ಜನರನ್ನುವಿಶ್ವಾಸಕ್ಕೆ ತೆಗೆದುಕೊಳ್ಳುವ ಉದ್ದೇಶದಿಂದ ಅವರುಇಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿವೆ.</p>.<p>ಮುತಾಹಿದಾ ಕ್ವಾಮಿ ಮೂವ್ಮೆಂಟ್ ಪಾಕಿಸ್ತಾನ್ (ಎಂಕ್ಯುಎಂ-ಪಿ) ಪಕ್ಷವು ಪಾಕಿಸ್ತಾನದ ತೆಹ್ರೀಕ್-ಇ-ಇನ್ಸಾಫ್ನ (ಪಿಟಿಐ) ಮೈತ್ರಿಯನ್ನು ತೊರೆದು ವಿರೋಧ ಪಕ್ಷಗಳೊಂದಿಗೆ ಕೈಜೋಡಿಸಿದೆ. ಆ ಹಿನ್ನೆಲೆಯಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರ ಪಿಟಿಐ ಪಕ್ಷವು ಬಹುಮತ ಕಳೆದುಕೊಂಡಿದೆ.</p>.<p>ಪ್ರಧಾನಿ ಇಮ್ರಾನ್ ಖಾನ್ ಅಧಿಕಾರ ಉಳಿಸಿಕೊಳ್ಳಲು 342 ಸದಸ್ಯ ಬಲದ ಸಂಸತ್ತಿನಲ್ಲಿ 172 ಮತಗಳನ್ನು ಪಡೆಯುವುದು ಅನಿವಾರ್ಯವಾಗಿದೆ.</p>.<p>ಆಡಳಿತಾರೂಢ ಪಕ್ಷದೊಂದಿಗೆ ಮೈತ್ರಿಯಲ್ಲಿದ್ದ 23 ಸದಸ್ಯರು ಇಮ್ರಾನ್ ಅವರಿಗೆ ನೀಡಿದ್ದ ಬೆಂಬಲವನ್ನು ವಾಪಸ್ಸು ಪಡೆದಿದ್ದಾರೆ.</p>.<p>ಮಾರ್ಚ್ 31ರ ಕಲಾಪದಲ್ಲಿ ಅವಿಶ್ವಾಸ ನಿರ್ಣಯ ಬಗ್ಗೆ ಚರ್ಚೆ ನಡೆಯಲಿದೆ. ಬಳಿಕ ಏಪ್ರಿಲ್ 3ರಂದು ಮತದಾನ ನಡೆಯಲಿದೆ ಎಂದು ಸಚಿವ ಶೇಖ್ ರಶೀದ್ ಮಂಗಳವಾರ ತಿಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>