ಇದಕ್ಕೂ ಮುನ್ನ, ಬುದ್ಧ ಪೂರ್ಣಿಮೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮತ್ತು ನೇಪಾಳದ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಹಾಗೂ ಅವರ ಪತ್ನಿ ಡಾ. ಅರ್ಜು ರಾಣಾ ದೇವುಬಾ ಅವರು ಮಾಯಾ ದೇವಿ ದೇವಾಲಯದ ಆವರಣದಲ್ಲಿರುವ ಬುದ್ಧದನ ಜನ್ಮದ ಗುರುತು ಕಲ್ಲಿಗೆ ಗೌರವ ಸಲ್ಲಿಸಿದರು. ಇದನ್ನು ಭಗವಾನ್ ಬುದ್ಧನ ನಿಖರವಾದ ಜನ್ಮ ಸ್ಥಳ ಎಂದು ಗುರುತಿಸಲಾಗುತ್ತದೆ. ಈ ವೇಳೆ ಬೌದ್ಧ ವಿಧಿಗಳ ಪ್ರಕಾರ ಪೂಜೆ ನೆರವೇರಿಸಲಾಯಿತು.