<p><strong>ವಾಷಿಂಗ್ಟನ್:</strong> ಭಾರತದ ವೈವಿಧ್ಯತೆಯೇ ನಮ್ಮ ಪ್ರಜಾಪ್ರಭುತ್ವದ ಹೆಗ್ಗುರುತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.</p>.<p>ವಿಶ್ವಸಂಸ್ಥೆಯ 76ನೇ ಮಹಾ ಅಧಿವೇಶನದಲ್ಲಿ ಅವರು ಭಾಷಣ ಮಾಡಿದರು.</p>.<p>ಆಗಸ್ಟ್ 15ಕ್ಕೆ ಭಾರತವು ಸ್ವಾತಂತ್ರ್ಯೋತ್ಸವದ 75ನೇ ವರ್ಷಕ್ಕೆ ಕಾಲಿಟ್ಟಿದೆ.ವೈವಿಧ್ಯತೆಯೇ ನಮ್ಮ ಪ್ರಜಾಪ್ರಭುತ್ವದ ಹೆಗ್ಗುರುತು ಎಂದು ಮೋದಿ ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/world-news/sneha-dubey-speech-at-united-nations-slams-pakistan-pm-imran-khan-869819.html" itemprop="url">ವಿಶ್ವಸಂಸ್ಥೆಯಲ್ಲಿ ಪಾಕ್ ಪಿಎಂ ಇಮ್ರಾನ್ ಬೆವರಿಳಿಸಿದ ಅಧಿಕಾರಿಣಿ ಸ್ನೇಹಾ ದುಭೆ</a></p>.<p>ಸ್ವಾತಂತ್ರ್ಯೋತ್ಸವದ 75ನೇ ವರ್ಷಾಚರಣೆ ಸಂದರ್ಭದಲ್ಲಿ ಭಾರತವು ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ 75 ಉಪಗ್ರಹಗಳನ್ನು ಉಡಾವಣೆ ಮಾಡಲಿದೆ ಎಂದು ಪ್ರಧಾನಿ ಹೇಳಿದ್ದಾರೆ.</p>.<p>ಅಭಿವೃದ್ಧಿಯುಎಲ್ಲರನ್ನೂ ಒಳಗೊಂಡಿರಬೇಕು ಮತ್ತು ಸಾರ್ವತ್ರಿಕವಾಗಿ ಎಲ್ಲರನ್ನು ಪೋಷಿಸುವಂತಿರಬೇಕು. ಅಂತ್ಯೋದಯ ತತ್ವವನ್ನು ಗಮನದಲ್ಲಿಟ್ಟುಕೊಂಡು ಭಾರತವು ಇಂದು ಸಮಗ್ರ ಮತ್ತು ಸಮಾನತೆಯ ಅಭಿವೃದ್ಧಿಯ ಹಾದಿಯಲ್ಲಿ ಮುನ್ನಡೆಯುತ್ತಿದೆ ಎಂದು ಮೋದಿ ಹೇಳಿದ್ದಾರೆ.</p>.<p>ಭಾರತದಲ್ಲಿ ಲಸಿಕೆ ಉತ್ಪಾದಿಸಲು ವಿಶ್ವದಾದ್ಯಂತ ಇರುವ ಎಲ್ಲಾ ಲಸಿಕೆ ಉತ್ಪಾದಕರನ್ನು ನಾನು ಆಹ್ವಾನಿಸುತ್ತಿದ್ದೇನೆ. ಭಾರತವು ವಿಶ್ವದ ಮೊತ್ತ ಮೊದಲ ಡಿಎನ್ಎ ಆಧಾರಿತ ಲಸಿಕೆ ಅಭಿವೃದ್ಧಿಪಡಿಸುತ್ತಿರುವುದಾಗಿ ಈ ಮೂಲಕ ವಿಶ್ವಕ್ಕೆ ತಿಳಿಸಲು ಬಯಸುತ್ತೇನೆ. ಈ ಲಸಿಕೆಯನ್ನು 12 ವರ್ಷ ಮೇಲ್ಪಟ್ಟ ಎಲ್ಲರಿಗೂ ನೀಡಬಹುದಾಗಿದೆ. ಮೂಗಿನ ಮೂಲಕ ನೀಡಬಹುದಾದ ಲಸಿಕೆಯೂ ಅಭಿವೃದ್ಧಿ ಹಂತದಲ್ಲಿದೆ ಎಂದು ಮೋದಿ ಹೇಳಿದ್ದಾರೆ.</p>.<p>ಭಾರತ ಬೆಳವಣಿಗೆಯಾದಾಗ ಜಗತ್ತು ಬೆಳೆಯುತ್ತದೆ. ಭಾರತ ಸುಧಾರಣೆಯಾದಾಗ ಜಗತ್ತೂ ಬದಲಾಗುತ್ತದೆ.ನಮ್ಮದೇ ಆದ ಹಾದಿಯಲ್ಲಿ ನಾವು ದೃಢವಾಗಿ, ಧೈರ್ಯದಿಂದ ಮುನ್ನಡೆಯಬೇಕು. ಆಗ ಕಷ್ಟಗಳು ದೂರವಾಗುತ್ತವೆ ಎಂದು ರವೀಂದ್ರನಾಥ ಟ್ಯಾಗೋರರು ಹೇಳಿದ್ದರು. ಅವರ ಮಾತಿನಂತೆ ನಾವು ನಡೆಯಬೇಕಿದೆ ಎಂದು ಅವರು ಹೇಳಿದ್ದಾರೆ.</p>.<p>ಭಾರತವು ಕೋಟ್ಯಂತರ ನಿರಾಶ್ರತರನ್ನು ಮನೆ ಮಾಲೀಕರನ್ನಾಗುವಂತೆ ಮಾಡಿದೆ ಎಂದೂ ಅವರು ಹೇಳಿದ್ದಾರೆ.</p>.<p>ಅಫ್ಗಾನಿಸ್ತಾನದ ನೆಲವನ್ನು ಭಯೋತ್ಪಾದನೆ ಹರಡಲು ಮತ್ತು ಉಗ್ರ ಚಟುವಟಿಕೆಗಳಿಗೆ ಬಳಸದಂತೆ ಖಾತರಿಪಡಿಸಿಕೊಳ್ಳಬೇಕಾದದ್ದು ಇಂದಿನ ಅಗತ್ಯವಾಗಿದೆ.ತೀವ್ರವಾದಿ ಚಿಂತನೆ ಮತ್ತು ಉಗ್ರವಾದದ ಅಪಾಯವು ಪ್ರಪಂಚಕ್ಕೆ ಹೆಚ್ಚಾಗಿದೆಎಂದು ಪ್ರಧಾನಿ ಪ್ರತಿಪಾದಿಸಿದ್ದಾರೆ.</p>.<p>ನಮ್ಮ ಸಾಗರಗಳು ಅಂತರರಾಷ್ಟ್ರೀಯ ವ್ಯಾಪಾರ ವಹಿವಾಟಿನ ಜೀವನಾಡಿಯಾಗಿವೆ. ಅವುಗಳನ್ನು ರಕ್ಷಿಸಬೇಕಿದೆ. ನಿಯಮಾಧಾರಿತ ಜಗತ್ತನ್ನು ರೂಪಿಸಲು ಅಂತರರಾಷ್ಟ್ರೀಯ ಸಮುದಾಯ ಒಗ್ಗಟ್ಟಿನಿಂದ ಮಾತನಾಡಬೇಕು ಎಂದು ಮೋದಿ ಹೇಳಿದ್ದಾರೆ.</p>.<p>ನಮ್ಮೆಲ್ಲರ ಪ್ರಯತ್ನದಿಂದಾಗಿ ನಾವು ಜಗತ್ತನ್ನು ಪ್ರತಿಯೊಬ್ಬರಿಗೂ ಇನ್ನಷ್ಟು ಉತ್ತಮ ತಾಣವನ್ನಾಗಿ ಮಾಡಬಹುದು.ವಿಶ್ವಸಂಸ್ಥೆಯು ಪ್ರಸ್ತುತತೆಯನ್ನು ಉಳಿಸಿಕೊಳ್ಳಬೇಕಾದರೆ, ಅದು ಅದರ ಪರಿಣಾಮಕಾರಿತ್ವವನ್ನು ಸುಧಾರಿಸಬೇಕು, ವಿಶ್ವಾಸಾರ್ಹತೆಯನ್ನು ಹೆಚ್ಚಿಸಬೇಕು ಎಂದು ಮೋದಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್:</strong> ಭಾರತದ ವೈವಿಧ್ಯತೆಯೇ ನಮ್ಮ ಪ್ರಜಾಪ್ರಭುತ್ವದ ಹೆಗ್ಗುರುತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.</p>.<p>ವಿಶ್ವಸಂಸ್ಥೆಯ 76ನೇ ಮಹಾ ಅಧಿವೇಶನದಲ್ಲಿ ಅವರು ಭಾಷಣ ಮಾಡಿದರು.</p>.<p>ಆಗಸ್ಟ್ 15ಕ್ಕೆ ಭಾರತವು ಸ್ವಾತಂತ್ರ್ಯೋತ್ಸವದ 75ನೇ ವರ್ಷಕ್ಕೆ ಕಾಲಿಟ್ಟಿದೆ.ವೈವಿಧ್ಯತೆಯೇ ನಮ್ಮ ಪ್ರಜಾಪ್ರಭುತ್ವದ ಹೆಗ್ಗುರುತು ಎಂದು ಮೋದಿ ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/world-news/sneha-dubey-speech-at-united-nations-slams-pakistan-pm-imran-khan-869819.html" itemprop="url">ವಿಶ್ವಸಂಸ್ಥೆಯಲ್ಲಿ ಪಾಕ್ ಪಿಎಂ ಇಮ್ರಾನ್ ಬೆವರಿಳಿಸಿದ ಅಧಿಕಾರಿಣಿ ಸ್ನೇಹಾ ದುಭೆ</a></p>.<p>ಸ್ವಾತಂತ್ರ್ಯೋತ್ಸವದ 75ನೇ ವರ್ಷಾಚರಣೆ ಸಂದರ್ಭದಲ್ಲಿ ಭಾರತವು ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ 75 ಉಪಗ್ರಹಗಳನ್ನು ಉಡಾವಣೆ ಮಾಡಲಿದೆ ಎಂದು ಪ್ರಧಾನಿ ಹೇಳಿದ್ದಾರೆ.</p>.<p>ಅಭಿವೃದ್ಧಿಯುಎಲ್ಲರನ್ನೂ ಒಳಗೊಂಡಿರಬೇಕು ಮತ್ತು ಸಾರ್ವತ್ರಿಕವಾಗಿ ಎಲ್ಲರನ್ನು ಪೋಷಿಸುವಂತಿರಬೇಕು. ಅಂತ್ಯೋದಯ ತತ್ವವನ್ನು ಗಮನದಲ್ಲಿಟ್ಟುಕೊಂಡು ಭಾರತವು ಇಂದು ಸಮಗ್ರ ಮತ್ತು ಸಮಾನತೆಯ ಅಭಿವೃದ್ಧಿಯ ಹಾದಿಯಲ್ಲಿ ಮುನ್ನಡೆಯುತ್ತಿದೆ ಎಂದು ಮೋದಿ ಹೇಳಿದ್ದಾರೆ.</p>.<p>ಭಾರತದಲ್ಲಿ ಲಸಿಕೆ ಉತ್ಪಾದಿಸಲು ವಿಶ್ವದಾದ್ಯಂತ ಇರುವ ಎಲ್ಲಾ ಲಸಿಕೆ ಉತ್ಪಾದಕರನ್ನು ನಾನು ಆಹ್ವಾನಿಸುತ್ತಿದ್ದೇನೆ. ಭಾರತವು ವಿಶ್ವದ ಮೊತ್ತ ಮೊದಲ ಡಿಎನ್ಎ ಆಧಾರಿತ ಲಸಿಕೆ ಅಭಿವೃದ್ಧಿಪಡಿಸುತ್ತಿರುವುದಾಗಿ ಈ ಮೂಲಕ ವಿಶ್ವಕ್ಕೆ ತಿಳಿಸಲು ಬಯಸುತ್ತೇನೆ. ಈ ಲಸಿಕೆಯನ್ನು 12 ವರ್ಷ ಮೇಲ್ಪಟ್ಟ ಎಲ್ಲರಿಗೂ ನೀಡಬಹುದಾಗಿದೆ. ಮೂಗಿನ ಮೂಲಕ ನೀಡಬಹುದಾದ ಲಸಿಕೆಯೂ ಅಭಿವೃದ್ಧಿ ಹಂತದಲ್ಲಿದೆ ಎಂದು ಮೋದಿ ಹೇಳಿದ್ದಾರೆ.</p>.<p>ಭಾರತ ಬೆಳವಣಿಗೆಯಾದಾಗ ಜಗತ್ತು ಬೆಳೆಯುತ್ತದೆ. ಭಾರತ ಸುಧಾರಣೆಯಾದಾಗ ಜಗತ್ತೂ ಬದಲಾಗುತ್ತದೆ.ನಮ್ಮದೇ ಆದ ಹಾದಿಯಲ್ಲಿ ನಾವು ದೃಢವಾಗಿ, ಧೈರ್ಯದಿಂದ ಮುನ್ನಡೆಯಬೇಕು. ಆಗ ಕಷ್ಟಗಳು ದೂರವಾಗುತ್ತವೆ ಎಂದು ರವೀಂದ್ರನಾಥ ಟ್ಯಾಗೋರರು ಹೇಳಿದ್ದರು. ಅವರ ಮಾತಿನಂತೆ ನಾವು ನಡೆಯಬೇಕಿದೆ ಎಂದು ಅವರು ಹೇಳಿದ್ದಾರೆ.</p>.<p>ಭಾರತವು ಕೋಟ್ಯಂತರ ನಿರಾಶ್ರತರನ್ನು ಮನೆ ಮಾಲೀಕರನ್ನಾಗುವಂತೆ ಮಾಡಿದೆ ಎಂದೂ ಅವರು ಹೇಳಿದ್ದಾರೆ.</p>.<p>ಅಫ್ಗಾನಿಸ್ತಾನದ ನೆಲವನ್ನು ಭಯೋತ್ಪಾದನೆ ಹರಡಲು ಮತ್ತು ಉಗ್ರ ಚಟುವಟಿಕೆಗಳಿಗೆ ಬಳಸದಂತೆ ಖಾತರಿಪಡಿಸಿಕೊಳ್ಳಬೇಕಾದದ್ದು ಇಂದಿನ ಅಗತ್ಯವಾಗಿದೆ.ತೀವ್ರವಾದಿ ಚಿಂತನೆ ಮತ್ತು ಉಗ್ರವಾದದ ಅಪಾಯವು ಪ್ರಪಂಚಕ್ಕೆ ಹೆಚ್ಚಾಗಿದೆಎಂದು ಪ್ರಧಾನಿ ಪ್ರತಿಪಾದಿಸಿದ್ದಾರೆ.</p>.<p>ನಮ್ಮ ಸಾಗರಗಳು ಅಂತರರಾಷ್ಟ್ರೀಯ ವ್ಯಾಪಾರ ವಹಿವಾಟಿನ ಜೀವನಾಡಿಯಾಗಿವೆ. ಅವುಗಳನ್ನು ರಕ್ಷಿಸಬೇಕಿದೆ. ನಿಯಮಾಧಾರಿತ ಜಗತ್ತನ್ನು ರೂಪಿಸಲು ಅಂತರರಾಷ್ಟ್ರೀಯ ಸಮುದಾಯ ಒಗ್ಗಟ್ಟಿನಿಂದ ಮಾತನಾಡಬೇಕು ಎಂದು ಮೋದಿ ಹೇಳಿದ್ದಾರೆ.</p>.<p>ನಮ್ಮೆಲ್ಲರ ಪ್ರಯತ್ನದಿಂದಾಗಿ ನಾವು ಜಗತ್ತನ್ನು ಪ್ರತಿಯೊಬ್ಬರಿಗೂ ಇನ್ನಷ್ಟು ಉತ್ತಮ ತಾಣವನ್ನಾಗಿ ಮಾಡಬಹುದು.ವಿಶ್ವಸಂಸ್ಥೆಯು ಪ್ರಸ್ತುತತೆಯನ್ನು ಉಳಿಸಿಕೊಳ್ಳಬೇಕಾದರೆ, ಅದು ಅದರ ಪರಿಣಾಮಕಾರಿತ್ವವನ್ನು ಸುಧಾರಿಸಬೇಕು, ವಿಶ್ವಾಸಾರ್ಹತೆಯನ್ನು ಹೆಚ್ಚಿಸಬೇಕು ಎಂದು ಮೋದಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>