ಬೆಂಗಳೂರು: ಜರ್ಮನಿಯ ಕನ್ನಡ ಬಳಗವು ಇತ್ತೀಚೆಗೆ ನಿಧನರಾದ ಕನ್ನಡದ ಹೆಸರಾಂತ ಕವಿ ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟರನ್ನು ‘ಎನ್ಎಸ್ಎಲ್ ನುಡಿನಮನ’ ಆನ್ಲೈನ್ ಕಾರ್ಯಕ್ರಮದ ಮೂಲಕ ಸ್ಮರಿಸಿತು.
‘ಕಾರ್ಯಕ್ರಮದಲ್ಲಿ ಎನ್ಎಸ್ಎಲ್ ಅವರ ಜೀವನ ಮತ್ತು ಸಾಧನೆಗಳನ್ನು ಮೆಲುಕು ಹಾಕಲಾಯಿತು. ಜರ್ಮನಿಯಲ್ಲಿರುವ ಕನ್ನಡಿಗರು ಹಾಗೂ ಅವರ ಮಕ್ಕಳು ಭಾವಗೀತೆಗಳನ್ನು ಹಾಡಿದರು. ಕವನ ಮತ್ತು ಶಿಶು ಪದ್ಯಗಳನ್ನು ವಾಚಿಸಿದರು’ ಎಂದು ಕೆರ್ಪೆನ್ ನಗರದಲ್ಲಿ ನೆಲೆಸಿರುವ ಸಂತೋಷ್ ಶ್ರೀಧರ್ ತಿಳಿಸಿದರು.