ಇಮ್ರಾನ್ ಖಾನ್ ಈ ಹಿಂದೆಯೂ ಆರೆಸ್ಸೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕಳೆದ ವರ್ಷ ವಿಶ್ವಸಂಸ್ಥೆಯ ಮಹಾಸಭೆಯಲ್ಲಿ ಮಾತನಾಡಿದ್ದ ಅವರು, ‘ನಾಜಿಗಳ ದ್ವೇಷವನ್ನು ಯಹೂದಿಗಳತ್ತ ನಿರ್ದೇಶಿಸಲಾಗಿದ್ದರೆ, ಆರೆಸ್ಸೆಸ್ ಮುಸ್ಲಿಮರ ಕಡೆಗೆ ಮತ್ತು ಸ್ವಲ್ಪ ಮಟ್ಟಿಗೆ ಕ್ರೈಸ್ತರ ಕಡೆಗೆ ತಿರುಗಿಸಿದೆ. ಭಾರತವು ಹಿಂದೂಗಳಿಗಾಗಿಯೇ ಇರುವ ಪ್ರತ್ಯೇಕ ರಾಷ್ಟ್ರ ಮತ್ತು ಇತರ ಧರ್ಮೀಯರು ಸಮಾನರಲ್ಲ ಎಂದು ಅವರು ನಂಬುತ್ತಾರೆ’ ಎಂದು ಹೇಳಿದ್ದರು.