ಬುಧವಾರ ರಾಜೀನಾಮೆ ನೀಡುವುದಾಗಿ ಹೇಳಿದ್ದ ಅಧ್ಯಕ್ಷ ಗೊಟಬಯ, ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರನ್ನು ಪ್ರಭಾರಿ ಅಧ್ಯಕ್ಷರಾಗಿ ನೇಮಕ ಮಾಡಿ ದೇಶ ತೊರೆದಿದ್ದಾರೆ. ಸದ್ಯ, ಮಾಲ್ಡೀವ್ಸ್ನಲ್ಲಿರುವ ಅವರು ಕುಟುಂಬದ ಜೊತೆ ಸಿಂಗಪುರಕ್ಕೆ ತೆರಳಲು ಖಾಸಗಿ ವಿಮಾನಕ್ಕಾಗಿ ಕಾಯುತ್ತಿದ್ದಾರೆ ಎಂಬ ವರದಿಗಳು ಬಂದಿವೆ. ಈ ಮಧ್ಯೆ, ಸರ್ಕಾರಿ ಕಟ್ಟಡಗಳನ್ನು ತೆರವು ಮಾಡುವಂತೆ ಆಗ್ರಹಿಸಿರುವ ಗೊಟಬಯ ರಾಜಪಕ್ಸ, ಪ್ರತಿಭಟನಾಕಾರರನ್ನು ತೆರವುಗೊಳಿಸಲು ಬೇಕಾದ ಕಾನೂನು ಕ್ರಮ ಜರುಗಿಸುವಂತೆ ಭದ್ರತಾ ಪಡೆಗೆ ಆದೇಶಿಸಿದ್ದಾರೆ.