<p><strong>ಕೊಲಂಬೊ: </strong>ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದದಲ್ಲಿ ಜನರ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.</p>.<p>ಕೊಲಂಬೊ ನಗರದಲ್ಲಿ ಬುಧವಾರ ಪ್ರತಿಭಟನೆ ಮತ್ತೆ ಭುಗಿಲೆದ್ದಿದೆ. ಪ್ರಧಾನಿ ಕಚೇರಿಯತ್ತ ಪ್ರತಿಭಟನಾಕಾರರು ಮುಖಮಾಡಿದ್ದಾರೆ.</p>.<p>ಪ್ರಧಾನಿ ನಿವಾಸದ ಹೊರಗೆ ನಿಯೋಜಿಸಲಾದ ಸೇನಾ ಸಿಬ್ಬಂದಿಯೊಂದಿಗೆ ಪ್ರತಿಭಟನಾಕಾರರು ವಾಗ್ವಾದ ನಡೆಸುತ್ತಿರುವ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.</p>.<p>ರಾನಿಲ್ ವಿಕ್ರಮಸಿಂಘೆ ಅವರೊಬ್ಬ ವಿಫಲ ಪ್ರಧಾನಿ ಎಂದು ಪ್ರತಿಭಟನಾಕಾರರು ಘೋಷಣೆ ಕೂಗುತ್ತಿದ್ದಾರೆ.</p>.<p>ಜನರ ಆಕ್ರೋಶಕ್ಕೆ ಮಣಿದಿರುವ ಶ್ರೀಲಂಕಾದ ಅಧ್ಯಕ್ಷ ಗೊಟಬಯ ರಾಜಪಕ್ಸ, ಬುಧವಾರ ಮುಂಜಾನೆ ದೇಶ ಬಿಟ್ಟು ಮಾಲ್ಡೀವ್ಸ್ಗೆ ಪರಾರಿಯಾಗಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.</p>.<p>ರಾಜಪಕ್ಸ ಅವರ ರಾಜೀನಾಮೆಗೆ ಒತ್ತಾಯಿಸಿ ಶನಿವಾರ, ಸಾವಿರಾರು ಪ್ರತಿಭಟನಾಕಾರರು ಪ್ರಧಾನಿಯವರ ಅಧಿಕೃತ ನಿವಾಸಗಳಿಗೆ ಮುತ್ತಿಗೆ ಹಾಕಿದ್ದರು.</p>.<p>ಶ್ರೀಲಂಕಾದ ಸಂಸತ್, ಜುಲೈ 20ರಂದು ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲಿದೆ ಎಂದು ವರದಿಯಾಗಿದೆ.</p>.<p><strong>ಓದಿ...<a href="https://www.prajavani.net/world-news/sri-lanka-declares-state-of-emergency-after-president-gotabaya-rajpakasa-fled-the-country-953934.html" target="_blank">ಭುಗಿಲೆದ್ದ ಜನರ ಆಕ್ರೋಶ: ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ: </strong>ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದದಲ್ಲಿ ಜನರ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.</p>.<p>ಕೊಲಂಬೊ ನಗರದಲ್ಲಿ ಬುಧವಾರ ಪ್ರತಿಭಟನೆ ಮತ್ತೆ ಭುಗಿಲೆದ್ದಿದೆ. ಪ್ರಧಾನಿ ಕಚೇರಿಯತ್ತ ಪ್ರತಿಭಟನಾಕಾರರು ಮುಖಮಾಡಿದ್ದಾರೆ.</p>.<p>ಪ್ರಧಾನಿ ನಿವಾಸದ ಹೊರಗೆ ನಿಯೋಜಿಸಲಾದ ಸೇನಾ ಸಿಬ್ಬಂದಿಯೊಂದಿಗೆ ಪ್ರತಿಭಟನಾಕಾರರು ವಾಗ್ವಾದ ನಡೆಸುತ್ತಿರುವ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.</p>.<p>ರಾನಿಲ್ ವಿಕ್ರಮಸಿಂಘೆ ಅವರೊಬ್ಬ ವಿಫಲ ಪ್ರಧಾನಿ ಎಂದು ಪ್ರತಿಭಟನಾಕಾರರು ಘೋಷಣೆ ಕೂಗುತ್ತಿದ್ದಾರೆ.</p>.<p>ಜನರ ಆಕ್ರೋಶಕ್ಕೆ ಮಣಿದಿರುವ ಶ್ರೀಲಂಕಾದ ಅಧ್ಯಕ್ಷ ಗೊಟಬಯ ರಾಜಪಕ್ಸ, ಬುಧವಾರ ಮುಂಜಾನೆ ದೇಶ ಬಿಟ್ಟು ಮಾಲ್ಡೀವ್ಸ್ಗೆ ಪರಾರಿಯಾಗಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.</p>.<p>ರಾಜಪಕ್ಸ ಅವರ ರಾಜೀನಾಮೆಗೆ ಒತ್ತಾಯಿಸಿ ಶನಿವಾರ, ಸಾವಿರಾರು ಪ್ರತಿಭಟನಾಕಾರರು ಪ್ರಧಾನಿಯವರ ಅಧಿಕೃತ ನಿವಾಸಗಳಿಗೆ ಮುತ್ತಿಗೆ ಹಾಕಿದ್ದರು.</p>.<p>ಶ್ರೀಲಂಕಾದ ಸಂಸತ್, ಜುಲೈ 20ರಂದು ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲಿದೆ ಎಂದು ವರದಿಯಾಗಿದೆ.</p>.<p><strong>ಓದಿ...<a href="https://www.prajavani.net/world-news/sri-lanka-declares-state-of-emergency-after-president-gotabaya-rajpakasa-fled-the-country-953934.html" target="_blank">ಭುಗಿಲೆದ್ದ ಜನರ ಆಕ್ರೋಶ: ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>