<p><strong>ಜಕಾರ್ತಾ:</strong> ಇಂಡೊನೇಷ್ಯಾದಲ್ಲಿನ ಹೊಸ ಕಾರ್ಮಿಕ ಕಾನೂನುಗಳನ್ನು ವಿರೋಧಿಸಿ ಸಾವಿರಾರು ಕಾರ್ಮಿಕರು ಮತ್ತು ವಿದ್ಯಾರ್ಥಿಗಳು ಗುರುವಾರವೂ ದೇಶದಾದ್ಯಂತ ಪ್ರತಿಭಟನಾ ರ್ಯಾಲಿಗಳನ್ನು ನಡೆಸಿದರು.</p>.<p>ಹೊಸ ಕಾನೂನು ಕಾರ್ಮಿಕರ ಹಕ್ಕುಗಳನ್ನು ಕಿತ್ತುಕೊಳ್ಳುತ್ತದೆ ಮತ್ತು ಪರಿಸರಕ್ಕೂ ಧಕ್ಕೆ ಉಂಟು ಮಾಡುತ್ತದೆ ಎಂದು ಪ್ರತಿಭಟನಕಾರರು ದೂರಿದರು.</p>.<p>ಉದ್ಯೋಗ ಸೃಷ್ಟಿ ಕಾನೂನಿಗೆ ಸೋಮವಾರ ಸಂಸತ್ ಅನುಮೋದನೆ ನೀಡಿತ್ತು. ಈ ಕಾನೂನು ಇಂಡೊನೇಷ್ಯಾದಲ್ಲಿನ ಕಾರ್ಮಿಕರ ಸೌಲಭ್ಯಗಳು ಮತ್ತು ನೈಸರ್ಗಿಕ ಸಂಪನ್ಮೂಲಗಳ ನಿರ್ವಹಣೆಯಲ್ಲಿ ಹಲವು ಬದಲಾವಣೆಗಳನ್ನು ತರಲಿದೆ. ದೇಶದಲ್ಲಿ ಹೂಡಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಈ ಬದಲಾವಣೆಗಳನ್ನು ಮಾಡಲಾಗಿದೆ ಎಂದು ಸರ್ಕಾರ ಪ್ರತಿಪಾದಿಸಿದೆ.</p>.<p>ಈ ಕಾನೂನುಗಳಿಂದ ಹೊರಗುತ್ತಿಗೆಗೆ ಹೆಚ್ಚು ಅವಕಾಶ ದೊರೆಯಲಿದೆ. ಜತೆಗೆ, ಕೆಲಸದ ಒತ್ತಡವೂ ಹೆಚ್ಚಲಿದೆ. ವಾರದ ವೇತನದ ಬದಲು ಗಂಟೆಗಳ ಲೆಕ್ಕದಲ್ಲಿ ವೇತನ ನೀಡುವ ವ್ಯವಸ್ಥೆ ಜಾರಿಯಾಗಲಿದೆ ಎಂದು ಕಾರ್ಮಿಕರ ಸಂಘಟನೆಗಳ ಮುಖಂಡರು ದೂರಿದ್ದಾರೆ.</p>.<p>ಸಂಸತ್ಗೆ ಮುತ್ತಿಗೆ ಹಾಕಲು ಯತ್ನಿಸಿದ 200 ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದರು. ಕಳೆದ ಎರಡು ದಿನಗಳಲ್ಲಿ ಸುಮಾರು 600 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಕಾರ್ತಾ:</strong> ಇಂಡೊನೇಷ್ಯಾದಲ್ಲಿನ ಹೊಸ ಕಾರ್ಮಿಕ ಕಾನೂನುಗಳನ್ನು ವಿರೋಧಿಸಿ ಸಾವಿರಾರು ಕಾರ್ಮಿಕರು ಮತ್ತು ವಿದ್ಯಾರ್ಥಿಗಳು ಗುರುವಾರವೂ ದೇಶದಾದ್ಯಂತ ಪ್ರತಿಭಟನಾ ರ್ಯಾಲಿಗಳನ್ನು ನಡೆಸಿದರು.</p>.<p>ಹೊಸ ಕಾನೂನು ಕಾರ್ಮಿಕರ ಹಕ್ಕುಗಳನ್ನು ಕಿತ್ತುಕೊಳ್ಳುತ್ತದೆ ಮತ್ತು ಪರಿಸರಕ್ಕೂ ಧಕ್ಕೆ ಉಂಟು ಮಾಡುತ್ತದೆ ಎಂದು ಪ್ರತಿಭಟನಕಾರರು ದೂರಿದರು.</p>.<p>ಉದ್ಯೋಗ ಸೃಷ್ಟಿ ಕಾನೂನಿಗೆ ಸೋಮವಾರ ಸಂಸತ್ ಅನುಮೋದನೆ ನೀಡಿತ್ತು. ಈ ಕಾನೂನು ಇಂಡೊನೇಷ್ಯಾದಲ್ಲಿನ ಕಾರ್ಮಿಕರ ಸೌಲಭ್ಯಗಳು ಮತ್ತು ನೈಸರ್ಗಿಕ ಸಂಪನ್ಮೂಲಗಳ ನಿರ್ವಹಣೆಯಲ್ಲಿ ಹಲವು ಬದಲಾವಣೆಗಳನ್ನು ತರಲಿದೆ. ದೇಶದಲ್ಲಿ ಹೂಡಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಈ ಬದಲಾವಣೆಗಳನ್ನು ಮಾಡಲಾಗಿದೆ ಎಂದು ಸರ್ಕಾರ ಪ್ರತಿಪಾದಿಸಿದೆ.</p>.<p>ಈ ಕಾನೂನುಗಳಿಂದ ಹೊರಗುತ್ತಿಗೆಗೆ ಹೆಚ್ಚು ಅವಕಾಶ ದೊರೆಯಲಿದೆ. ಜತೆಗೆ, ಕೆಲಸದ ಒತ್ತಡವೂ ಹೆಚ್ಚಲಿದೆ. ವಾರದ ವೇತನದ ಬದಲು ಗಂಟೆಗಳ ಲೆಕ್ಕದಲ್ಲಿ ವೇತನ ನೀಡುವ ವ್ಯವಸ್ಥೆ ಜಾರಿಯಾಗಲಿದೆ ಎಂದು ಕಾರ್ಮಿಕರ ಸಂಘಟನೆಗಳ ಮುಖಂಡರು ದೂರಿದ್ದಾರೆ.</p>.<p>ಸಂಸತ್ಗೆ ಮುತ್ತಿಗೆ ಹಾಕಲು ಯತ್ನಿಸಿದ 200 ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದರು. ಕಳೆದ ಎರಡು ದಿನಗಳಲ್ಲಿ ಸುಮಾರು 600 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>