ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮ್ಯಾನ್ಮಾರ್‌ನಲ್ಲಿ ಪ್ರಜಾಪ್ರಭುತ್ವ ಮರುಸ್ಥಾಪನೆ ಆದ್ಯತೆಯಾಗಲಿ: ಭಾರತ ಪ್ರತಿಪಾದನೆ

ವಿಶ್ವಸಂಸ್ಥೆ ಸಾಮಾನ್ಯಸಭೆಯಲ್ಲಿ ಭಾರತ ಪ್ರತಿಪಾದನೆ
Last Updated 27 ಫೆಬ್ರುವರಿ 2021, 7:50 IST
ಅಕ್ಷರ ಗಾತ್ರ

ವಿಶ್ವಸಂಸ್ಥೆ: ಮಿಲಿಟರಿ ದಂಗೆಯಿಂದ ನಲುಗಿರುವ ಮ್ಯಾನ್ಮಾರ್‌ನಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮರುಸ್ಥಾಪಿಸಿರುವುದು, ಬಂಧನಕ್ಕೆ ಒಳಗಾಗಿರುವ ನಾಯಕರ ಬಿಡುಗಡೆ ನಮ್ಮ ಆದ್ಯತೆಯಾಗಬೇಕು ಎಂದು ವಿಶ್ವಸಂಸ್ಥೆಯ ಸಾಮಾನ್ಯಸಭೆಯಲ್ಲಿ ಭಾರತ ಪ್ರತಿಪಾದಿಸಿದೆ.

‘ಶಾಂತಿಯುತ ಹಾಗೂ ರಚನಾತ್ಮಕ ಮಾರ್ಗದ ಮೂಲಕ ಮ್ಯಾನ್ಮಾರ್‌ ತನ್ನ ಆಂತರಿಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು’ ಎಂದು ವಿಶ್ವಸಂಸ್ಥೆಯ ಭಾರತದ ಕಾಯಂ ರಾಯಭಾರಿಯಾಗಿರುವ ಟಿ.ಎಸ್‌.ತಿರುಮೂರ್ತಿ ಹೇಳಿದರು.

‘ಮ್ಯಾನ್ಮಾರ್‌ನೊಂದಿಗೆ ಭಾರತ ಭೂ ಹಾಗೂ ಸಾಗರ ಗಡಿಯನ್ನು ಹಂಚಿಕೊಂಡಿದೆ. ಹೀಗಾಗಿ ಈ ಪ್ರದೇಶದಲ್ಲಿ ಶಾಂತಿ ಹಾಗೂ ಸ್ಥಿರತೆಯನ್ನು ಕಾಪಾಡುವುದು ಭಾರತದ ಜವಾಬ್ದಾರಿಯಾಗಿದೆ’ ಎಂದರು.

‘ಮ್ಮಾನ್ಮಾರ್‌ನಲ್ಲಿ ಇತ್ತೀಚಿನ ಬೆಳವಣಿಗೆಗಳನ್ನು ಭಾರತ ಸೂಕ್ಷ್ಮವಾಗಿ ಅವಲೋಕಿಸುತ್ತಿದೆ. ಹಲವು ದಶಕಗಳ ಹೋರಾಟದ ಫಲವಾಗಿ ಆ ದೇಶದಲ್ಲಿ ಪ್ರಜಾಪ್ರಭುತ್ವ ಸ್ಥಾಪನೆಯಾಗಿದೆ. ಆ ಪ್ರಯತ್ನವನ್ನು ವ್ಯರ್ಥಗೊಳಿಸಬಾರದು’ ಎಂದೂ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT