<p><strong>ವಿಶ್ವಸಂಸ್ಥೆ: </strong>ಮಿಲಿಟರಿ ದಂಗೆಯಿಂದ ನಲುಗಿರುವ ಮ್ಯಾನ್ಮಾರ್ನಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮರುಸ್ಥಾಪಿಸಿರುವುದು, ಬಂಧನಕ್ಕೆ ಒಳಗಾಗಿರುವ ನಾಯಕರ ಬಿಡುಗಡೆ ನಮ್ಮ ಆದ್ಯತೆಯಾಗಬೇಕು ಎಂದು ವಿಶ್ವಸಂಸ್ಥೆಯ ಸಾಮಾನ್ಯಸಭೆಯಲ್ಲಿ ಭಾರತ ಪ್ರತಿಪಾದಿಸಿದೆ.</p>.<p>‘ಶಾಂತಿಯುತ ಹಾಗೂ ರಚನಾತ್ಮಕ ಮಾರ್ಗದ ಮೂಲಕ ಮ್ಯಾನ್ಮಾರ್ ತನ್ನ ಆಂತರಿಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು’ ಎಂದು ವಿಶ್ವಸಂಸ್ಥೆಯ ಭಾರತದ ಕಾಯಂ ರಾಯಭಾರಿಯಾಗಿರುವ ಟಿ.ಎಸ್.ತಿರುಮೂರ್ತಿ ಹೇಳಿದರು.</p>.<p>‘ಮ್ಯಾನ್ಮಾರ್ನೊಂದಿಗೆ ಭಾರತ ಭೂ ಹಾಗೂ ಸಾಗರ ಗಡಿಯನ್ನು ಹಂಚಿಕೊಂಡಿದೆ. ಹೀಗಾಗಿ ಈ ಪ್ರದೇಶದಲ್ಲಿ ಶಾಂತಿ ಹಾಗೂ ಸ್ಥಿರತೆಯನ್ನು ಕಾಪಾಡುವುದು ಭಾರತದ ಜವಾಬ್ದಾರಿಯಾಗಿದೆ’ ಎಂದರು.</p>.<p>‘ಮ್ಮಾನ್ಮಾರ್ನಲ್ಲಿ ಇತ್ತೀಚಿನ ಬೆಳವಣಿಗೆಗಳನ್ನು ಭಾರತ ಸೂಕ್ಷ್ಮವಾಗಿ ಅವಲೋಕಿಸುತ್ತಿದೆ. ಹಲವು ದಶಕಗಳ ಹೋರಾಟದ ಫಲವಾಗಿ ಆ ದೇಶದಲ್ಲಿ ಪ್ರಜಾಪ್ರಭುತ್ವ ಸ್ಥಾಪನೆಯಾಗಿದೆ. ಆ ಪ್ರಯತ್ನವನ್ನು ವ್ಯರ್ಥಗೊಳಿಸಬಾರದು’ ಎಂದೂ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವಸಂಸ್ಥೆ: </strong>ಮಿಲಿಟರಿ ದಂಗೆಯಿಂದ ನಲುಗಿರುವ ಮ್ಯಾನ್ಮಾರ್ನಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮರುಸ್ಥಾಪಿಸಿರುವುದು, ಬಂಧನಕ್ಕೆ ಒಳಗಾಗಿರುವ ನಾಯಕರ ಬಿಡುಗಡೆ ನಮ್ಮ ಆದ್ಯತೆಯಾಗಬೇಕು ಎಂದು ವಿಶ್ವಸಂಸ್ಥೆಯ ಸಾಮಾನ್ಯಸಭೆಯಲ್ಲಿ ಭಾರತ ಪ್ರತಿಪಾದಿಸಿದೆ.</p>.<p>‘ಶಾಂತಿಯುತ ಹಾಗೂ ರಚನಾತ್ಮಕ ಮಾರ್ಗದ ಮೂಲಕ ಮ್ಯಾನ್ಮಾರ್ ತನ್ನ ಆಂತರಿಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು’ ಎಂದು ವಿಶ್ವಸಂಸ್ಥೆಯ ಭಾರತದ ಕಾಯಂ ರಾಯಭಾರಿಯಾಗಿರುವ ಟಿ.ಎಸ್.ತಿರುಮೂರ್ತಿ ಹೇಳಿದರು.</p>.<p>‘ಮ್ಯಾನ್ಮಾರ್ನೊಂದಿಗೆ ಭಾರತ ಭೂ ಹಾಗೂ ಸಾಗರ ಗಡಿಯನ್ನು ಹಂಚಿಕೊಂಡಿದೆ. ಹೀಗಾಗಿ ಈ ಪ್ರದೇಶದಲ್ಲಿ ಶಾಂತಿ ಹಾಗೂ ಸ್ಥಿರತೆಯನ್ನು ಕಾಪಾಡುವುದು ಭಾರತದ ಜವಾಬ್ದಾರಿಯಾಗಿದೆ’ ಎಂದರು.</p>.<p>‘ಮ್ಮಾನ್ಮಾರ್ನಲ್ಲಿ ಇತ್ತೀಚಿನ ಬೆಳವಣಿಗೆಗಳನ್ನು ಭಾರತ ಸೂಕ್ಷ್ಮವಾಗಿ ಅವಲೋಕಿಸುತ್ತಿದೆ. ಹಲವು ದಶಕಗಳ ಹೋರಾಟದ ಫಲವಾಗಿ ಆ ದೇಶದಲ್ಲಿ ಪ್ರಜಾಪ್ರಭುತ್ವ ಸ್ಥಾಪನೆಯಾಗಿದೆ. ಆ ಪ್ರಯತ್ನವನ್ನು ವ್ಯರ್ಥಗೊಳಿಸಬಾರದು’ ಎಂದೂ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>