ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಕ್ರೇನ್: ತಕ್ಷಣವೇ ಕೀವ್ ತೊರೆಯುವಂತೆ ಭಾರತೀಯರಿಗೆ ರಾಯಭಾರ ಕಚೇರಿ ಸೂಚನೆ

Last Updated 1 ಮಾರ್ಚ್ 2022, 7:20 IST
ಅಕ್ಷರ ಗಾತ್ರ

ಕೀವ್: ಉಕ್ರೇನ್‌ ರಾಜಧಾನಿ ಕೀವ್‌ನಲ್ಲಿರುವ ಭಾರತೀಯರು ತಕ್ಷಣವೇ ನಗರ ತೊರೆಯುವಂತೆ ಅಲ್ಲಿನ ಭಾರತೀಯ ರಾಯಭಾರ ಕಚೇರಿ ಮಂಗಳವಾರ ಸೂಚಿಸಿದೆ.

‘ವಿದ್ಯಾರ್ಥಿಗಳೂ ಸೇರಿದಂತೆ ಎಲ್ಲ ಭಾರತೀಯರೂ ಇಂದೇ ತುರ್ತಾಗಿ ಕೀವ್ ತೊರೆಯಬೇಕು. ರೈಲುಗಳ ಮೂಲಕ ಅಥವಾ ಲಭ್ಯವಿರುವ ಇತರ ಯಾವುದೇ ವ್ಯವಸ್ಥೆಯನ್ನು ಬಳಸಿಕೊಂಡು ನಗರ ತೊರೆಯಬೇಕು’ ಎಂದು ರಾಯಭಾರ ಕಚೇರಿ ಟ್ವೀಟ್ ಮಾಡಿದೆ.

ರಷ್ಯಾ ಹಾಗೂ ಉಕ್ರೇನ್ ನಡುವೆ ಸೋಮವಾರ ನಡೆದ ಮಾತುಕತೆಯಲ್ಲಿ ಒಮ್ಮತಕ್ಕೆ ಬರುವುದು ಸಾಧ್ಯವಾಗಿಲ್ಲ. ಇದರ ಬೆನ್ನಲ್ಲೇ ರಷ್ಯಾ ದಾಳಿ ಮುಂದುವರಿಸಿದೆ. ಹಾರ್ಕಿವ್‌ ನಗರದ ಮೇಲೆ ಮಂಗಳವಾರ ಶೆಲ್‌ ದಾಳಿ ಆರಂಭಿಸಿದೆ. ರಷ್ಯಾ ಪಡೆಗಳು ರಾಜಧಾನಿ ಕೀವ್ ಸಮೀಪಿಸಿವೆ ಎಂದೂ ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT