<p><strong>ಕೀವ್:</strong>ಉಕ್ರೇನ್ ರಾಜಧಾನಿ ಕೀವ್ ಮೇಲೆ ರಷ್ಯಾ ಪಡೆಗಳು ದಾಳಿ ನಡೆಸುತ್ತಿರುವುದರ ಮಧ್ಯೆಯೂ, ಅಲ್ಲಿಂದ ತೆರಳಲು ಯತ್ನಿಸಿದ ಭಾರತದ ವಿದ್ಯಾರ್ಥಿಯೊಬ್ಬರು ಗುಂಡಿನ ದಾಳಿಗೊಳಗಾಗಿದ್ದಾರೆ ಎಂದು ನಾಗರಿಕ ವಿಮಾನಯಾನ ಸಚಿವ ವಿ.ಕೆ. ಸಿಂಗ್ ತಿಳಿಸಿದ್ದಾರೆ.</p>.<p>'ಕೀವ್ನಿಂದ ಬರುತ್ತಿದ್ದ ವಿದ್ಯಾರ್ಥಿಯೊಬ್ಬರು ಗುಂಡಿನ ದಾಳಿಗೆ ಒಳಗಾಗಿರುವ ಸುದ್ದಿ ಬಂದಿದೆ. ತಕ್ಷಣವೇ ಅವರನ್ನು ಕೀವ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.ಹೆಚ್ಚು ಸಾವುನೋವು ಸಂಭವಿಸದಂತೆ, ಸಾಧ್ಯವಾದಷ್ಟು ಜನರನ್ನು ಸ್ಥಳಾಂತರಿಸುವ ಪ್ರಯತ್ನ ಮಾಡುತ್ತಿದ್ದೇವೆ' ಎಂದು ಸಿಂಗ್ ಹೇಳಿದ್ದಾರೆ.</p>.<p>ಯುದ್ಧಪೀಡಿತ ಉಕ್ರೇನ್ನಿಂದ ಜನರನ್ನು ಸ್ಥಳಾಂತರಿಸುವ ಪ್ರಕ್ರಿಯೆಯ ಮೇಲ್ವಿಚಾರಣೆ ಸಲುವಾಗಿ, ಉಕ್ರೇನ್ನ ನೆರೆಹೊರೆ ರಾಷ್ಟ್ರಗಳಿಗೆ ತೆರಳಿರುವ ಕೇಂದ್ರದ ನಾಲ್ವರು ಸಚಿವರ ನಿಯೋಗದಲ್ಲಿ ಸಿಂಗ್ ಅವರೂ ಇದ್ದಾರೆ.</p>.<p>ಕರ್ನಾಟಕದ ವೈದ್ಯಕೀಯ ವಿದ್ಯಾರ್ಥಿ ನವೀನ್ ಎಸ್.ಜಿ. ಎನ್ನುವವರುಮಾರ್ಚ್ 1ರಂದು ಹಾರ್ಕಿವ್ ನಗರದಲ್ಲಿ ನಡೆದ ಷೆಲ್ ದಾಳಿಯಿಂದಾಗಿ ಮೃತಪಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೀವ್:</strong>ಉಕ್ರೇನ್ ರಾಜಧಾನಿ ಕೀವ್ ಮೇಲೆ ರಷ್ಯಾ ಪಡೆಗಳು ದಾಳಿ ನಡೆಸುತ್ತಿರುವುದರ ಮಧ್ಯೆಯೂ, ಅಲ್ಲಿಂದ ತೆರಳಲು ಯತ್ನಿಸಿದ ಭಾರತದ ವಿದ್ಯಾರ್ಥಿಯೊಬ್ಬರು ಗುಂಡಿನ ದಾಳಿಗೊಳಗಾಗಿದ್ದಾರೆ ಎಂದು ನಾಗರಿಕ ವಿಮಾನಯಾನ ಸಚಿವ ವಿ.ಕೆ. ಸಿಂಗ್ ತಿಳಿಸಿದ್ದಾರೆ.</p>.<p>'ಕೀವ್ನಿಂದ ಬರುತ್ತಿದ್ದ ವಿದ್ಯಾರ್ಥಿಯೊಬ್ಬರು ಗುಂಡಿನ ದಾಳಿಗೆ ಒಳಗಾಗಿರುವ ಸುದ್ದಿ ಬಂದಿದೆ. ತಕ್ಷಣವೇ ಅವರನ್ನು ಕೀವ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.ಹೆಚ್ಚು ಸಾವುನೋವು ಸಂಭವಿಸದಂತೆ, ಸಾಧ್ಯವಾದಷ್ಟು ಜನರನ್ನು ಸ್ಥಳಾಂತರಿಸುವ ಪ್ರಯತ್ನ ಮಾಡುತ್ತಿದ್ದೇವೆ' ಎಂದು ಸಿಂಗ್ ಹೇಳಿದ್ದಾರೆ.</p>.<p>ಯುದ್ಧಪೀಡಿತ ಉಕ್ರೇನ್ನಿಂದ ಜನರನ್ನು ಸ್ಥಳಾಂತರಿಸುವ ಪ್ರಕ್ರಿಯೆಯ ಮೇಲ್ವಿಚಾರಣೆ ಸಲುವಾಗಿ, ಉಕ್ರೇನ್ನ ನೆರೆಹೊರೆ ರಾಷ್ಟ್ರಗಳಿಗೆ ತೆರಳಿರುವ ಕೇಂದ್ರದ ನಾಲ್ವರು ಸಚಿವರ ನಿಯೋಗದಲ್ಲಿ ಸಿಂಗ್ ಅವರೂ ಇದ್ದಾರೆ.</p>.<p>ಕರ್ನಾಟಕದ ವೈದ್ಯಕೀಯ ವಿದ್ಯಾರ್ಥಿ ನವೀನ್ ಎಸ್.ಜಿ. ಎನ್ನುವವರುಮಾರ್ಚ್ 1ರಂದು ಹಾರ್ಕಿವ್ ನಗರದಲ್ಲಿ ನಡೆದ ಷೆಲ್ ದಾಳಿಯಿಂದಾಗಿ ಮೃತಪಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>