<p><strong>ಬರ್ಲಿನ್:</strong> ‘ರಷ್ಯಾ-ಉಕ್ರೇನ್ ಸಂಘರ್ಷದಲ್ಲಿ ಯಾರೂ ಗೆಲ್ಲುವುದಿಲ್ಲ. ಎಲ್ಲರೂ ನಷ್ಟ ಅನುಭವಿಸುತ್ತಾರೆ.ಭಾರತವು ಯಾವಾಗಲೂ ಶಾಂತಿಯ ಪರವಿರುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರಪ್ರತಿಪಾದಿಸಿದರು.</p>.<p>ಇಲ್ಲಿ ಜರ್ಮನಿಯ ಛಾನ್ಸೆಲರ್ ಒಲಾಫ್ ಸ್ಕೋಲ್ಜ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಮೋದಿ, ‘ಉಕ್ರೇನ್ ಬಿಕ್ಕಟ್ಟಿನ ಆರಂಭದಿಂದಲೂ ತಕ್ಷಣವೇ ಯುದ್ಧ ನಿಲ್ಲಿಸಲು ಭಾರತ ಒತ್ತಾಯಿಸಿದೆ. ಸಂಘರ್ಷ ಶಮನಗೊಳಿಸಲು ಮಾತುಕತೆಯೊಂದೇ ಪರಿಹಾರವೆಂದು ಒತ್ತಿ ಹೇಳಿದೆ’ ಎಂದರು.</p>.<p>‘ಉಕ್ರೇನ್ ಬಿಕ್ಕಟ್ಟಿನಿಂದಾಗಿ ತೈಲ ಬೆಲೆಗಳು ರಾಕೆಟ್ ವೇಗದಲ್ಲಿ ಗಗನಕ್ಕೇರುತ್ತಿವೆ. ಆಹಾರ ಧಾನ್ಯಗಳು ಮತ್ತು ರಸಗೊಬ್ಬರಗಳ ಕೊರತೆಯ ಪರಿಣಾಮ ಪ್ರಪಂಚದ ಪ್ರತಿ ಕುಟುಂಬದ ಮೇಲೂ ಹೊರೆ ಬಿದ್ದಿದೆ. ಅಭಿವೃದ್ಧಿಶೀಲ ಮತ್ತು ಬಡ ರಾಷ್ಟ್ರಗಳ ಮೇಲೆ ಈ ಬಿಕ್ಕಟ್ಟು ಹೆಚ್ಚಿನ ಪರಿಣಾಮ ಉಂಟು ಮಾಡಿದೆ’ ಎಂದು ಅವರು ಹೇಳಿದರು.</p>.<p>ಉಕ್ರೇನ್ ಸಂಘರ್ಷದಿಂದ ತಲೆದೋರಿರುವ ಮಾನವೀಯ ಪರಿಣಾಮಗಳ ಬಗ್ಗೆ ಭಾರತಕ್ಕೂ ಕಳ<br />ವಳವಿದೆ.ಸಂಕೀರ್ಣವಾದ ಜಗತ್ತಿನಲ್ಲಿ ಭಾರತ ಮತ್ತು ಜರ್ಮನಿ ನಡುವಿನ ಪಾಲುದಾರಿಕೆಯು ಯಶಸ್ಸಿನ ಉದಾಹರಣೆಯಾಗಿ ಕಾಣಿಸುತ್ತಿದೆ ಎಂದು ಮೋದಿ ಹೇಳಿದರು.</p>.<p class="Subhead">ದ್ವಿಪಕ್ಷೀಯ ಸಹಕಾರ: ರಕ್ಷಣಾ ಪಾಲುದಾರಿಕೆಗೆ ದ್ವಿಪಕ್ಷೀಯ ಸಹಕಾರ,ಪ್ರಾದೇಶಿಕ ಮತ್ತು ಜಾಗತಿಕ ಬೆಳವಣಿಗೆಗಳ ಕುರಿತು ಉಭಯ ನಾಯಕರು ಚರ್ಚೆ ನಡೆಸಿದರು.</p>.<p>ಒಲಾಫ್ ಅವರೊಂದಿಗೆಮಾತುಕತೆ ನಡೆಸಿದ ನಂತರ ಪ್ರಧಾನಿ ಮೋದಿ, ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಭಾರತ ಮತ್ತು ಜರ್ಮನಿ ಹಲವು ಸಮಾನ ಮೌಲ್ಯಗಳನ್ನು ಹೊಂದಿವೆ. ಐರೋಪ್ಯ ಒಕ್ಕೂಟದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆ<br />ಗಳಲ್ಲಿ ತ್ವರಿತ ಪ್ರಗತಿಗೆ ಭಾರತ ಬದ್ಧವಾಗಿದೆ. ಹಸಿರು ಹೈಡ್ರೋಜನ್ ಕಾರ್ಯಪಡೆಯನ್ನು ಸ್ಥಾಪಿಸಲು ಉಭಯ ರಾಷ್ಟ್ರಗಳು ನಿರ್ಧರಿಸಿವೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬರ್ಲಿನ್:</strong> ‘ರಷ್ಯಾ-ಉಕ್ರೇನ್ ಸಂಘರ್ಷದಲ್ಲಿ ಯಾರೂ ಗೆಲ್ಲುವುದಿಲ್ಲ. ಎಲ್ಲರೂ ನಷ್ಟ ಅನುಭವಿಸುತ್ತಾರೆ.ಭಾರತವು ಯಾವಾಗಲೂ ಶಾಂತಿಯ ಪರವಿರುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರಪ್ರತಿಪಾದಿಸಿದರು.</p>.<p>ಇಲ್ಲಿ ಜರ್ಮನಿಯ ಛಾನ್ಸೆಲರ್ ಒಲಾಫ್ ಸ್ಕೋಲ್ಜ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಮೋದಿ, ‘ಉಕ್ರೇನ್ ಬಿಕ್ಕಟ್ಟಿನ ಆರಂಭದಿಂದಲೂ ತಕ್ಷಣವೇ ಯುದ್ಧ ನಿಲ್ಲಿಸಲು ಭಾರತ ಒತ್ತಾಯಿಸಿದೆ. ಸಂಘರ್ಷ ಶಮನಗೊಳಿಸಲು ಮಾತುಕತೆಯೊಂದೇ ಪರಿಹಾರವೆಂದು ಒತ್ತಿ ಹೇಳಿದೆ’ ಎಂದರು.</p>.<p>‘ಉಕ್ರೇನ್ ಬಿಕ್ಕಟ್ಟಿನಿಂದಾಗಿ ತೈಲ ಬೆಲೆಗಳು ರಾಕೆಟ್ ವೇಗದಲ್ಲಿ ಗಗನಕ್ಕೇರುತ್ತಿವೆ. ಆಹಾರ ಧಾನ್ಯಗಳು ಮತ್ತು ರಸಗೊಬ್ಬರಗಳ ಕೊರತೆಯ ಪರಿಣಾಮ ಪ್ರಪಂಚದ ಪ್ರತಿ ಕುಟುಂಬದ ಮೇಲೂ ಹೊರೆ ಬಿದ್ದಿದೆ. ಅಭಿವೃದ್ಧಿಶೀಲ ಮತ್ತು ಬಡ ರಾಷ್ಟ್ರಗಳ ಮೇಲೆ ಈ ಬಿಕ್ಕಟ್ಟು ಹೆಚ್ಚಿನ ಪರಿಣಾಮ ಉಂಟು ಮಾಡಿದೆ’ ಎಂದು ಅವರು ಹೇಳಿದರು.</p>.<p>ಉಕ್ರೇನ್ ಸಂಘರ್ಷದಿಂದ ತಲೆದೋರಿರುವ ಮಾನವೀಯ ಪರಿಣಾಮಗಳ ಬಗ್ಗೆ ಭಾರತಕ್ಕೂ ಕಳ<br />ವಳವಿದೆ.ಸಂಕೀರ್ಣವಾದ ಜಗತ್ತಿನಲ್ಲಿ ಭಾರತ ಮತ್ತು ಜರ್ಮನಿ ನಡುವಿನ ಪಾಲುದಾರಿಕೆಯು ಯಶಸ್ಸಿನ ಉದಾಹರಣೆಯಾಗಿ ಕಾಣಿಸುತ್ತಿದೆ ಎಂದು ಮೋದಿ ಹೇಳಿದರು.</p>.<p class="Subhead">ದ್ವಿಪಕ್ಷೀಯ ಸಹಕಾರ: ರಕ್ಷಣಾ ಪಾಲುದಾರಿಕೆಗೆ ದ್ವಿಪಕ್ಷೀಯ ಸಹಕಾರ,ಪ್ರಾದೇಶಿಕ ಮತ್ತು ಜಾಗತಿಕ ಬೆಳವಣಿಗೆಗಳ ಕುರಿತು ಉಭಯ ನಾಯಕರು ಚರ್ಚೆ ನಡೆಸಿದರು.</p>.<p>ಒಲಾಫ್ ಅವರೊಂದಿಗೆಮಾತುಕತೆ ನಡೆಸಿದ ನಂತರ ಪ್ರಧಾನಿ ಮೋದಿ, ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಭಾರತ ಮತ್ತು ಜರ್ಮನಿ ಹಲವು ಸಮಾನ ಮೌಲ್ಯಗಳನ್ನು ಹೊಂದಿವೆ. ಐರೋಪ್ಯ ಒಕ್ಕೂಟದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆ<br />ಗಳಲ್ಲಿ ತ್ವರಿತ ಪ್ರಗತಿಗೆ ಭಾರತ ಬದ್ಧವಾಗಿದೆ. ಹಸಿರು ಹೈಡ್ರೋಜನ್ ಕಾರ್ಯಪಡೆಯನ್ನು ಸ್ಥಾಪಿಸಲು ಉಭಯ ರಾಷ್ಟ್ರಗಳು ನಿರ್ಧರಿಸಿವೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>